HomeUncategorized20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

- Advertisement -
- Advertisement -

ಕಳೆದ 20 ವರ್ಷಗಳಲ್ಲಿ ರಾಜ್ಯದ ವಿವಿಧ ಯೋಜನೆಗಳಿಗಾಗಿ ಅರಣ್ಯ ಇಲಾಖೆಯು ತನ್ನ ಅಡಿಯಲ್ಲಿ ಇದ್ದ ಸುಮಾರು 20,805.72 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗಾಗಿ ನೀಡಿದೆ ಎಂದು ವರದಿಯೊಂದು ಹೇಳಿದೆ. ಇದರಲ್ಲಿ ಗಣಿ, ನೀರಾವರಿ ಹಾಗೂ ಮೊಬೈಲ್ ಟವರ್ ಸ್ಥಾಪನೆಯ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. 20 ವರ್ಷಗಳಲ್ಲಿ ಬೇರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2004-05 ರಿಂದ 2023-24 ರವರೆಗೆ ಅರಣ್ಯ ಸಂರಕ್ಷಣಾ ಕಾಯ್ದೆ (1980) ಅಡಿಯಲ್ಲಿ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ನೀಡಿದ ಮಾಹಿತಿಯ ಪ್ರಕಾರ, ವಿವಿಧ ಯೋಜನೆಗಳಿಗೆ ಭೂಮಿಗೆ ಮಂಜೂರಾತಿ ಕೋರಿ 534 ಪ್ರಸ್ತಾವನೆಗಳನ್ನು ಇಲಾಖೆಗೆ ಸಲ್ಲಿಸಲಾಗಿದೆ. ಗಣಿಗಾರಿಕೆ ಮತ್ತು ನೀರಾವರಿ ಸೇರಿದಂತೆ ಪ್ರಮುಖ ಯೋಜನೆಗಳಿಗೆ ದೊಡ್ಡ ಮತ್ತು ಸಣ್ಣ ಜಮೀನುಗಳನ್ನು ನೀಡಲಾಯಿತು ಎಂದು ವರದಿ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ 449.55 ಹೆಕ್ಟೇರ್, ಬಳ್ಳಾರಿಯಲ್ಲಿ ಗಣಿಗಾರಿಕೆಗೆ 335.04ಹೆಕ್ಟೇರ್ ಮತ್ತು 232.76ಹೆಕ್ಟೇರ್, ಬೆಳಗಾವಿಯಲ್ಲಿ ಪವನ ವಿದ್ಯುತ್ ಉತ್ಪಾದನೆಗೆ 215.55ಹೆಕ್ಟೇರ್, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 0.78ಹೆಕ್ಟೇರ್ ರಸ್ತೆ ಯೋಜನೆಗಳಿಗೆ ಮತ್ತು 0.4ಹೆಕ್ಟೇರ್ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಅರಣ್ಯ ಭೂಮಿಯನ್ನು ನೀಡಿಲಾಗಿದೆ.

ಸೆಲ್ ಫೋನ್ ನೆಟ್‌ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಕೂಡಾ ರಾಜ್ಯ ಸರ್ಕಾರ ಅರಣ್ಯ ಭೂಮಿಯನ್ನು ನೀಡಿದೆ. ಕಳೆದ ಒಂದು ವರ್ಷದಲ್ಲಿ, ಕೇಂದ್ರ ಸರ್ಕಾರದ ಇಂಟರ್ನೆಟ್ ಮತ್ತು ಮೊಬೈಲ್ ಸಂಪರ್ಕವನ್ನು ಹೆಚ್ಚಿಸುವ ಯೋಜನೆಯಡಿ 256 BSNL ಟವರ್‌ಗಳನ್ನು ಸ್ಥಾಪಿಸಲು ಭೂಮಿಯನ್ನು ನೀಡಲಾಗಿದೆ. ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಪಶ್ಚಿಮ ಘಟ್ಟಗಳ ಇತರ ಸ್ಥಳಗಳಲ್ಲಿ ನೀಡಲಾಗಿದೆ.

ಎತ್ತಿನಹೊಳೆ ಯೋಜನೆಗೆ ಸುಮಾರು 500 ಎಕರೆ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ 50 ಹೆಕ್ಟೇರ್ ಭೂಮಿಯನ್ನು ನೀಡುವ ಬಗ್ಗೆ ಪಟ್ಟಿಯಲ್ಲಿ ಇದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆ ಮತ್ತು ಕುಡಿಯುವ ನೀರಿನ ಯೋಜನೆಗಳು ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಕೂಡಾ ಅರಣ್ಯ ಭೂಮಿಯನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

ನಿಯಮಗಳ ಪ್ರಕಾರ, 2023 ರಲ್ಲಿ ತಿದ್ದುಪಡಿಯಾದ ಅರಣ್ಯ ಸಂರಕ್ಷಣಾ ಕಾಯಿದೆ, 1980 ರ ಅಡಿಯಲ್ಲಿ ಭೂಮಿಯನ್ನು ನೀಡಲಾಗಿದೆ. ಅರಣ್ಯೇತರ ಉದ್ದೇಶಗಳಿಗೆ ಅರಣ್ಯ ಭೂಮಿ ಅಗತ್ಯವಿದ್ದರೆ, ಪ್ರತಿ ಹೆಕ್ಟೇರ್‌ಗೆ ಸಮಾನ ಆಯಾಮದ ಭೂಮಿಯನ್ನು ಅರಣ್ಯೀಕರಣಕ್ಕಾಗಿ ಇಲಾಖೆಗೆ ಹಸ್ತಾಂತರಿಸಬೇಕಾಗಿದೆ. ಜೊತೆಗೆ ಅರಣ್ಯೀಕರಣಕ್ಕೆ ಪರಿಹಾರ ನೀಡಬೇಕಿದೆ.

ಅಷ್ಟೆ ಅಲ್ಲದೆ, ಅರ್ಜಿದಾರರು ಮರಗಳನ್ನು ಕಡಿಯುವ ವೆಚ್ಚವನ್ನು ಸಹ ಭರಿಸಬೇಕು ಮತ್ತು ಅವುಗಳ ಪ್ರಸ್ತುತ ಮೌಲ್ಯವನ್ನು ಪಾವತಿಸಬೇಕು ಎಂದು ನಿಯಮ ಹೇಳುತ್ತದೆ. ವನ್ಯಜೀವಿಗಳ ಉಪಶಮನಕ್ಕಾಗಿ ಯೋಜನಾ ವೆಚ್ಚದ 2% ಮತ್ತು ಮಣ್ಣು ತಗ್ಗಿಸುವ ಕ್ರಮಗಳಿಗಾಗಿ 0.5% ಕೂಡಾ ಪಾವತಿಸಬೇಕು ಎಂದು ಅಧಿಕಾರಿ ಹೇಳಿದ್ದಾರೆ.

ಅರಣ್ಯದ ಬಳಿ ಪರಿಹಾರವಾಗಿ ಭೂಮಿ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆದರೆ ಹಲವು ಪ್ರಕರಣಗಳಲ್ಲಿ ಅರಣ್ಯದಿಂದ ದೂರವಿರುವ ಸ್ಥಳಗಳಲ್ಲಿ ಭೂಮಿ ನೀಡಲಾಗಿದೆ. ಇಲಾಖೆಗೆ ನೀಡಿರುವ ಕೆಲವು ಜಮೀನುಗಳು ವ್ಯಾಜ್ಯ ಅಥವಾ ಅತಿಕ್ರಮಣಕ್ಕೆ ಒಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೊ ನೋಡಿ: ತನ್ನ ತಂಗಿಗೆ ಕಿರುಕುಳ ಕೊಡುತ್ತಿದ್ದ ಆರೋಪ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...