Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...