Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

ರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

- Advertisement -
- Advertisement -

ಭಾನುವಾರ ಪ್ರಕಟಗೊಂಡ ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 20 ಮಹಿಳೆಯರು ಜಯಗಳಿಸಿದ್ದಾರೆ. ಈ ಬಾರಿ ವಿವಿಧ ಪಕ್ಷಗಳಿಂದ ಒಟ್ಟು 50 ಮಹಿಳೆಯರು ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ವಿಧಾನಸಭೆಗೆ ಹೋಲಿಸಿದರೆ, ಈ ಬಾರಿ ಮಹಿಳಾ ಶಾಸಕಿಯರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ ಬಾರಿ 24 ಜನ ಮಹಿಳಾ ಶಾಸಕಿಯರಿದ್ದರು.

ಈ ಬಾರಿ ಗೆದ್ದಿರುವ ಮಹಿಳೆಯರ ಪೈಕಿ ತಲಾ ಒಂಬತ್ತು ಮಂದಿ ಬಿಜೆಪಿ ಮತ್ತು ಕಾಂಗ್ರೆಸ್‌ ಹಾಗೂ ಇಬ್ಬರು ಪಕ್ಷೇತರರು. ಒಟ್ಟು 50 ಮಹಿಳಾ ಅಭ್ಯರ್ಥಿಗಳಲ್ಲಿ ಬಿಜೆಪಿಯಿಂದ 20, ಕಾಂಗ್ರೆಸ್‌ನಿಂದ 28 ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಒಂಬತ್ತು ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳೆಂದರೆ, ಶಿಮ್ಲಾ ದೇವಿ (ಅನುಪುಗಢ), ಸುಶೀಲಾ ದುಡಿ (ನೋಖಾ), ರೀಟಾ ಚೌಧರಿ (ಮಾಂಡವಾ), ಶಿಕಾ ಮೀಲ್ ಬರಾಲಾ (ಚೋಮು), ಶೋಭಾರಾಣಿ ಕುಶ್ವಾಹ್ (ಧೋಲ್ಪುರ್), ಅನಿತಾ ಜಾತವ್ (ಹಿಂದೌನ್), ಇಂದ್ರ (ಬಮನ್ವಾಸ್), ಗೀತಾ ಬರ್ವಾರ್. (ಭೋಪಾಲ್ಗಢ), ಮತ್ತು ರಮಿಲಾ ಖಾಡಿಯಾ (ಕುಶಾಲ್ಗಢ). ಬಿಜೆಪಿಯ ಮಹಿಳಾ ಅಭ್ಯರ್ಥಿಗಳೆಂದರೆ, ದಿಯಾ ಕುಮಾರಿ (ವಿದ್ಯಾಧರ್ ನಗರ), ಅನಿತಾ ಭಾದೆಲ್ (ಅಜ್ಮೀರ್ ಸೌತ್), ಮಂಜು ಬಾಗ್ಮಾರ್ (ಜಯಾಲ್), ಶೋಭಾ ಚೌಹಾಣ್ (ಸೋಜತ್), ದೀಪ್ತಿ ಕಿರಣ್ ಮಹೇಶ್ವರಿ (ರಾಜಸಮಂದ್), ಕಲ್ಪನಾ ದೇವಿ (ಲಾದ್‌ಪುರ), ವಸುಂಧರಾ ರಾಜೇ ( ಝಲ್ರಾಪಟನ್), ಸಿದ್ಧಿ ಕುಮಾರಿ (ಬಿಕಾನೇರ್ ಪೂರ್ವ), ನೌಕ್ಷಮ್ ಚೌಧರಿ (ಕಮಾನ್). ರಿತು ಬನಾವತ್ (ಬಯಾನಾ) ಮತ್ತು ಪ್ರಿಯಾಂಕಾ ಚೌಧರಿ (ಬಾರ್ಮರ್) ಪಕ್ಷೇತರರಾಗಿ ಗೆದ್ದಿದ್ದಾರೆ.

ಕಳೆದ 15ನೇ ವಿಧಾನಸಭೆ 24 ಮಹಿಳಾ ಸದಸ್ಯರನ್ನು ಹೊಂದಿತ್ತು. ಈ ಪೈಕಿ ಕಾಂಗ್ರೆಸ್‌ನ 12, ಬಿಜೆಪಿಯ 10, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ದಿಂದ ಒಬ್ಬರು ಮತ್ತು ಸ್ವತಂತ್ರ ಒಬ್ಬರು ಇದ್ದರು.

ಕಳೆದ ವಾರ ನಡೆದಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, 199 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗೆದ್ದು ಬಿಜೆಪಿ ಸರ್ಕಾರ ರಚಿಸಲು ಅಣಿಯಾಗಿದೆ. ರಾಜ್ಯದಲ್ಲಿ ಐದು ವರ್ಷಕೊಮ್ಮೆ ಸರ್ಕಾರ ಬದಲಾಗುವ ಸಂಪ್ರದಾಯದಂತೆ ಈ ಬಾರಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ಈ ಬಾರಿ 68 ಸ್ಥಾನಗಳನ್ನು ಪಡೆದಿದೆ. ಭಾರತ ಆದಿವಾಸಿ ಪಕ್ಷವು ಮೂರು ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷವು ಎರಡು ಸ್ಥಾನಗಳನ್ನು ಮತ್ತು ರಾಷ್ಟ್ರೀಯ ಲೋಕದಳ ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಎಂಟು ಸ್ಥಾನಗಳನ್ನು ಸ್ವತಂತ್ರರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...