Homeಕರ್ನಾಟಕಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕಾಂಗ್ರೆಸ್ ಘೋಷಣೆ

- Advertisement -
- Advertisement -

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ” ಎಂದು ಹೇಳಿದ್ದಾರೆ.

“ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.”

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ. ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ” ಎಂದರು.

“ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ‘ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿದೆ’. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

“ಅಡುಗೆ ಅನಿಲದ ಬೆಲೆ 400 ರಿಂದ 1100 ರೂ. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾವೊಬ್ಬ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು” ಎಂದು ಹೇಳಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದಿದ್ದಾರೆ.

“ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ. ಇದು ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ” ಎಂದರು.

“ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವೀವರಿಸಿದ್ದಾರೆ.

‘ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ” ಎಂದು ಟೀಕಿಸಿದ್ದಾರೆ.

“ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ” ಎಂದರು.

“ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

“ಇದೇ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ನಮಗೆ ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...