Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...