HomeUncategorized20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

- Advertisement -
- Advertisement -

ಕಳೆದ 20 ವರ್ಷಗಳಲ್ಲಿ ರಾಜ್ಯದ ವಿವಿಧ ಯೋಜನೆಗಳಿಗಾಗಿ ಅರಣ್ಯ ಇಲಾಖೆಯು ತನ್ನ ಅಡಿಯಲ್ಲಿ ಇದ್ದ ಸುಮಾರು 20,805.72 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗಾಗಿ ನೀಡಿದೆ ಎಂದು ವರದಿಯೊಂದು ಹೇಳಿದೆ. ಇದರಲ್ಲಿ ಗಣಿ, ನೀರಾವರಿ ಹಾಗೂ ಮೊಬೈಲ್ ಟವರ್ ಸ್ಥಾಪನೆಯ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. 20 ವರ್ಷಗಳಲ್ಲಿ ಬೇರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2004-05 ರಿಂದ 2023-24 ರವರೆಗೆ ಅರಣ್ಯ ಸಂರಕ್ಷಣಾ ಕಾಯ್ದೆ (1980) ಅಡಿಯಲ್ಲಿ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಿದ ಮಾಹಿತಿಯ ಪ್ರಕಾರ, ವಿವಿಧ ಯೋಜನೆಗಳಿಗೆ ಭೂಮಿಗೆ ಮಂಜೂರಾತಿ ಕೋರಿ 534 ಪ್ರಸ್ತಾವನೆಗಳನ್ನು ಇಲಾಖೆಗೆ ಸಲ್ಲಿಸಲಾಗಿದೆ. ಗಣಿಗಾರಿಕೆ ಮತ್ತು ನೀರಾವರಿ ಸೇರಿದಂತೆ ಪ್ರಮುಖ ಯೋಜನೆಗಳಿಗೆ ದೊಡ್ಡ ಮತ್ತು ಸಣ್ಣ ಜಮೀನುಗಳನ್ನು ನೀಡಲಾಯಿತು ಎಂದು ವರದಿ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ 449.55 ಹೆಕ್ಟೇರ್, ಬಳ್ಳಾರಿಯಲ್ಲಿ ಗಣಿಗಾರಿಕೆಗೆ 335.04ಹೆಕ್ಟೇರ್ ಮತ್ತು 232.76ಹೆಕ್ಟೇರ್, ಬೆಳಗಾವಿಯಲ್ಲಿ ಪವನ ವಿದ್ಯುತ್ ಉತ್ಪಾದನೆಗೆ 215.55ಹೆಕ್ಟೇರ್, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 0.78ಹೆಕ್ಟೇರ್ ರಸ್ತೆ ಯೋಜನೆಗಳಿಗೆ ಮತ್ತು 0.4ಹೆಕ್ಟೇರ್ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಅರಣ್ಯ ಭೂಮಿಯನ್ನು ನೀಡಿಲಾಗಿದೆ.

ಸೆಲ್ ಫೋನ್ ನೆಟ್‌ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಕೂಡಾ ರಾಜ್ಯ ಸರ್ಕಾರ ಅರಣ್ಯ ಭೂಮಿಯನ್ನು ನೀಡಿದೆ. ಕಳೆದ ಒಂದು ವರ್ಷದಲ್ಲಿ, ಕೇಂದ್ರ ಸರ್ಕಾರದ ಇಂಟರ್ನೆಟ್ ಮತ್ತು ಮೊಬೈಲ್ ಸಂಪರ್ಕವನ್ನು ಹೆಚ್ಚಿಸುವ ಯೋಜನೆಯಡಿ 256 BSNL ಟವರ್‌ಗಳನ್ನು ಸ್ಥಾಪಿಸಲು ಭೂಮಿಯನ್ನು ನೀಡಲಾಗಿದೆ. ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಪಶ್ಚಿಮ ಘಟ್ಟಗಳ ಇತರ ಸ್ಥಳಗಳಲ್ಲಿ ನೀಡಲಾಗಿದೆ.

ಎತ್ತಿನಹೊಳೆ ಯೋಜನೆಗೆ ಸುಮಾರು 500 ಎಕರೆ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ 50 ಹೆಕ್ಟೇರ್ ಭೂಮಿಯನ್ನು ನೀಡುವ ಬಗ್ಗೆ ಪಟ್ಟಿಯಲ್ಲಿ ಇದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆ ಮತ್ತು ಕುಡಿಯುವ ನೀರಿನ ಯೋಜನೆಗಳು ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಕೂಡಾ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

ನಿಯಮಗಳ ಪ್ರಕಾರ, 2023 ರಲ್ಲಿ ತಿದ್ದುಪಡಿಯಾದ ಅರಣ್ಯ ಸಂರಕ್ಷಣಾ ಕಾಯಿದೆ, 1980 ರ ಅಡಿಯಲ್ಲಿ ಭೂಮಿಯನ್ನು ನೀಡಲಾಗಿದೆ. ಅರಣ್ಯೇತರ ಉದ್ದೇಶಗಳಿಗೆ ಅರಣ್ಯ ಭೂಮಿ ಅಗತ್ಯವಿದ್ದರೆ, ಪ್ರತಿ ಹೆಕ್ಟೇರ್‌ಗೆ ಸಮಾನ ಆಯಾಮದ ಭೂಮಿಯನ್ನು ಅರಣ್ಯೀಕರಣಕ್ಕಾಗಿ ಇಲಾಖೆಗೆ ಹಸ್ತಾಂತರಿಸಬೇಕಾಗಿದೆ. ಜೊತೆಗೆ ಅರಣ್ಯೀಕರಣಕ್ಕೆ ಪರಿಹಾರ ನೀಡಬೇಕಿದೆ.

ಅಷ್ಟೆ ಅಲ್ಲದೆ, ಅರ್ಜಿದಾರರು ಮರಗಳನ್ನು ಕಡಿಯುವ ವೆಚ್ಚವನ್ನು ಸಹ ಭರಿಸಬೇಕು ಮತ್ತು ಅವುಗಳ ಪ್ರಸ್ತುತ ಮೌಲ್ಯವನ್ನು ಪಾವತಿಸಬೇಕು ಎಂದು ನಿಯಮ ಹೇಳುತ್ತದೆ. ವನ್ಯಜೀವಿಗಳ ಉಪಶಮನಕ್ಕಾಗಿ ಯೋಜನಾ ವೆಚ್ಚದ 2% ಮತ್ತು ಮಣ್ಣು ತಗ್ಗಿಸುವ ಕ್ರಮಗಳಿಗಾಗಿ 0.5% ಕೂಡಾ ಪಾವತಿಸಬೇಕು ಎಂದು ಅಧಿಕಾರಿ ಹೇಳಿದ್ದಾರೆ.

ಅರಣ್ಯದ ಬಳಿ ಪರಿಹಾರವಾಗಿ ಭೂಮಿ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆದರೆ ಹಲವು ಪ್ರಕರಣಗಳಲ್ಲಿ ಅರಣ್ಯದಿಂದ ದೂರವಿರುವ ಸ್ಥಳಗಳಲ್ಲಿ ಭೂಮಿ ನೀಡಲಾಗಿದೆ. ಇಲಾಖೆಗೆ ನೀಡಿರುವ ಕೆಲವು ಜಮೀನುಗಳು ವ್ಯಾಜ್ಯ ಅಥವಾ ಅತಿಕ್ರಮಣಕ್ಕೆ ಒಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೊ ನೋಡಿ: ತನ್ನ ತಂಗಿಗೆ ಕಿರುಕುಳ ಕೊಡುತ್ತಿದ್ದ ಆರೋಪ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...