Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...