Homeಕರ್ನಾಟಕಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

- Advertisement -
- Advertisement -

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ” ಎಂದು ಹೇಳಿದ್ದಾರೆ.

“ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.”

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ. ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ” ಎಂದರು.

“ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ‘ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿದೆ’. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

“ಅಡುಗೆ ಅನಿಲದ ಬೆಲೆ 400 ರಿಂದ 1100 ರೂ. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾವೊಬ್ಬ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು” ಎಂದು ಹೇಳಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದಿದ್ದಾರೆ.

“ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ. ಇದು ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ” ಎಂದರು.

“ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವೀವರಿಸಿದ್ದಾರೆ.

‘ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ” ಎಂದು ಟೀಕಿಸಿದ್ದಾರೆ.

“ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ” ಎಂದರು.

“ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

“ಇದೇ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ನಮಗೆ ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...