Homeಕರ್ನಾಟಕಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

- Advertisement -
- Advertisement -

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ” ಎಂದು ಹೇಳಿದ್ದಾರೆ.

“ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.”

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ. ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ” ಎಂದರು.

“ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ‘ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿದೆ’. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

“ಅಡುಗೆ ಅನಿಲದ ಬೆಲೆ 400 ರಿಂದ 1100 ರೂ. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾವೊಬ್ಬ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು” ಎಂದು ಹೇಳಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದಿದ್ದಾರೆ.

“ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ. ಇದು ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ” ಎಂದರು.

“ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವೀವರಿಸಿದ್ದಾರೆ.

‘ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ” ಎಂದು ಟೀಕಿಸಿದ್ದಾರೆ.

“ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ” ಎಂದರು.

“ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

“ಇದೇ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ನಮಗೆ ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...