Homeಎಕಾನಮಿಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? - ವಿವರ ಇಲ್ಲಿದೆ!

ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ

- Advertisement -
- Advertisement -

ಕೊರೊನಾ ಸಂದರ್ಭದ ಆರ್ಥಿಕ ಹಿನ್ನಡೆಯನ್ನು ಸರಿದೂಗಿಸುವ ಸಲುವಾಗಿ ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಚುನಾವಣೆಯ ಜುಮ್ಲಾ – ಪ್ರತಿಯೊಬ್ಬರ ಅಕೌಂಟಿಗೂ 15 ಲಕ್ಷ, ಕೊರೊನಾ ಜುಮ್ಲಾ – 20 ಲಕ್ಷ ಕೋಟಿ ಪ್ಯಾಕೇಜ್” ಎಂದು ಟ್ವೀಟ್ ಮಾಡಿ ಪತ್ರಿಕಾ ವರದಿಯೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

ಮೊದಲೇ ಇಳಿಮುಖವಾಗುತ್ತಿದ್ದ ಆರ್ಥಿಕತೆ ಕೊರೋನಾ ಸಾಂಕ್ರಾಮಿಕ ರೋಗದಿಂದ ಮತ್ತಷ್ಟು ಇಳಿಯತೊಡಗಿತು. ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ಸರಿಯಾದ ನಿರ್ವಹಣೆಯಿಲ್ಲದೇ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಈ ಸಮಸ್ಯೆಯಿಂದ ಹೊರಬರುಲು ಕೇಂದ್ರ ಸರ್ಕಾರ 20 ಲಕ್ಷ ಕೋಟಿಯ ಆರ್ಥಿಕ ಉತ್ತೇಜಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಈ ಪ್ಯಾಕೇಜ್‌ನ ವಿವರಗಳನ್ನು ಕೋರಿ ಪುಣೆಯ ಉದ್ಯಮಿ ಪ್ರಫುಲ್ ಸರ್ದಾ ಎಂಬುವವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ಕೋರಿದ್ದರು. ಇದರಲ್ಲಿ ಕೆಲವು ಅಚ್ಚರಿಯ ಅಂಶಗಳು ಬಹಿರಂಗವಾಗಿವೆ.

ಈ ಬೃಹತ್ ಪ್ಯಾಕೇಜ್ ವಿತರಣೆಯ ಅಡಿಯಲ್ಲಿ, ವಲಯವಾರು ಮತ್ತು ರಾಜ್ಯವಾರು ನೀಡಬೇಕಾಗಿರುವ ಯಾವುದೇ ಬಾಕಿ ಮೊತ್ತವು ಬಾಕಿ ಉಳಿದಿದೆಯೇ ಎಂಬ ವಿವರಗಳನ್ನು ಕೋರಲಾಗಿತ್ತು.

ಇದನ್ನೂ ಓದಿ: ಇರುವ ಯೋಜನೆಗಳ ರೀಪ್ಯಾಕೇಜೇ ಹೊಸ ಪ್ಯಾಕೇಜ್: ಆರ್ಥಿಕತೆ ಮತ್ತಷ್ಟು ಕುಸಿಯುವುದರಲ್ಲಿ ಅನುಮಾನವಿಲ್ಲ

ಆತ್ಮನಿರ್ಭರ ಭಾರತ್ ಅಭಿಯಾನದ ಅಡಿಯಲ್ಲಿ, ತುರ್ತು ಕ್ರೆಡಿಟ್ ಲೈನ್ ಖಾತರಿ ಯೋಜನೆಯನ್ನು (ECLGS) ಪರಿಚಯಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ಯೋಜನೆಯಡಿಯಲ್ಲಿ ಅಕ್ಟೋಬರ್ 31 ರವರೆಗೆ 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ ಸರ್ಕಾರವು ವಿವಿಧ ರಾಜ್ಯಗಳಿಗೆ ಸಾಲವಾಗಿ ಸುಮಾರು 1.20 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ ಎಂದು ತಿಳಿದುಬಂದಿದೆ.

“ಸರ್ಕಾರವು 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಸುಮಾರು ಶೇಕಡಾ 40ರಷ್ಟನ್ನು (1.20 ಲಕ್ಷ ಕೋಟಿ) ವಿತರಿಸಲಾಗಿದೆ. ದೊಡ್ಡ ಪ್ರಶ್ನೆಯೆಂದರೆ – ಈ ದೊಡ್ಡ ಪ್ಯಾಕೇಜ್‌ನಲ್ಲಿ ಉಳಿದ 17 ಲಕ್ಷ ಕೋಟಿ ರೂ. ಏನಾಯಿತು. ಈ ಯೋಜನೆ ಘೋಷಿಸಿ 7 ತಿಂಗಳ ನಂತರ ಇದು ಬಹಿರಂಗವಾಗಿದೆ. ಇದು ಭಾರತೀಯ ಜನರಿಗೆ ಮಾಡಿದ ಮತ್ತೊಂದು ವಂಚನೆಯೇ (ಜುಮ್ಲಾ)”ಎಂದು ಸರ್ದಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

“ಇಡೀ ದೇಶವು, ಕಳೆದ 10 ತಿಂಗಳುಗಳಿಂದ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಮತ್ತು ಲಾಕ್‌ಡೌನ್‌ನ ನಂತರದ ಪರಿಣಾಮಗಳಿಂದ ತತ್ತರಿಸುತ್ತಿದೆ. ಕೋಟ್ಯಂತರ ವ್ಯಕ್ತಿಗಳು, ಅವರ ಕುಟುಂಬಗಳು ಮತ್ತು ವ್ಯವಹಾರಗಳು ತೊಂದರೆ ಅನುಭವಿಸುತ್ತಿವೆ. ಆದರೆ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಕೇಂದ್ರವು ಇನ್ನೂ ಸಾಕಷ್ಟು ಹಣವನ್ನು ಮಂಜೂರು ಮಾಡಿಲ್ಲ” ಸರ್ದಾ ಹೇಳಿದರು.

ದೇಶದ ಆರ್ಥಿಕ ತಜ್ಞರು, ಕೇಂದ್ರ ಸರ್ಕಾರದ ಈ ಯೋಜನೆಯನ್ನು ವಾಸ್ತವದಲ್ಲಿ ಇದು ಸಾಧ್ಯವಾಗುವುದಿಲ್ಲ ಟೀಕಿಸಿದ್ದರು. ಆದರೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಅದರ ವಕ್ತಾರರು ಈ ಯೋಜನೆಯ ಬಗ್ಗೆ ಸಾಕಷ್ಟು ಪ್ರಚಾರ ನಡೆಸಿದರು. ಆದರೆ ಇಷ್ಟು ದಿನಗಳ ನಂತರ ಬಹಿರಂಗಗೊಂಡಿರುವ ಮಾಹಿತಿಯನ್ನು ಅವಲೋಕಿಸಿದಾಗ 20 ಲಕ್ಷ ಕೋಟಿಯ ಯೋಜನೆ ಚುನಾವಣಾ ಪ್ರಣಾಳಿಕೆಯಂತಾಗಿದೆ ಎಂಬುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...