Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

ರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

- Advertisement -
- Advertisement -

ಭಾನುವಾರ ಪ್ರಕಟಗೊಂಡ ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 20 ಮಹಿಳೆಯರು ಜಯಗಳಿಸಿದ್ದಾರೆ. ಈ ಬಾರಿ ವಿವಿಧ ಪಕ್ಷಗಳಿಂದ ಒಟ್ಟು 50 ಮಹಿಳೆಯರು ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ವಿಧಾನಸಭೆಗೆ ಹೋಲಿಸಿದರೆ, ಈ ಬಾರಿ ಮಹಿಳಾ ಶಾಸಕಿಯರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ ಬಾರಿ 24 ಜನ ಮಹಿಳಾ ಶಾಸಕಿಯರಿದ್ದರು.

ಈ ಬಾರಿ ಗೆದ್ದಿರುವ ಮಹಿಳೆಯರ ಪೈಕಿ ತಲಾ ಒಂಬತ್ತು ಮಂದಿ ಬಿಜೆಪಿ ಮತ್ತು ಕಾಂಗ್ರೆಸ್‌ ಹಾಗೂ ಇಬ್ಬರು ಪಕ್ಷೇತರರು. ಒಟ್ಟು 50 ಮಹಿಳಾ ಅಭ್ಯರ್ಥಿಗಳಲ್ಲಿ ಬಿಜೆಪಿಯಿಂದ 20, ಕಾಂಗ್ರೆಸ್‌ನಿಂದ 28 ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಒಂಬತ್ತು ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳೆಂದರೆ, ಶಿಮ್ಲಾ ದೇವಿ (ಅನುಪುಗಢ), ಸುಶೀಲಾ ದುಡಿ (ನೋಖಾ), ರೀಟಾ ಚೌಧರಿ (ಮಾಂಡವಾ), ಶಿಕಾ ಮೀಲ್ ಬರಾಲಾ (ಚೋಮು), ಶೋಭಾರಾಣಿ ಕುಶ್ವಾಹ್ (ಧೋಲ್ಪುರ್), ಅನಿತಾ ಜಾತವ್ (ಹಿಂದೌನ್), ಇಂದ್ರ (ಬಮನ್ವಾಸ್), ಗೀತಾ ಬರ್ವಾರ್. (ಭೋಪಾಲ್ಗಢ), ಮತ್ತು ರಮಿಲಾ ಖಾಡಿಯಾ (ಕುಶಾಲ್ಗಢ). ಬಿಜೆಪಿಯ ಮಹಿಳಾ ಅಭ್ಯರ್ಥಿಗಳೆಂದರೆ, ದಿಯಾ ಕುಮಾರಿ (ವಿದ್ಯಾಧರ್ ನಗರ), ಅನಿತಾ ಭಾದೆಲ್ (ಅಜ್ಮೀರ್ ಸೌತ್), ಮಂಜು ಬಾಗ್ಮಾರ್ (ಜಯಾಲ್), ಶೋಭಾ ಚೌಹಾಣ್ (ಸೋಜತ್), ದೀಪ್ತಿ ಕಿರಣ್ ಮಹೇಶ್ವರಿ (ರಾಜಸಮಂದ್), ಕಲ್ಪನಾ ದೇವಿ (ಲಾದ್‌ಪುರ), ವಸುಂಧರಾ ರಾಜೇ ( ಝಲ್ರಾಪಟನ್), ಸಿದ್ಧಿ ಕುಮಾರಿ (ಬಿಕಾನೇರ್ ಪೂರ್ವ), ನೌಕ್ಷಮ್ ಚೌಧರಿ (ಕಮಾನ್). ರಿತು ಬನಾವತ್ (ಬಯಾನಾ) ಮತ್ತು ಪ್ರಿಯಾಂಕಾ ಚೌಧರಿ (ಬಾರ್ಮರ್) ಪಕ್ಷೇತರರಾಗಿ ಗೆದ್ದಿದ್ದಾರೆ.

ಕಳೆದ 15ನೇ ವಿಧಾನಸಭೆ 24 ಮಹಿಳಾ ಸದಸ್ಯರನ್ನು ಹೊಂದಿತ್ತು. ಈ ಪೈಕಿ ಕಾಂಗ್ರೆಸ್‌ನ 12, ಬಿಜೆಪಿಯ 10, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ದಿಂದ ಒಬ್ಬರು ಮತ್ತು ಸ್ವತಂತ್ರ ಒಬ್ಬರು ಇದ್ದರು.

ಕಳೆದ ವಾರ ನಡೆದಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, 199 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗೆದ್ದು ಬಿಜೆಪಿ ಸರ್ಕಾರ ರಚಿಸಲು ಅಣಿಯಾಗಿದೆ. ರಾಜ್ಯದಲ್ಲಿ ಐದು ವರ್ಷಕೊಮ್ಮೆ ಸರ್ಕಾರ ಬದಲಾಗುವ ಸಂಪ್ರದಾಯದಂತೆ ಈ ಬಾರಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ಈ ಬಾರಿ 68 ಸ್ಥಾನಗಳನ್ನು ಪಡೆದಿದೆ. ಭಾರತ ಆದಿವಾಸಿ ಪಕ್ಷವು ಮೂರು ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷವು ಎರಡು ಸ್ಥಾನಗಳನ್ನು ಮತ್ತು ರಾಷ್ಟ್ರೀಯ ಲೋಕದಳ ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಎಂಟು ಸ್ಥಾನಗಳನ್ನು ಸ್ವತಂತ್ರರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...