Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

ರಾಜಸ್ಥಾನ ವಿಧಾನಸಭಾ ಚುನಾವಣೆ: 20 ಮಹಿಳಾ ಅಭ್ಯರ್ಥಿಗಳಿಗೆ ಜಯ

- Advertisement -
- Advertisement -

ಭಾನುವಾರ ಪ್ರಕಟಗೊಂಡ ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 20 ಮಹಿಳೆಯರು ಜಯಗಳಿಸಿದ್ದಾರೆ. ಈ ಬಾರಿ ವಿವಿಧ ಪಕ್ಷಗಳಿಂದ ಒಟ್ಟು 50 ಮಹಿಳೆಯರು ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ವಿಧಾನಸಭೆಗೆ ಹೋಲಿಸಿದರೆ, ಈ ಬಾರಿ ಮಹಿಳಾ ಶಾಸಕಿಯರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ ಬಾರಿ 24 ಜನ ಮಹಿಳಾ ಶಾಸಕಿಯರಿದ್ದರು.

ಈ ಬಾರಿ ಗೆದ್ದಿರುವ ಮಹಿಳೆಯರ ಪೈಕಿ ತಲಾ ಒಂಬತ್ತು ಮಂದಿ ಬಿಜೆಪಿ ಮತ್ತು ಕಾಂಗ್ರೆಸ್‌ ಹಾಗೂ ಇಬ್ಬರು ಪಕ್ಷೇತರರು. ಒಟ್ಟು 50 ಮಹಿಳಾ ಅಭ್ಯರ್ಥಿಗಳಲ್ಲಿ ಬಿಜೆಪಿಯಿಂದ 20, ಕಾಂಗ್ರೆಸ್‌ನಿಂದ 28 ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಒಂಬತ್ತು ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳೆಂದರೆ, ಶಿಮ್ಲಾ ದೇವಿ (ಅನುಪುಗಢ), ಸುಶೀಲಾ ದುಡಿ (ನೋಖಾ), ರೀಟಾ ಚೌಧರಿ (ಮಾಂಡವಾ), ಶಿಕಾ ಮೀಲ್ ಬರಾಲಾ (ಚೋಮು), ಶೋಭಾರಾಣಿ ಕುಶ್ವಾಹ್ (ಧೋಲ್ಪುರ್), ಅನಿತಾ ಜಾತವ್ (ಹಿಂದೌನ್), ಇಂದ್ರ (ಬಮನ್ವಾಸ್), ಗೀತಾ ಬರ್ವಾರ್. (ಭೋಪಾಲ್ಗಢ), ಮತ್ತು ರಮಿಲಾ ಖಾಡಿಯಾ (ಕುಶಾಲ್ಗಢ). ಬಿಜೆಪಿಯ ಮಹಿಳಾ ಅಭ್ಯರ್ಥಿಗಳೆಂದರೆ, ದಿಯಾ ಕುಮಾರಿ (ವಿದ್ಯಾಧರ್ ನಗರ), ಅನಿತಾ ಭಾದೆಲ್ (ಅಜ್ಮೀರ್ ಸೌತ್), ಮಂಜು ಬಾಗ್ಮಾರ್ (ಜಯಾಲ್), ಶೋಭಾ ಚೌಹಾಣ್ (ಸೋಜತ್), ದೀಪ್ತಿ ಕಿರಣ್ ಮಹೇಶ್ವರಿ (ರಾಜಸಮಂದ್), ಕಲ್ಪನಾ ದೇವಿ (ಲಾದ್‌ಪುರ), ವಸುಂಧರಾ ರಾಜೇ ( ಝಲ್ರಾಪಟನ್), ಸಿದ್ಧಿ ಕುಮಾರಿ (ಬಿಕಾನೇರ್ ಪೂರ್ವ), ನೌಕ್ಷಮ್ ಚೌಧರಿ (ಕಮಾನ್). ರಿತು ಬನಾವತ್ (ಬಯಾನಾ) ಮತ್ತು ಪ್ರಿಯಾಂಕಾ ಚೌಧರಿ (ಬಾರ್ಮರ್) ಪಕ್ಷೇತರರಾಗಿ ಗೆದ್ದಿದ್ದಾರೆ.

ಕಳೆದ 15ನೇ ವಿಧಾನಸಭೆ 24 ಮಹಿಳಾ ಸದಸ್ಯರನ್ನು ಹೊಂದಿತ್ತು. ಈ ಪೈಕಿ ಕಾಂಗ್ರೆಸ್‌ನ 12, ಬಿಜೆಪಿಯ 10, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ದಿಂದ ಒಬ್ಬರು ಮತ್ತು ಸ್ವತಂತ್ರ ಒಬ್ಬರು ಇದ್ದರು.

ಕಳೆದ ವಾರ ನಡೆದಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, 199 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗೆದ್ದು ಬಿಜೆಪಿ ಸರ್ಕಾರ ರಚಿಸಲು ಅಣಿಯಾಗಿದೆ. ರಾಜ್ಯದಲ್ಲಿ ಐದು ವರ್ಷಕೊಮ್ಮೆ ಸರ್ಕಾರ ಬದಲಾಗುವ ಸಂಪ್ರದಾಯದಂತೆ ಈ ಬಾರಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ಈ ಬಾರಿ 68 ಸ್ಥಾನಗಳನ್ನು ಪಡೆದಿದೆ. ಭಾರತ ಆದಿವಾಸಿ ಪಕ್ಷವು ಮೂರು ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷವು ಎರಡು ಸ್ಥಾನಗಳನ್ನು ಮತ್ತು ರಾಷ್ಟ್ರೀಯ ಲೋಕದಳ ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಎಂಟು ಸ್ಥಾನಗಳನ್ನು ಸ್ವತಂತ್ರರು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...