Homeಮುಖಪುಟಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

- Advertisement -
- Advertisement -

ಮೇ 16 ರಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಮ್ಮ ಸ್ನೇಹಿತರಿಗೆ ಅಮೇರಿಕಾದಿಂದ ವೆಂಟಿಲೇಟರುಗಳನ್ನು ದಾನ ಮಾಡುತ್ತೇವೆ ಎಂದು ತಮ್ಮ ಟ್ವಿಟ್ಟರ್‌ ಅಕೌಂಟಿನಿಂದ ಸಂದೇಶವನ್ನು ಹಾಕಿದ್ದರು. ಅಷ್ಟಕ್ಕೆ ದೇಶದಲ್ಲಿ ಭಾರಿ ಸುದ್ದಿಯಾಯಿತು.

ವಾಸ್ತವದಲ್ಲಿ ಅಮೆರಿಕಾ ಹೇಳಿದ್ದು ಕೇವಲ 200 ವೆಂಟಿಲೇಟರುಗಳನ್ನು ಕೊಡುವುದಷ್ಟೇ ಆಗಿತ್ತು. 135 ಕೋಟಿಗಿಂತಲೂ ಜಾಸ್ತಿ ಜನಸಂಖ್ಯೆಯಿರುವ, 60,000 ಕ್ಕೂ ಹೆಚ್ಚು ಕೊರೊನಾ ರೋಗಿಗಳಿರುವ ಭಾರತಕ್ಕೆ 200 ವೆಂಟಿಲೇಟರುಗಳು ದೊಡ್ಡ ವಿಷಯವೇನೂ ಅಲ್ಲ, ಆದರೆ ಪ್ರಸ್ತುತ ಬಿಕ್ಕಟ್ಟಿನಲ್ಲಿ ಒಂದು ಹುಲ್ಲು ಕಡ್ಡಿ ಕೂಡಾ ದೊಡ್ಡ ವಿಷಯವೇ ಆಗಿರುತ್ತದೆ ಅಂದುಕೊಳ್ಳೋಣ.

ಆದರೆ ಇಲ್ಲಿ ವೆಂಟಿಲೇಟರ್‌ಗಿಂತ ಹೆಚ್ಚಾಗಿ ಅಮೇರಿಕಾದಂತಹ ದೊಡ್ಡಣ್ಣ ಭಾರತವನ್ನು ’ಫ್ರೆಂಡ್’ ಎಂದು ಕರೆದದ್ದನ್ನು ಮಹಾವಿಷಯವಾಗಿ ನೋಡಲಾಯಿತು, ಅಂದರೆ ಆರೋಗ್ಯಕ್ಕಿಂತ ಹೆಚ್ಚು ಇದನ್ನು ರಾಜಕೀಯವಾಗಿಯೆ ಹೆಚ್ಚು ಪ್ರಚಾರ ಪಡೆಯಲು ಬಳಸಲಾಯಿತು. ನಿಜಕ್ಕೂ ಹೇಳಬೇಕೆದಂರೆ ಅಮೇರಿಕಾದಂತಹ ಬಂಡವಾಳಶಾಹಿ ದೇಶ ಯಾವ ಕೊಡುಗೆಯನ್ನೂ ಕೂಡಾ ಪುಕ್ಕಟೆಯಾಗಿ ನೀಡಲ್ಲ, ಅದರ ಪ್ರತಿಯೊಂದೂ ನಡೆಯಲ್ಲೂ ವ್ಯಾಪಾರ ಹಾಗೂ ಲಾಭದ ಉದ್ದೇಶ ಇದ್ದೇ ಇರುತ್ತದೆ.

ನವೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಯಿದೆ ಹಾಗೂ ಟ್ರಂಪ್ ಭಾರತೀಯ ಮೂಲದ ಮತದಾರರನ್ನು ಸೆಳೆಯಲು ಈ ಹಿಂದಿನಿಂಲೂ ಬಹಳ ಕಸರತ್ತು ನಡೆಸುತ್ತಿರುವುದು ಎಲ್ಲರಿಗೂ ತಿಳಿಯದ್ದೇನಲ್ಲ. ಟ್ರಂಪ್ ಘೋಷಿಸಿದ ಈ ದಾನದಲ್ಲೂ ಏನು ಉದ್ಧೇಶವಿದೆಯೆಂದು ನಾವು ಹುಡುಕಲೇ ಬೇಕಾಗುತ್ತದೆ.

ಟ್ರಂಪ್ ದಾನ ಘೋಷಿಸಿದ ಗಂಟೆಗಳ ಅಂತರದಲ್ಲಿ ನಮ್ಮ ದೇಶದ ಪ್ರಧಾನಿಯೂ ಅವರಿಗೆ ಧನ್ಯವಾದ ಅರ್ಪಿಸಿ ಪುನೀತರಾದರು. ಅಮೇರಿಕಾ ಭಾರತ ಸ್ನೇಹ ಇನ್ನೂ ಗಟ್ಟಿಯಾಗಲಿ ಎಂದು ಹಾರೈಸಿದರು. ಇವೆಲ್ಲವೂ ಒಳ್ಳೆಯದೇ, ಆದರೆ ದೇಶದ ವಲಸಿಗರ ನೋವು, ಪಾದಗಳ ರಕ್ತ, ಕಣ್ಣೀರು, ಹತಾಶೆ ನಮ್ಮ ಪ್ರಧಾನಿಯ ಟ್ವಿಟ್ಟರ್ ಖಾತೆಗೆ, ಅವರ ಕಣ್ಣು-ಕಿವಿಗೆ, ಅವರ ಹೃದಯವನ್ನು ಕಲಕಿಲ್ಲ ಹಾಗೂ ತಲುಪಿಲ್ಲ ಎಂದರೆ… ಏನು ಹೇಳುವುದು?

ಪ್ರಧಾನಿಯಾದಿಯಾಗಿ ಮಾಧ್ಯಮಗಳ ಸಹಿತ ಇಷ್ಟೆಲ್ಲ ಪ್ರಚಾರ ಪಡೆದ ಈ ವೆಂಟಿಲೇಟರ್ ಭಾರತವನ್ನು ಮುಂದಿನವಾರ ತಲುಪಬಹುದು. ಆದರೆ ಅಮೇರಿಕಾ ಘೋಷಿಸಿದ 200 ವೆಂಟಿಲೇಟರುಗಳಲ್ಲಿ ಸದ್ಯಕ್ಕೆ ಭಾರತವನ್ನು ತಲುಪಿರುವುದು ಕೇವಲ 50 ಮಾತ್ರ!. ಬಾಕಿ ವೆಂಟಿಲೇಟರುಗಳು ಯಾವತ್ತು ಬರಲಿವೆ ಎಂದು ಅಮೇರಿಕವೆ ಹೇಳಲಿದೆ.

ಸಧ್ಯಕ್ಕೆ ಭಾರತದಲ್ಲಿ ಇರುವ ವೆಂಟಿಲೇಟರುಗಳ ಸಂಖ್ಯೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ 48 ಸಾವಿರ. ಈ ಬರಹ ಬರೆಯುತ್ತಿರುವ ಹೊತ್ತಿಗೆ ಭಾರತದಲ್ಲಿ 1 ಲಕ್ಷದ ಆರು ಸಾವಿಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ 3300 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿವೆ. ಕೊರೊನಾ ತಡೆಯಲು ಯಾವುದೇ ಮಾಹಿತಿಯಿಲ್ಲದೆ ಏಕಾಏಕಿ ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಾದ್ಯಂತ ಹೆದ್ದಾರಿಗಳಲ್ಲೇ ನೂರಾರು ಜೀವಗಳು ಅಸುನೀಗಿವೆ.

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

ಇವೆಲ್ಲವನ್ನೂ ಬಿಡಿ, ದೊಡ್ಡಣ್ಣ ಎಣಿಸಿ ಕೊಂಡಿರುವ ಅಮೆರಿಕಾ ನಮಗೆ 200 ವೆಂಟಿಲೇಟರ್‌ ದಾನ ನೀಡುತ್ತೇವೆ ಎಂದಿದೆ. ಆದರೆ ಅಮೆರಿಕಾದಲ್ಲಿ ಇದುವರೆಗೂ 15 ಲಕ್ಷದ ಹದಿನೈದು ಸಾವಿರ ಕೊರೊನಾ ಸೋಂಕಿತರು ಇದ್ದು, 92 ಸಾವಿರಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾಸೋಂಕಿತರಿರುವ ದೇಶವದು. ಅಲ್ಲಿನ ವೈದ್ಯರು ಅಮೆರಿಕಾದಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ಲವೆಂದು ಹೇಳುತ್ತಿದ್ದಾರೆ. ವರದಿಯೊಂದರ ಪ್ರಕಾರ ಅಮೇರಿಕಾದಲ್ಲಿ ಸಧ್ಯಕ್ಕೆ 9 ಲಕ್ಷ ಜನರಿಗೆ ವೆಂಟಿಲೇಟರುಗಳ ಅಗತ್ಯವಿದೆ. ಆದರೆ ಅಲ್ಲಿರುವ ವೆಂಟಿಲೇಟರುಗಳು 2 ಲಕ್ಷ ಮಾತ್ರ.

ಒಟ್ಟಿನಲ್ಲಿ ತನ್ನ ದೇಶದ ಬಗ್ಗೆ ಯಾವುದೆ ಕಾಳಜಿಯಿಲ್ಲದ ನಾಯಕರಿಬ್ಬರು ಕೊರೊನಾದಂತಹ ಜಾಗತಿಕ ಬಿಕ್ಕಟ್ಟಿನಲ್ಲೂ ಪ್ರಚಾರದಲ್ಲಿರಲು ಹಾಗೂ ಪ್ರಚಾರ ಪಡೆಯಲು ಹವಣಿಸುತ್ತಲೇ ಇದ್ದಾರೆ. ಅದಕ್ಕಾಗಿ ಕೆಲವು ತುತ್ತೂರಿ ಊದುವ ಮಾಧ್ಯಮಗಳು ಕಾಯುತ್ತಲೇ ಇದೆ.


ಓದಿ: ಅತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...