Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...