Homeಮುಖಪುಟಸಿ.ಟಿ.ರವಿ, ಬೊಮ್ಮಾಯಿ, ಕಟೀಲ್‌ ಮನೆಗೂ 200 ಯುನಿಟ್ ವಿದ್ಯುತ್‌ ಫ್ರೀ: ಕಾಲೆಳೆದ ಕಾಂಗ್ರೆಸ್

ಸಿ.ಟಿ.ರವಿ, ಬೊಮ್ಮಾಯಿ, ಕಟೀಲ್‌ ಮನೆಗೂ 200 ಯುನಿಟ್ ವಿದ್ಯುತ್‌ ಫ್ರೀ: ಕಾಲೆಳೆದ ಕಾಂಗ್ರೆಸ್

ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ (ಪದವಿ ಪಡೆದಿದ್ದವರಿದ್ರೆ ಮಾತ್ರ)- ಕಾಂಗ್ರೆಸ್

- Advertisement -
- Advertisement -

ಐದು ಗ್ಯಾರಂಟಿಗಳ ಜಾರಿಯ ಸ್ಪಷ್ಟ ಚಿತ್ರಣವನ್ನು ಕಾಂಗ್ರೆಸ್‌ ನೀಡಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿಗಳ ಜಾರಿಯ ಕುರಿತು ವಿವರಣೆಗಳನ್ನು ನೀಡಿದ್ದಾರೆ.

ಅದರ ಬಳಿಕ ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡಿ ರಾಜ್ಯ ಬಿಜೆಪಿ ನಾಯಕರನ್ನು ಕಾಲೆಳೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರನ್ನು ಟ್ವೀಟ್‌ನಲ್ಲಿ ಟ್ಯಾಗ್ ಮಾಡಲಾಗಿದೆ.

“ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ! ಬೊಮ್ಮಾಯಿಯವರೇ, ನಿಮ್ಮ ಮನೆಗೂ ಫ್ರೀ! ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ! ಸಿ.ಟಿ.ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ! ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ತಿಳಿಸಿದೆ.

“ಕೈಲಾಗದವರು ಮೈ ಪರಚಿಕೊಂಡಂತಿದೆ ಕರ್ನಾಟಕ ಬಿಜೆಪಿಯ ಸ್ಥಿತಿ! 1 ಡಾಲರ್‌ಗೆ 15 ರೂಪಾಯಿ, ರೈತರ ಆದಾಯ ಡಬಲ್, 2022ರಲ್ಲಿ ಎಲ್ಲರಿಗೂ ವಸತಿ ಎಂದು ಸುಳ್ಳು ಭರವಸೆ ಕೊಟ್ಟು ವಂಚಿಸಿದವರಿಗೆ ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಇದೆಯೇ?” ಎಂದು ಪ್ರಶ್ನಿಸಿದೆ.

“ನಾವು ಪ್ರಶ್ನೆಗಳಿಗೆ ಹೆದರಿ ಓಡುವವರಲ್ಲ, ಬಿಜೆಪಿಗೆ ತಾಕತ್ತಿದ್ದರೆ ಮೋದಿಯವರಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ಮಾಡಿಸಲಿ” ಎಂದು ಸವಾಲು ಹಾಕಿದೆ.

ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ, “ಪ್ರತಿ ಮನೆಗೂ 200 ಯುನಿಟ್‌ ವಿದ್ಯುತ್‌ ಉಚಿತ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌,‍ ಕಾಂಗ್ರೆಸ್ ಅಭ್ಯರ್ಥಿಗಳು ಮನೆಮನೆಗೆ ಹೋಗಿ ಕೂಗಿದರು. ಈಗ ಒಂದು ವರ್ಷದ ಸರಾಸರಿ ವಿದ್ಯುತ್‌ ಬಳಕೆ ಎಷ್ಟಿತ್ತೋ, ಅದರ ಮೇಲೆ 10% ಅಷ್ಟು ‘ಮಾತ್ರ’ ಉಚಿತ ಎಂದು ಜನರಿಗೆ ಶಾಕ್‌ ನೀಡುತ್ತಿದ್ದಾರೆ. ಎರಡು ನಾಲಗೆಯ ಇಬ್ಬಂದಿ ಪಕ್ಷ ಕಾಂಗ್ರೆಸ್‌” ಎಂದು ಟ್ವೀಟ್ ಮಾಡಿದೆ.

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೊದಲ ಗ್ಯಾರಂಟಿ – ಗೃಹ ಜ್ಯೋತಿ

200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಲ್ಲರಿಗೂ ಕೊಡುತ್ತೇವೆ. ಇದನ್ನು ಜಾರಿ ಮಾಡಲು ತೀರ್ಮಾನಿಸಿದ್ದೇವೆ. 199 ಯೂನಿಟ್‌ವರೆಗೂ ಫ್ರಿ ವಿದ್ಯುತ್ ಕೊಡುತ್ತೇವೆ. 12 ತಿಂಗಳ ಸರಾಸರಿ ನೋಡುತ್ತೇವೆ. ಅದರ ಮೇಲೆ 10% ಉಚಿತವಾಗಿ ಕೊಡುತ್ತೇವೆ. ಈ ವರ್ಷದ ಜುಲೈ 1 ರಿಂದ ಫ್ರೀ ಜಾರಿಯಾಗುತ್ತದೆ ಎಂದರು. ಆದರೆ ಇದುವರೆಗೂ ಉಳಿಸಿಕೊಂಡಿರುವ ಬಾಕಿಯನ್ನು ಜನರೇ ಕಟ್ಟಬೇಕು ಎಂದರು.

ಎರಡನೇ ಗ್ಯಾರಂಟಿ – ಗೃಹ ಲಕ್ಷ್ಮೀ

ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತೇವೆ. ಅದಕ್ಕಾಗಿ ಅರ್ಜಿ ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ಸ್ ಕೊಡಬೇಕು. ಮನೆ ಯಜಮಾನಿಗೆ ಎಂದು ಹೇಳಿದ್ದೇವೆ. ಅವರ ಖಾತೆಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ. ಜೂನ್ 15 ರಿಂದ ಜುಲೈ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15 ರೊಳಗೆ ಪ್ರಕ್ರಿಯೆ ಮಾಡಿ ಆಗಸ್ಟ್ 15ನೇ ತಾರೀಖು ಎಲ್ಲ ಮನೆಯೊಡತಿಯರ ಖಾತೆಗೆ ಹಣ ಜಮಾ ಮಾಡುತ್ತೇವೆ. ಬಿಪಿಎಲ್ ಮತ್ತು ಎಪಿಎಲ್ ಇಬ್ಬರೂ ಅರ್ಜಿ ಹಾಕಬಹುದು. ಎಲ್ಲರಿಗೂ ಕೊಡುತ್ತೇವೆ ಎಂದರು. ಅರ್ಜಿ ಸಲ್ಲಿಸುವಾಗ ಮನೆಯಲ್ಲಿ ಯಾರು ಯಜಮಾನಿ ಎಂದು ಸ್ಪಷ್ಟಪಡಿಸಬೇಕು ಎಂದರು.

ಇದುವರೆಗೂ ವಿಶೇಷ ಚೇತನರು, ಹಿರಿಯ ವಯಸ್ಸಿನವರು, ವಿಧವಾ ವೇತನ ಪಡೆಯುತ್ತಿರುವವರು ಸಹ ಈ ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆ. ಆ ಪಿಂಚಣಿ ಜೊತೆಗೆ ಈ 2,000 ರೂ ಸಹ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

10 ಕೆಜಿ ಅಕ್ಕಿ ಉಚಿತ

ಜುಲೈ 1ನೇ ತಾರೀಖಿನಿಂದ ಎಲ್ಲಾ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ಸದ್ಯ 35 ಕೆಜಿ ಅಕ್ಕಿ ಕೊಡಲಾಗುತ್ತಿದೆ. ಮುಂದೆ ಅವರಿಗೂ ತಲಾ 10 ಕೆಜಿ ಕೊಡಲಾಗುವುದು. ಸದ್ಯಕ್ಕೆ ಸ್ಟಾಕ್ ಇಲ್ಲ. ಒಂದು ತಿಂಗಳಲ್ಲಿ ಹೇಗಾದರೂ ಮಾಡಿ ಕೊಂಡುಕೊಂಡು ಜುಲೈ 1 ರಿಂದ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ.

4 ನೇ ಗ್ಯಾರಂಟಿ – ಶಕ್ತಿ

ಸಮಾಜದಲ್ಲಿ 50% ಮಹಿಳೆಯರು ಇದ್ದಾರೆ. ಎಲ್ಲಾ ಮಹಿಳೆಯರಿಗೆ ಅವರ ಆರ್ಥಿಕ ಸ್ಥಾನಮಾನ ಹೊರತು ಪಡಿಸಿ ಎಲ್ಲರಿಗೂ ಉಚಿತ ಬಸ್ ಪ್ರಯಾಣ ಘೋಷಿಸುತ್ತಿದ್ದೇವೆ. ಜೂನ್ 11 ರಂದು ಈ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ಇದನ್ನೂ ಓದಿರಿ: ಶಾಲಾ ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದು: ಡಾ.ಹೆಚ್.ಸಿ ಮಹದೇವಪ್ಪ

ನಮ್ಮ ರಾಜ್ಯದೊಳಗೆ, ಕರ್ನಾಟಕದವರಿಗೆ ಮಾತ್ರ ಉಚಿತ ಪ್ರಯಾಣ ಇರುತ್ತದೆ. ಎ.ಸಿ ಬಸ್ ಮತ್ತು ಸ್ಲೀಪರ್ ಬಸ್, ಲಕ್ಸುರಿ ಬಸ್ ಹೊರತುಪಡಿಸಿ ಉಳಿದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವಿರುತ್ತದೆ. ಅಂದರೆ ಶೇ.90 ರಷ್ಟು ಬಸ್‌ಗಳಲ್ಲಿ ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಇರುತ್ತದೆ. ಇನ್ನು ಪುರುಷರಿಗೆ 50% ಆಸನ ಮೀಸಲು ಮಾಡಲಾಗುತ್ತದೆ.

5ನೇ ಗ್ಯಾರಂಟಿ ಯುವನಿಧಿ – ಯುವಜನರಿಗೆ 3000 ನಿರುದ್ಯೋಗ ಭತ್ಯೆ

2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು. ಅರ್ಹರು ಅರ್ಜಿ ಸಲ್ಲಿಸಬೇಕು. ಎಲ್ಲಾ ಜಾತಿ ವರ್ಗದವರೂ, ಟ್ರಾನ್ಸ್‌ಜೆಂಡರ್‌ ಸಮುದಾಯದವರು ಸಹ ಇದಕ್ಕೆ ಅರ್ಹರು ಎಂದರು.

ಇದೇ ಸಂದರ್ಭದಲ್ಲಿ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಯವರು ಪ್ರತಿಯೊಬ್ಬರಿಗೂ 15 ಲಕ್ಷ ರೂ ಕೊಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ಅಚ್ಛೇದಿನ್ ತರುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅವುಗಳನ್ನು ಜಾರಿಗೆ ತಂದರೆ? ನಾವು ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆ ನಡೆಯುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...