Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

ರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

- Advertisement -
- Advertisement -

ಭಾನುವಾರ ಪ್ರಕಟಗೊಂಡ ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 20 ಮಹಿಳೆಯರು ಜಯಗಳಿಸಿದ್ದಾರೆ. ಈ ಬಾರಿ ವಿವಿಧ ಪಕ್ಷಗಳಿಂದ ಒಟ್ಟು 50 ಮಹಿಳೆಯರು ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ವಿಧಾನಸಭೆಗೆ ಹೋಲಿಸಿದರೆ, ಈ ಬಾರಿ ಮಹಿಳಾ ಶಾಸಕಿಯರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ ಬಾರಿ 24 ಜನ ಮಹಿಳಾ ಶಾಸಕಿಯರಿದ್ದರು.

ಈ ಬಾರಿ ಗೆದ್ದಿರುವ ಮಹಿಳೆಯರ ಪೈಕಿ ತಲಾ ಒಂಬತ್ತು ಮಂದಿ ಬಿಜೆಪಿ ಮತ್ತು ಕಾಂಗ್ರೆಸ್‌ ಹಾಗೂ ಇಬ್ಬರು ಪಕ್ಷೇತರರು. ಒಟ್ಟು 50 ಮಹಿಳಾ ಅಭ್ಯರ್ಥಿಗಳಲ್ಲಿ ಬಿಜೆಪಿಯಿಂದ 20, ಕಾಂಗ್ರೆಸ್‌ನಿಂದ 28 ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಒಂಬತ್ತು ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳೆಂದರೆ, ಶಿಮ್ಲಾ ದೇವಿ (ಅನುಪುಗಢ), ಸುಶೀಲಾ ದುಡಿ (ನೋಖಾ), ರೀಟಾ ಚೌಧರಿ (ಮಾಂಡವಾ), ಶಿಕಾ ಮೀಲ್ ಬರಾಲಾ (ಚೋಮು), ಶೋಭಾರಾಣಿ ಕುಶ್ವಾಹ್ (ಧೋಲ್ಪುರ್), ಅನಿತಾ ಜಾತವ್ (ಹಿಂದೌನ್), ಇಂದ್ರ (ಬಮನ್ವಾಸ್), ಗೀತಾ ಬರ್ವಾರ್. (ಭೋಪಾಲ್ಗಢ), ಮತ್ತು ರಮಿಲಾ ಖಾಡಿಯಾ (ಕುಶಾಲ್ಗಢ). ಬಿಜೆಪಿಯ ಮಹಿಳಾ ಅಭ್ಯರ್ಥಿಗಳೆಂದರೆ, ದಿಯಾ ಕುಮಾರಿ (ವಿದ್ಯಾಧರ್ ನಗರ), ಅನಿತಾ ಭಾದೆಲ್ (ಅಜ್ಮೀರ್ ಸೌತ್), ಮಂಜು ಬಾಗ್ಮಾರ್ (ಜಯಾಲ್), ಶೋಭಾ ಚೌಹಾಣ್ (ಸೋಜತ್), ದೀಪ್ತಿ ಕಿರಣ್ ಮಹೇಶ್ವರಿ (ರಾಜಸಮಂದ್), ಕಲ್ಪನಾ ದೇವಿ (ಲಾದ್‌ಪುರ), ವಸುಂಧರಾ ರಾಜೇ ( ಝಲ್ರಾಪಟನ್), ಸಿದ್ಧಿ ಕುಮಾರಿ (ಬಿಕಾನೇರ್ ಪೂರ್ವ), ನೌಕ್ಷಮ್ ಚೌಧರಿ (ಕಮಾನ್). ರಿತು ಬನಾವತ್ (ಬಯಾನಾ) ಮತ್ತು ಪ್ರಿಯಾಂಕಾ ಚೌಧರಿ (ಬಾರ್ಮರ್) ಪಕ್ಷೇತರರಾಗಿ ಗೆದ್ದಿದ್ದಾರೆ.

ಕಳೆದ 15ನೇ ವಿಧಾನಸಭೆ 24 ಮಹಿಳಾ ಸದಸ್ಯರನ್ನು ಹೊಂದಿತ್ತು. ಈ ಪೈಕಿ ಕಾಂಗ್ರೆಸ್‌ನ 12, ಬಿಜೆಪಿಯ 10, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ದಿಂದ ಒಬ್ಬರು ಮತ್ತು ಸ್ವತಂತ್ರ ಒಬ್ಬರು ಇದ್ದರು.

ಕಳೆದ ವಾರ ನಡೆದಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, 199 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗೆದ್ದು ಬಿಜೆಪಿ ಸರ್ಕಾರ ರಚಿಸಲು ಅಣಿಯಾಗಿದೆ. ರಾಜ್ಯದಲ್ಲಿ ಐದು ವರ್ಷಕೊಮ್ಮೆ ಸರ್ಕಾರ ಬದಲಾಗುವ ಸಂಪ್ರದಾಯದಂತೆ ಈ ಬಾರಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ಈ ಬಾರಿ 68 ಸ್ಥಾನಗಳನ್ನು ಪಡೆದಿದೆ. ಭಾರತ ಆದಿವಾಸಿ ಪಕ್ಷವು ಮೂರು ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷವು ಎರಡು ಸ್ಥಾನಗಳನ್ನು ಮತ್ತು ರಾಷ್ಟ್ರೀಯ ಲೋಕದಳ ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಎಂಟು ಸ್ಥಾನಗಳನ್ನು ಸ್ವತಂತ್ರರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...