HomeUncategorized20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

- Advertisement -
- Advertisement -

ಕಳೆದ 20 ವರ್ಷಗಳಲ್ಲಿ ರಾಜ್ಯದ ವಿವಿಧ ಯೋಜನೆಗಳಿಗಾಗಿ ಅರಣ್ಯ ಇಲಾಖೆಯು ತನ್ನ ಅಡಿಯಲ್ಲಿ ಇದ್ದ ಸುಮಾರು 20,805.72 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗಾಗಿ ನೀಡಿದೆ ಎಂದು ವರದಿಯೊಂದು ಹೇಳಿದೆ. ಇದರಲ್ಲಿ ಗಣಿ, ನೀರಾವರಿ ಹಾಗೂ ಮೊಬೈಲ್ ಟವರ್ ಸ್ಥಾಪನೆಯ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. 20 ವರ್ಷಗಳಲ್ಲಿ ಬೇರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2004-05 ರಿಂದ 2023-24 ರವರೆಗೆ ಅರಣ್ಯ ಸಂರಕ್ಷಣಾ ಕಾಯ್ದೆ (1980) ಅಡಿಯಲ್ಲಿ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಿದ ಮಾಹಿತಿಯ ಪ್ರಕಾರ, ವಿವಿಧ ಯೋಜನೆಗಳಿಗೆ ಭೂಮಿಗೆ ಮಂಜೂರಾತಿ ಕೋರಿ 534 ಪ್ರಸ್ತಾವನೆಗಳನ್ನು ಇಲಾಖೆಗೆ ಸಲ್ಲಿಸಲಾಗಿದೆ. ಗಣಿಗಾರಿಕೆ ಮತ್ತು ನೀರಾವರಿ ಸೇರಿದಂತೆ ಪ್ರಮುಖ ಯೋಜನೆಗಳಿಗೆ ದೊಡ್ಡ ಮತ್ತು ಸಣ್ಣ ಜಮೀನುಗಳನ್ನು ನೀಡಲಾಯಿತು ಎಂದು ವರದಿ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ 449.55 ಹೆಕ್ಟೇರ್, ಬಳ್ಳಾರಿಯಲ್ಲಿ ಗಣಿಗಾರಿಕೆಗೆ 335.04ಹೆಕ್ಟೇರ್ ಮತ್ತು 232.76ಹೆಕ್ಟೇರ್, ಬೆಳಗಾವಿಯಲ್ಲಿ ಪವನ ವಿದ್ಯುತ್ ಉತ್ಪಾದನೆಗೆ 215.55ಹೆಕ್ಟೇರ್, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 0.78ಹೆಕ್ಟೇರ್ ರಸ್ತೆ ಯೋಜನೆಗಳಿಗೆ ಮತ್ತು 0.4ಹೆಕ್ಟೇರ್ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಅರಣ್ಯ ಭೂಮಿಯನ್ನು ನೀಡಿಲಾಗಿದೆ.

ಸೆಲ್ ಫೋನ್ ನೆಟ್‌ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಕೂಡಾ ರಾಜ್ಯ ಸರ್ಕಾರ ಅರಣ್ಯ ಭೂಮಿಯನ್ನು ನೀಡಿದೆ. ಕಳೆದ ಒಂದು ವರ್ಷದಲ್ಲಿ, ಕೇಂದ್ರ ಸರ್ಕಾರದ ಇಂಟರ್ನೆಟ್ ಮತ್ತು ಮೊಬೈಲ್ ಸಂಪರ್ಕವನ್ನು ಹೆಚ್ಚಿಸುವ ಯೋಜನೆಯಡಿ 256 BSNL ಟವರ್‌ಗಳನ್ನು ಸ್ಥಾಪಿಸಲು ಭೂಮಿಯನ್ನು ನೀಡಲಾಗಿದೆ. ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಪಶ್ಚಿಮ ಘಟ್ಟಗಳ ಇತರ ಸ್ಥಳಗಳಲ್ಲಿ ನೀಡಲಾಗಿದೆ.

ಎತ್ತಿನಹೊಳೆ ಯೋಜನೆಗೆ ಸುಮಾರು 500 ಎಕರೆ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ 50 ಹೆಕ್ಟೇರ್ ಭೂಮಿಯನ್ನು ನೀಡುವ ಬಗ್ಗೆ ಪಟ್ಟಿಯಲ್ಲಿ ಇದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆ ಮತ್ತು ಕುಡಿಯುವ ನೀರಿನ ಯೋಜನೆಗಳು ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಕೂಡಾ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

ನಿಯಮಗಳ ಪ್ರಕಾರ, 2023 ರಲ್ಲಿ ತಿದ್ದುಪಡಿಯಾದ ಅರಣ್ಯ ಸಂರಕ್ಷಣಾ ಕಾಯಿದೆ, 1980 ರ ಅಡಿಯಲ್ಲಿ ಭೂಮಿಯನ್ನು ನೀಡಲಾಗಿದೆ. ಅರಣ್ಯೇತರ ಉದ್ದೇಶಗಳಿಗೆ ಅರಣ್ಯ ಭೂಮಿ ಅಗತ್ಯವಿದ್ದರೆ, ಪ್ರತಿ ಹೆಕ್ಟೇರ್‌ಗೆ ಸಮಾನ ಆಯಾಮದ ಭೂಮಿಯನ್ನು ಅರಣ್ಯೀಕರಣಕ್ಕಾಗಿ ಇಲಾಖೆಗೆ ಹಸ್ತಾಂತರಿಸಬೇಕಾಗಿದೆ. ಜೊತೆಗೆ ಅರಣ್ಯೀಕರಣಕ್ಕೆ ಪರಿಹಾರ ನೀಡಬೇಕಿದೆ.

ಅಷ್ಟೆ ಅಲ್ಲದೆ, ಅರ್ಜಿದಾರರು ಮರಗಳನ್ನು ಕಡಿಯುವ ವೆಚ್ಚವನ್ನು ಸಹ ಭರಿಸಬೇಕು ಮತ್ತು ಅವುಗಳ ಪ್ರಸ್ತುತ ಮೌಲ್ಯವನ್ನು ಪಾವತಿಸಬೇಕು ಎಂದು ನಿಯಮ ಹೇಳುತ್ತದೆ. ವನ್ಯಜೀವಿಗಳ ಉಪಶಮನಕ್ಕಾಗಿ ಯೋಜನಾ ವೆಚ್ಚದ 2% ಮತ್ತು ಮಣ್ಣು ತಗ್ಗಿಸುವ ಕ್ರಮಗಳಿಗಾಗಿ 0.5% ಕೂಡಾ ಪಾವತಿಸಬೇಕು ಎಂದು ಅಧಿಕಾರಿ ಹೇಳಿದ್ದಾರೆ.

ಅರಣ್ಯದ ಬಳಿ ಪರಿಹಾರವಾಗಿ ಭೂಮಿ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆದರೆ ಹಲವು ಪ್ರಕರಣಗಳಲ್ಲಿ ಅರಣ್ಯದಿಂದ ದೂರವಿರುವ ಸ್ಥಳಗಳಲ್ಲಿ ಭೂಮಿ ನೀಡಲಾಗಿದೆ. ಇಲಾಖೆಗೆ ನೀಡಿರುವ ಕೆಲವು ಜಮೀನುಗಳು ವ್ಯಾಜ್ಯ ಅಥವಾ ಅತಿಕ್ರಮಣಕ್ಕೆ ಒಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೊ ನೋಡಿ: ತನ್ನ ತಂಗಿಗೆ ಕಿರುಕುಳ ಕೊಡುತ್ತಿದ್ದ ಆರೋಪ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...