Homeಮುಖಪುಟಸಿ.ಟಿ.ರವಿ, ಬೊಮ್ಮಾಯಿ, ಕಟೀಲ್‌ ಮನೆಗೂ 200 ಯುನಿಟ್ ವಿದ್ಯುತ್‌ ಫ್ರೀ: ಕಾಲೆಳೆದ ಕಾಂಗ್ರೆಸ್

ಸಿ.ಟಿ.ರವಿ, ಬೊಮ್ಮಾಯಿ, ಕಟೀಲ್‌ ಮನೆಗೂ 200 ಯುನಿಟ್ ವಿದ್ಯುತ್‌ ಫ್ರೀ: ಕಾಲೆಳೆದ ಕಾಂಗ್ರೆಸ್

ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ (ಪದವಿ ಪಡೆದಿದ್ದವರಿದ್ರೆ ಮಾತ್ರ)- ಕಾಂಗ್ರೆಸ್

- Advertisement -
- Advertisement -

ಐದು ಗ್ಯಾರಂಟಿಗಳ ಜಾರಿಯ ಸ್ಪಷ್ಟ ಚಿತ್ರಣವನ್ನು ಕಾಂಗ್ರೆಸ್‌ ನೀಡಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿಗಳ ಜಾರಿಯ ಕುರಿತು ವಿವರಣೆಗಳನ್ನು ನೀಡಿದ್ದಾರೆ.

ಅದರ ಬಳಿಕ ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡಿ ರಾಜ್ಯ ಬಿಜೆಪಿ ನಾಯಕರನ್ನು ಕಾಲೆಳೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರನ್ನು ಟ್ವೀಟ್‌ನಲ್ಲಿ ಟ್ಯಾಗ್ ಮಾಡಲಾಗಿದೆ.

“ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ! ಬೊಮ್ಮಾಯಿಯವರೇ, ನಿಮ್ಮ ಮನೆಗೂ ಫ್ರೀ! ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ! ಸಿ.ಟಿ.ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ! ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ತಿಳಿಸಿದೆ.

“ಕೈಲಾಗದವರು ಮೈ ಪರಚಿಕೊಂಡಂತಿದೆ ಕರ್ನಾಟಕ ಬಿಜೆಪಿಯ ಸ್ಥಿತಿ! 1 ಡಾಲರ್‌ಗೆ 15 ರೂಪಾಯಿ, ರೈತರ ಆದಾಯ ಡಬಲ್, 2022ರಲ್ಲಿ ಎಲ್ಲರಿಗೂ ವಸತಿ ಎಂದು ಸುಳ್ಳು ಭರವಸೆ ಕೊಟ್ಟು ವಂಚಿಸಿದವರಿಗೆ ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಇದೆಯೇ?” ಎಂದು ಪ್ರಶ್ನಿಸಿದೆ.

“ನಾವು ಪ್ರಶ್ನೆಗಳಿಗೆ ಹೆದರಿ ಓಡುವವರಲ್ಲ, ಬಿಜೆಪಿಗೆ ತಾಕತ್ತಿದ್ದರೆ ಮೋದಿಯವರಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ಮಾಡಿಸಲಿ” ಎಂದು ಸವಾಲು ಹಾಕಿದೆ.

ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ, “ಪ್ರತಿ ಮನೆಗೂ 200 ಯುನಿಟ್‌ ವಿದ್ಯುತ್‌ ಉಚಿತ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌,‍ ಕಾಂಗ್ರೆಸ್ ಅಭ್ಯರ್ಥಿಗಳು ಮನೆಮನೆಗೆ ಹೋಗಿ ಕೂಗಿದರು. ಈಗ ಒಂದು ವರ್ಷದ ಸರಾಸರಿ ವಿದ್ಯುತ್‌ ಬಳಕೆ ಎಷ್ಟಿತ್ತೋ, ಅದರ ಮೇಲೆ 10% ಅಷ್ಟು ‘ಮಾತ್ರ’ ಉಚಿತ ಎಂದು ಜನರಿಗೆ ಶಾಕ್‌ ನೀಡುತ್ತಿದ್ದಾರೆ. ಎರಡು ನಾಲಗೆಯ ಇಬ್ಬಂದಿ ಪಕ್ಷ ಕಾಂಗ್ರೆಸ್‌” ಎಂದು ಟ್ವೀಟ್ ಮಾಡಿದೆ.

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೊದಲ ಗ್ಯಾರಂಟಿ – ಗೃಹ ಜ್ಯೋತಿ

200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಲ್ಲರಿಗೂ ಕೊಡುತ್ತೇವೆ. ಇದನ್ನು ಜಾರಿ ಮಾಡಲು ತೀರ್ಮಾನಿಸಿದ್ದೇವೆ. 199 ಯೂನಿಟ್‌ವರೆಗೂ ಫ್ರಿ ವಿದ್ಯುತ್ ಕೊಡುತ್ತೇವೆ. 12 ತಿಂಗಳ ಸರಾಸರಿ ನೋಡುತ್ತೇವೆ. ಅದರ ಮೇಲೆ 10% ಉಚಿತವಾಗಿ ಕೊಡುತ್ತೇವೆ. ಈ ವರ್ಷದ ಜುಲೈ 1 ರಿಂದ ಫ್ರೀ ಜಾರಿಯಾಗುತ್ತದೆ ಎಂದರು. ಆದರೆ ಇದುವರೆಗೂ ಉಳಿಸಿಕೊಂಡಿರುವ ಬಾಕಿಯನ್ನು ಜನರೇ ಕಟ್ಟಬೇಕು ಎಂದರು.

ಎರಡನೇ ಗ್ಯಾರಂಟಿ – ಗೃಹ ಲಕ್ಷ್ಮೀ

ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತೇವೆ. ಅದಕ್ಕಾಗಿ ಅರ್ಜಿ ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ಸ್ ಕೊಡಬೇಕು. ಮನೆ ಯಜಮಾನಿಗೆ ಎಂದು ಹೇಳಿದ್ದೇವೆ. ಅವರ ಖಾತೆಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ. ಜೂನ್ 15 ರಿಂದ ಜುಲೈ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15 ರೊಳಗೆ ಪ್ರಕ್ರಿಯೆ ಮಾಡಿ ಆಗಸ್ಟ್ 15ನೇ ತಾರೀಖು ಎಲ್ಲ ಮನೆಯೊಡತಿಯರ ಖಾತೆಗೆ ಹಣ ಜಮಾ ಮಾಡುತ್ತೇವೆ. ಬಿಪಿಎಲ್ ಮತ್ತು ಎಪಿಎಲ್ ಇಬ್ಬರೂ ಅರ್ಜಿ ಹಾಕಬಹುದು. ಎಲ್ಲರಿಗೂ ಕೊಡುತ್ತೇವೆ ಎಂದರು. ಅರ್ಜಿ ಸಲ್ಲಿಸುವಾಗ ಮನೆಯಲ್ಲಿ ಯಾರು ಯಜಮಾನಿ ಎಂದು ಸ್ಪಷ್ಟಪಡಿಸಬೇಕು ಎಂದರು.

ಇದುವರೆಗೂ ವಿಶೇಷ ಚೇತನರು, ಹಿರಿಯ ವಯಸ್ಸಿನವರು, ವಿಧವಾ ವೇತನ ಪಡೆಯುತ್ತಿರುವವರು ಸಹ ಈ ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆ. ಆ ಪಿಂಚಣಿ ಜೊತೆಗೆ ಈ 2,000 ರೂ ಸಹ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

10 ಕೆಜಿ ಅಕ್ಕಿ ಉಚಿತ

ಜುಲೈ 1ನೇ ತಾರೀಖಿನಿಂದ ಎಲ್ಲಾ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ಸದ್ಯ 35 ಕೆಜಿ ಅಕ್ಕಿ ಕೊಡಲಾಗುತ್ತಿದೆ. ಮುಂದೆ ಅವರಿಗೂ ತಲಾ 10 ಕೆಜಿ ಕೊಡಲಾಗುವುದು. ಸದ್ಯಕ್ಕೆ ಸ್ಟಾಕ್ ಇಲ್ಲ. ಒಂದು ತಿಂಗಳಲ್ಲಿ ಹೇಗಾದರೂ ಮಾಡಿ ಕೊಂಡುಕೊಂಡು ಜುಲೈ 1 ರಿಂದ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ.

4 ನೇ ಗ್ಯಾರಂಟಿ – ಶಕ್ತಿ

ಸಮಾಜದಲ್ಲಿ 50% ಮಹಿಳೆಯರು ಇದ್ದಾರೆ. ಎಲ್ಲಾ ಮಹಿಳೆಯರಿಗೆ ಅವರ ಆರ್ಥಿಕ ಸ್ಥಾನಮಾನ ಹೊರತು ಪಡಿಸಿ ಎಲ್ಲರಿಗೂ ಉಚಿತ ಬಸ್ ಪ್ರಯಾಣ ಘೋಷಿಸುತ್ತಿದ್ದೇವೆ. ಜೂನ್ 11 ರಂದು ಈ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ಇದನ್ನೂ ಓದಿರಿ: ಶಾಲಾ ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದು: ಡಾ.ಹೆಚ್.ಸಿ ಮಹದೇವಪ್ಪ

ನಮ್ಮ ರಾಜ್ಯದೊಳಗೆ, ಕರ್ನಾಟಕದವರಿಗೆ ಮಾತ್ರ ಉಚಿತ ಪ್ರಯಾಣ ಇರುತ್ತದೆ. ಎ.ಸಿ ಬಸ್ ಮತ್ತು ಸ್ಲೀಪರ್ ಬಸ್, ಲಕ್ಸುರಿ ಬಸ್ ಹೊರತುಪಡಿಸಿ ಉಳಿದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವಿರುತ್ತದೆ. ಅಂದರೆ ಶೇ.90 ರಷ್ಟು ಬಸ್‌ಗಳಲ್ಲಿ ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಇರುತ್ತದೆ. ಇನ್ನು ಪುರುಷರಿಗೆ 50% ಆಸನ ಮೀಸಲು ಮಾಡಲಾಗುತ್ತದೆ.

5ನೇ ಗ್ಯಾರಂಟಿ ಯುವನಿಧಿ – ಯುವಜನರಿಗೆ 3000 ನಿರುದ್ಯೋಗ ಭತ್ಯೆ

2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು. ಅರ್ಹರು ಅರ್ಜಿ ಸಲ್ಲಿಸಬೇಕು. ಎಲ್ಲಾ ಜಾತಿ ವರ್ಗದವರೂ, ಟ್ರಾನ್ಸ್‌ಜೆಂಡರ್‌ ಸಮುದಾಯದವರು ಸಹ ಇದಕ್ಕೆ ಅರ್ಹರು ಎಂದರು.

ಇದೇ ಸಂದರ್ಭದಲ್ಲಿ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಯವರು ಪ್ರತಿಯೊಬ್ಬರಿಗೂ 15 ಲಕ್ಷ ರೂ ಕೊಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ಅಚ್ಛೇದಿನ್ ತರುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅವುಗಳನ್ನು ಜಾರಿಗೆ ತಂದರೆ? ನಾವು ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆ ನಡೆಯುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ದಂಪತಿಗಳ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...