Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

ರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

- Advertisement -
- Advertisement -

ಭಾನುವಾರ ಪ್ರಕಟಗೊಂಡ ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 20 ಮಹಿಳೆಯರು ಜಯಗಳಿಸಿದ್ದಾರೆ. ಈ ಬಾರಿ ವಿವಿಧ ಪಕ್ಷಗಳಿಂದ ಒಟ್ಟು 50 ಮಹಿಳೆಯರು ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ವಿಧಾನಸಭೆಗೆ ಹೋಲಿಸಿದರೆ, ಈ ಬಾರಿ ಮಹಿಳಾ ಶಾಸಕಿಯರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ ಬಾರಿ 24 ಜನ ಮಹಿಳಾ ಶಾಸಕಿಯರಿದ್ದರು.

ಈ ಬಾರಿ ಗೆದ್ದಿರುವ ಮಹಿಳೆಯರ ಪೈಕಿ ತಲಾ ಒಂಬತ್ತು ಮಂದಿ ಬಿಜೆಪಿ ಮತ್ತು ಕಾಂಗ್ರೆಸ್‌ ಹಾಗೂ ಇಬ್ಬರು ಪಕ್ಷೇತರರು. ಒಟ್ಟು 50 ಮಹಿಳಾ ಅಭ್ಯರ್ಥಿಗಳಲ್ಲಿ ಬಿಜೆಪಿಯಿಂದ 20, ಕಾಂಗ್ರೆಸ್‌ನಿಂದ 28 ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಒಂಬತ್ತು ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳೆಂದರೆ, ಶಿಮ್ಲಾ ದೇವಿ (ಅನುಪುಗಢ), ಸುಶೀಲಾ ದುಡಿ (ನೋಖಾ), ರೀಟಾ ಚೌಧರಿ (ಮಾಂಡವಾ), ಶಿಕಾ ಮೀಲ್ ಬರಾಲಾ (ಚೋಮು), ಶೋಭಾರಾಣಿ ಕುಶ್ವಾಹ್ (ಧೋಲ್ಪುರ್), ಅನಿತಾ ಜಾತವ್ (ಹಿಂದೌನ್), ಇಂದ್ರ (ಬಮನ್ವಾಸ್), ಗೀತಾ ಬರ್ವಾರ್. (ಭೋಪಾಲ್ಗಢ), ಮತ್ತು ರಮಿಲಾ ಖಾಡಿಯಾ (ಕುಶಾಲ್ಗಢ). ಬಿಜೆಪಿಯ ಮಹಿಳಾ ಅಭ್ಯರ್ಥಿಗಳೆಂದರೆ, ದಿಯಾ ಕುಮಾರಿ (ವಿದ್ಯಾಧರ್ ನಗರ), ಅನಿತಾ ಭಾದೆಲ್ (ಅಜ್ಮೀರ್ ಸೌತ್), ಮಂಜು ಬಾಗ್ಮಾರ್ (ಜಯಾಲ್), ಶೋಭಾ ಚೌಹಾಣ್ (ಸೋಜತ್), ದೀಪ್ತಿ ಕಿರಣ್ ಮಹೇಶ್ವರಿ (ರಾಜಸಮಂದ್), ಕಲ್ಪನಾ ದೇವಿ (ಲಾದ್‌ಪುರ), ವಸುಂಧರಾ ರಾಜೇ ( ಝಲ್ರಾಪಟನ್), ಸಿದ್ಧಿ ಕುಮಾರಿ (ಬಿಕಾನೇರ್ ಪೂರ್ವ), ನೌಕ್ಷಮ್ ಚೌಧರಿ (ಕಮಾನ್). ರಿತು ಬನಾವತ್ (ಬಯಾನಾ) ಮತ್ತು ಪ್ರಿಯಾಂಕಾ ಚೌಧರಿ (ಬಾರ್ಮರ್) ಪಕ್ಷೇತರರಾಗಿ ಗೆದ್ದಿದ್ದಾರೆ.

ಕಳೆದ 15ನೇ ವಿಧಾನಸಭೆ 24 ಮಹಿಳಾ ಸದಸ್ಯರನ್ನು ಹೊಂದಿತ್ತು. ಈ ಪೈಕಿ ಕಾಂಗ್ರೆಸ್‌ನ 12, ಬಿಜೆಪಿಯ 10, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ದಿಂದ ಒಬ್ಬರು ಮತ್ತು ಸ್ವತಂತ್ರ ಒಬ್ಬರು ಇದ್ದರು.

ಕಳೆದ ವಾರ ನಡೆದಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, 199 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗೆದ್ದು ಬಿಜೆಪಿ ಸರ್ಕಾರ ರಚಿಸಲು ಅಣಿಯಾಗಿದೆ. ರಾಜ್ಯದಲ್ಲಿ ಐದು ವರ್ಷಕೊಮ್ಮೆ ಸರ್ಕಾರ ಬದಲಾಗುವ ಸಂಪ್ರದಾಯದಂತೆ ಈ ಬಾರಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ಈ ಬಾರಿ 68 ಸ್ಥಾನಗಳನ್ನು ಪಡೆದಿದೆ. ಭಾರತ ಆದಿವಾಸಿ ಪಕ್ಷವು ಮೂರು ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷವು ಎರಡು ಸ್ಥಾನಗಳನ್ನು ಮತ್ತು ರಾಷ್ಟ್ರೀಯ ಲೋಕದಳ ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಎಂಟು ಸ್ಥಾನಗಳನ್ನು ಸ್ವತಂತ್ರರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...