Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...