Homeಮುಖಪುಟಅಫ್ಘಾನಿಸ್ತಾನದಲ್ಲಿ ಸಿಲುಕಿರುವ 200 ಸಿಖ್ಖರನ್ನು ರಕ್ಷಿಸುವಂತೆ ಕೇಂದ್ರಕ್ಕೆ ಅಮರಿಂದರ್ ಸಿಂಗ್ ಮನವಿ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ 200 ಸಿಖ್ಖರನ್ನು ರಕ್ಷಿಸುವಂತೆ ಕೇಂದ್ರಕ್ಕೆ ಅಮರಿಂದರ್ ಸಿಂಗ್ ಮನವಿ

- Advertisement -
- Advertisement -

ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜಧಾನಿ ಕಾಬೂಲ್‌ ತಾಲಿಬಾನ್ ಕೈಗೆ ಸಿಲುಕುವ ಮುನ್ನ ಅಧ್ಯಕ್ಷ ಅಶ್ರಫ್ ಘನಿ ದೇಶವನ್ನು ತೊರೆದಿದ್ದರಿಂದ ಅಫ್ಘಾನಿಸ್ತಾನವು ಅನಿಶ್ಚಿತತೆಯಲ್ಲಿ ಸಿಲುಕಿದೆ.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ” ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ ಸುಮಾರು 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ತಕ್ಷಣವೇ ಸ್ಥಳಾಂತರಿಸಲು ವ್ಯವಸ್ಥೆ ಮಾಡಲು ನಾನು  ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಒತ್ತಾಯಿಸುತ್ತೇನೆ. ಅವರ ಸುರಕ್ಷಿತ ಸ್ಥಳಾಂತರಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನನ್ನ ಸರ್ಕಾರ ಸಿದ್ಧವಿದೆ” ಎಂದಿದ್ದಾರೆ.

ಇದನ್ನೂ ಓದಿ: ಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

ಭಾನುವಾರ ಕೂಡ ಈ ಕುರಿತು ಟ್ವೀಟ್ ಮಾಡಿದ್ದ ಅಮರಿಂದರ್‌ ಸಿಂಗ್,” ಅಫ್ಘಾನಿಸ್ತಾನವು ತಾಲಿಬಾನ್‌ ವಶಕ್ಕೆ ಹೋಗಿದ್ದು ನಮ್ಮ ದೇಶಕ್ಕೆ ಒಳ್ಳೆಯಲ್ಲ. ಇದು ಭಾರತದ ವಿರುದ್ಧ ಚೀನಾ ಮತ್ತು ಪಾಕ್ ನಂಟು ಬಲಪಡಿಸುತ್ತದೆ. (ಚೀನಾ ಈಗಾಗಲೇ ಉಯ್ಘರ್ ಮೇಲೆ ದಾಳಿ ನಡೆಸಲು ಸೇನೆಯ ಸಹಾಯವನ್ನು ಕೋರಿದೆ). ಈ ಸೂಚನೆಗಳು ಉತ್ತಮವಾಗಿಲ್ಲ, ನಮ್ಮ ಎಲ್ಲ ಗಡಿಗಳಲ್ಲಿ ನಾವೀಗ ಹೆಚ್ಚು ಜಾಗರೂಕರಾಗಿರಬೇಕು” ಎಂದಿದ್ದರು.

ಶನಿವಾರ, ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯು, “ಅಫ್ಘಾನಿಸ್ತಾನದಲ್ಲಿ ವಾಸಿಸುವ ಸಿಖ್ಖರ ಸುರಕ್ಷತೆಯನ್ನು ಒಕ್ಕೂಟ ಸರ್ಕಾರ ಖಾತರಿಪಡಿಸಬೇಕು. ಭಾರತಕ್ಕೆ ಬರಲು ಬಯಸುವ ಸಿಖ್ಖರನ್ನು ಕರೆತರಲು ಬೇಷರತ್ತಾದ ವ್ಯವಸ್ಥೆ ಮಾಡಬೇಕು” ಎಂದು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿತ್ತು.


ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌‌ ಹಿಡಿತ ಹೆಚ್ಚಳ: ರಾಯಭಾರಿ ಕಚೇರಿ ಸಿಬ್ಬಂದಿ ಭಾರತಕ್ಕೆ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...