Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...