Homeಎಕಾನಮಿಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? - ವಿವರ ಇಲ್ಲಿದೆ!

ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ

- Advertisement -
- Advertisement -

ಕೊರೊನಾ ಸಂದರ್ಭದ ಆರ್ಥಿಕ ಹಿನ್ನಡೆಯನ್ನು ಸರಿದೂಗಿಸುವ ಸಲುವಾಗಿ ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಚುನಾವಣೆಯ ಜುಮ್ಲಾ – ಪ್ರತಿಯೊಬ್ಬರ ಅಕೌಂಟಿಗೂ 15 ಲಕ್ಷ, ಕೊರೊನಾ ಜುಮ್ಲಾ – 20 ಲಕ್ಷ ಕೋಟಿ ಪ್ಯಾಕೇಜ್” ಎಂದು ಟ್ವೀಟ್ ಮಾಡಿ ಪತ್ರಿಕಾ ವರದಿಯೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

ಮೊದಲೇ ಇಳಿಮುಖವಾಗುತ್ತಿದ್ದ ಆರ್ಥಿಕತೆ ಕೊರೋನಾ ಸಾಂಕ್ರಾಮಿಕ ರೋಗದಿಂದ ಮತ್ತಷ್ಟು ಇಳಿಯತೊಡಗಿತು. ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ಸರಿಯಾದ ನಿರ್ವಹಣೆಯಿಲ್ಲದೇ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಈ ಸಮಸ್ಯೆಯಿಂದ ಹೊರಬರುಲು ಕೇಂದ್ರ ಸರ್ಕಾರ 20 ಲಕ್ಷ ಕೋಟಿಯ ಆರ್ಥಿಕ ಉತ್ತೇಜಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಈ ಪ್ಯಾಕೇಜ್‌ನ ವಿವರಗಳನ್ನು ಕೋರಿ ಪುಣೆಯ ಉದ್ಯಮಿ ಪ್ರಫುಲ್ ಸರ್ದಾ ಎಂಬುವವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ಕೋರಿದ್ದರು. ಇದರಲ್ಲಿ ಕೆಲವು ಅಚ್ಚರಿಯ ಅಂಶಗಳು ಬಹಿರಂಗವಾಗಿವೆ.

ಈ ಬೃಹತ್ ಪ್ಯಾಕೇಜ್ ವಿತರಣೆಯ ಅಡಿಯಲ್ಲಿ, ವಲಯವಾರು ಮತ್ತು ರಾಜ್ಯವಾರು ನೀಡಬೇಕಾಗಿರುವ ಯಾವುದೇ ಬಾಕಿ ಮೊತ್ತವು ಬಾಕಿ ಉಳಿದಿದೆಯೇ ಎಂಬ ವಿವರಗಳನ್ನು ಕೋರಲಾಗಿತ್ತು.

ಇದನ್ನೂ ಓದಿ: ಇರುವ ಯೋಜನೆಗಳ ರೀಪ್ಯಾಕೇಜೇ ಹೊಸ ಪ್ಯಾಕೇಜ್: ಆರ್ಥಿಕತೆ ಮತ್ತಷ್ಟು ಕುಸಿಯುವುದರಲ್ಲಿ ಅನುಮಾನವಿಲ್ಲ

ಆತ್ಮನಿರ್ಭರ ಭಾರತ್ ಅಭಿಯಾನದ ಅಡಿಯಲ್ಲಿ, ತುರ್ತು ಕ್ರೆಡಿಟ್ ಲೈನ್ ಖಾತರಿ ಯೋಜನೆಯನ್ನು (ECLGS) ಪರಿಚಯಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ಯೋಜನೆಯಡಿಯಲ್ಲಿ ಅಕ್ಟೋಬರ್ 31 ರವರೆಗೆ 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ ಸರ್ಕಾರವು ವಿವಿಧ ರಾಜ್ಯಗಳಿಗೆ ಸಾಲವಾಗಿ ಸುಮಾರು 1.20 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ ಎಂದು ತಿಳಿದುಬಂದಿದೆ.

“ಸರ್ಕಾರವು 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಸುಮಾರು ಶೇಕಡಾ 40ರಷ್ಟನ್ನು (1.20 ಲಕ್ಷ ಕೋಟಿ) ವಿತರಿಸಲಾಗಿದೆ. ದೊಡ್ಡ ಪ್ರಶ್ನೆಯೆಂದರೆ – ಈ ದೊಡ್ಡ ಪ್ಯಾಕೇಜ್‌ನಲ್ಲಿ ಉಳಿದ 17 ಲಕ್ಷ ಕೋಟಿ ರೂ. ಏನಾಯಿತು. ಈ ಯೋಜನೆ ಘೋಷಿಸಿ 7 ತಿಂಗಳ ನಂತರ ಇದು ಬಹಿರಂಗವಾಗಿದೆ. ಇದು ಭಾರತೀಯ ಜನರಿಗೆ ಮಾಡಿದ ಮತ್ತೊಂದು ವಂಚನೆಯೇ (ಜುಮ್ಲಾ)”ಎಂದು ಸರ್ದಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

“ಇಡೀ ದೇಶವು, ಕಳೆದ 10 ತಿಂಗಳುಗಳಿಂದ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಮತ್ತು ಲಾಕ್‌ಡೌನ್‌ನ ನಂತರದ ಪರಿಣಾಮಗಳಿಂದ ತತ್ತರಿಸುತ್ತಿದೆ. ಕೋಟ್ಯಂತರ ವ್ಯಕ್ತಿಗಳು, ಅವರ ಕುಟುಂಬಗಳು ಮತ್ತು ವ್ಯವಹಾರಗಳು ತೊಂದರೆ ಅನುಭವಿಸುತ್ತಿವೆ. ಆದರೆ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಕೇಂದ್ರವು ಇನ್ನೂ ಸಾಕಷ್ಟು ಹಣವನ್ನು ಮಂಜೂರು ಮಾಡಿಲ್ಲ” ಸರ್ದಾ ಹೇಳಿದರು.

ದೇಶದ ಆರ್ಥಿಕ ತಜ್ಞರು, ಕೇಂದ್ರ ಸರ್ಕಾರದ ಈ ಯೋಜನೆಯನ್ನು ವಾಸ್ತವದಲ್ಲಿ ಇದು ಸಾಧ್ಯವಾಗುವುದಿಲ್ಲ ಟೀಕಿಸಿದ್ದರು. ಆದರೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಅದರ ವಕ್ತಾರರು ಈ ಯೋಜನೆಯ ಬಗ್ಗೆ ಸಾಕಷ್ಟು ಪ್ರಚಾರ ನಡೆಸಿದರು. ಆದರೆ ಇಷ್ಟು ದಿನಗಳ ನಂತರ ಬಹಿರಂಗಗೊಂಡಿರುವ ಮಾಹಿತಿಯನ್ನು ಅವಲೋಕಿಸಿದಾಗ 20 ಲಕ್ಷ ಕೋಟಿಯ ಯೋಜನೆ ಚುನಾವಣಾ ಪ್ರಣಾಳಿಕೆಯಂತಾಗಿದೆ ಎಂಬುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...