Homeಎಕಾನಮಿಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? - ವಿವರ ಇಲ್ಲಿದೆ!

ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ

- Advertisement -
- Advertisement -

ಕೊರೊನಾ ಸಂದರ್ಭದ ಆರ್ಥಿಕ ಹಿನ್ನಡೆಯನ್ನು ಸರಿದೂಗಿಸುವ ಸಲುವಾಗಿ ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಚುನಾವಣೆಯ ಜುಮ್ಲಾ – ಪ್ರತಿಯೊಬ್ಬರ ಅಕೌಂಟಿಗೂ 15 ಲಕ್ಷ, ಕೊರೊನಾ ಜುಮ್ಲಾ – 20 ಲಕ್ಷ ಕೋಟಿ ಪ್ಯಾಕೇಜ್” ಎಂದು ಟ್ವೀಟ್ ಮಾಡಿ ಪತ್ರಿಕಾ ವರದಿಯೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

ಮೊದಲೇ ಇಳಿಮುಖವಾಗುತ್ತಿದ್ದ ಆರ್ಥಿಕತೆ ಕೊರೋನಾ ಸಾಂಕ್ರಾಮಿಕ ರೋಗದಿಂದ ಮತ್ತಷ್ಟು ಇಳಿಯತೊಡಗಿತು. ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ಸರಿಯಾದ ನಿರ್ವಹಣೆಯಿಲ್ಲದೇ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಈ ಸಮಸ್ಯೆಯಿಂದ ಹೊರಬರುಲು ಕೇಂದ್ರ ಸರ್ಕಾರ 20 ಲಕ್ಷ ಕೋಟಿಯ ಆರ್ಥಿಕ ಉತ್ತೇಜಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಈ ಪ್ಯಾಕೇಜ್‌ನ ವಿವರಗಳನ್ನು ಕೋರಿ ಪುಣೆಯ ಉದ್ಯಮಿ ಪ್ರಫುಲ್ ಸರ್ದಾ ಎಂಬುವವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ಕೋರಿದ್ದರು. ಇದರಲ್ಲಿ ಕೆಲವು ಅಚ್ಚರಿಯ ಅಂಶಗಳು ಬಹಿರಂಗವಾಗಿವೆ.

ಈ ಬೃಹತ್ ಪ್ಯಾಕೇಜ್ ವಿತರಣೆಯ ಅಡಿಯಲ್ಲಿ, ವಲಯವಾರು ಮತ್ತು ರಾಜ್ಯವಾರು ನೀಡಬೇಕಾಗಿರುವ ಯಾವುದೇ ಬಾಕಿ ಮೊತ್ತವು ಬಾಕಿ ಉಳಿದಿದೆಯೇ ಎಂಬ ವಿವರಗಳನ್ನು ಕೋರಲಾಗಿತ್ತು.

ಇದನ್ನೂ ಓದಿ: ಇರುವ ಯೋಜನೆಗಳ ರೀಪ್ಯಾಕೇಜೇ ಹೊಸ ಪ್ಯಾಕೇಜ್: ಆರ್ಥಿಕತೆ ಮತ್ತಷ್ಟು ಕುಸಿಯುವುದರಲ್ಲಿ ಅನುಮಾನವಿಲ್ಲ

ಆತ್ಮನಿರ್ಭರ ಭಾರತ್ ಅಭಿಯಾನದ ಅಡಿಯಲ್ಲಿ, ತುರ್ತು ಕ್ರೆಡಿಟ್ ಲೈನ್ ಖಾತರಿ ಯೋಜನೆಯನ್ನು (ECLGS) ಪರಿಚಯಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ಯೋಜನೆಯಡಿಯಲ್ಲಿ ಅಕ್ಟೋಬರ್ 31 ರವರೆಗೆ 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ ಸರ್ಕಾರವು ವಿವಿಧ ರಾಜ್ಯಗಳಿಗೆ ಸಾಲವಾಗಿ ಸುಮಾರು 1.20 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ ಎಂದು ತಿಳಿದುಬಂದಿದೆ.

“ಸರ್ಕಾರವು 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಸುಮಾರು ಶೇಕಡಾ 40ರಷ್ಟನ್ನು (1.20 ಲಕ್ಷ ಕೋಟಿ) ವಿತರಿಸಲಾಗಿದೆ. ದೊಡ್ಡ ಪ್ರಶ್ನೆಯೆಂದರೆ – ಈ ದೊಡ್ಡ ಪ್ಯಾಕೇಜ್‌ನಲ್ಲಿ ಉಳಿದ 17 ಲಕ್ಷ ಕೋಟಿ ರೂ. ಏನಾಯಿತು. ಈ ಯೋಜನೆ ಘೋಷಿಸಿ 7 ತಿಂಗಳ ನಂತರ ಇದು ಬಹಿರಂಗವಾಗಿದೆ. ಇದು ಭಾರತೀಯ ಜನರಿಗೆ ಮಾಡಿದ ಮತ್ತೊಂದು ವಂಚನೆಯೇ (ಜುಮ್ಲಾ)”ಎಂದು ಸರ್ದಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

“ಇಡೀ ದೇಶವು, ಕಳೆದ 10 ತಿಂಗಳುಗಳಿಂದ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಮತ್ತು ಲಾಕ್‌ಡೌನ್‌ನ ನಂತರದ ಪರಿಣಾಮಗಳಿಂದ ತತ್ತರಿಸುತ್ತಿದೆ. ಕೋಟ್ಯಂತರ ವ್ಯಕ್ತಿಗಳು, ಅವರ ಕುಟುಂಬಗಳು ಮತ್ತು ವ್ಯವಹಾರಗಳು ತೊಂದರೆ ಅನುಭವಿಸುತ್ತಿವೆ. ಆದರೆ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಕೇಂದ್ರವು ಇನ್ನೂ ಸಾಕಷ್ಟು ಹಣವನ್ನು ಮಂಜೂರು ಮಾಡಿಲ್ಲ” ಸರ್ದಾ ಹೇಳಿದರು.

ದೇಶದ ಆರ್ಥಿಕ ತಜ್ಞರು, ಕೇಂದ್ರ ಸರ್ಕಾರದ ಈ ಯೋಜನೆಯನ್ನು ವಾಸ್ತವದಲ್ಲಿ ಇದು ಸಾಧ್ಯವಾಗುವುದಿಲ್ಲ ಟೀಕಿಸಿದ್ದರು. ಆದರೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಅದರ ವಕ್ತಾರರು ಈ ಯೋಜನೆಯ ಬಗ್ಗೆ ಸಾಕಷ್ಟು ಪ್ರಚಾರ ನಡೆಸಿದರು. ಆದರೆ ಇಷ್ಟು ದಿನಗಳ ನಂತರ ಬಹಿರಂಗಗೊಂಡಿರುವ ಮಾಹಿತಿಯನ್ನು ಅವಲೋಕಿಸಿದಾಗ 20 ಲಕ್ಷ ಕೋಟಿಯ ಯೋಜನೆ ಚುನಾವಣಾ ಪ್ರಣಾಳಿಕೆಯಂತಾಗಿದೆ ಎಂಬುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...