Homeಕರ್ನಾಟಕಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

- Advertisement -
- Advertisement -

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ” ಎಂದು ಹೇಳಿದ್ದಾರೆ.

“ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.”

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ. ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ” ಎಂದರು.

“ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ‘ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿದೆ’. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

“ಅಡುಗೆ ಅನಿಲದ ಬೆಲೆ 400 ರಿಂದ 1100 ರೂ. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾವೊಬ್ಬ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು” ಎಂದು ಹೇಳಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದಿದ್ದಾರೆ.

“ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ. ಇದು ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ” ಎಂದರು.

“ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವೀವರಿಸಿದ್ದಾರೆ.

‘ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ” ಎಂದು ಟೀಕಿಸಿದ್ದಾರೆ.

“ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ” ಎಂದರು.

“ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

“ಇದೇ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ನಮಗೆ ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...