Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....