Homeಕರ್ನಾಟಕಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

- Advertisement -
- Advertisement -

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ” ಎಂದು ಹೇಳಿದ್ದಾರೆ.

“ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.”

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ. ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ” ಎಂದರು.

“ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ‘ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿದೆ’. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

“ಅಡುಗೆ ಅನಿಲದ ಬೆಲೆ 400 ರಿಂದ 1100 ರೂ. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾವೊಬ್ಬ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು” ಎಂದು ಹೇಳಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದಿದ್ದಾರೆ.

“ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ. ಇದು ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ” ಎಂದರು.

“ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವೀವರಿಸಿದ್ದಾರೆ.

‘ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ” ಎಂದು ಟೀಕಿಸಿದ್ದಾರೆ.

“ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ” ಎಂದರು.

“ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

“ಇದೇ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ನಮಗೆ ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...