Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...