Homeಮುಖಪುಟಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

- Advertisement -
- Advertisement -

ಮೇ 16 ರಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಮ್ಮ ಸ್ನೇಹಿತರಿಗೆ ಅಮೇರಿಕಾದಿಂದ ವೆಂಟಿಲೇಟರುಗಳನ್ನು ದಾನ ಮಾಡುತ್ತೇವೆ ಎಂದು ತಮ್ಮ ಟ್ವಿಟ್ಟರ್‌ ಅಕೌಂಟಿನಿಂದ ಸಂದೇಶವನ್ನು ಹಾಕಿದ್ದರು. ಅಷ್ಟಕ್ಕೆ ದೇಶದಲ್ಲಿ ಭಾರಿ ಸುದ್ದಿಯಾಯಿತು.

ವಾಸ್ತವದಲ್ಲಿ ಅಮೆರಿಕಾ ಹೇಳಿದ್ದು ಕೇವಲ 200 ವೆಂಟಿಲೇಟರುಗಳನ್ನು ಕೊಡುವುದಷ್ಟೇ ಆಗಿತ್ತು. 135 ಕೋಟಿಗಿಂತಲೂ ಜಾಸ್ತಿ ಜನಸಂಖ್ಯೆಯಿರುವ, 60,000 ಕ್ಕೂ ಹೆಚ್ಚು ಕೊರೊನಾ ರೋಗಿಗಳಿರುವ ಭಾರತಕ್ಕೆ 200 ವೆಂಟಿಲೇಟರುಗಳು ದೊಡ್ಡ ವಿಷಯವೇನೂ ಅಲ್ಲ, ಆದರೆ ಪ್ರಸ್ತುತ ಬಿಕ್ಕಟ್ಟಿನಲ್ಲಿ ಒಂದು ಹುಲ್ಲು ಕಡ್ಡಿ ಕೂಡಾ ದೊಡ್ಡ ವಿಷಯವೇ ಆಗಿರುತ್ತದೆ ಅಂದುಕೊಳ್ಳೋಣ.

ಆದರೆ ಇಲ್ಲಿ ವೆಂಟಿಲೇಟರ್‌ಗಿಂತ ಹೆಚ್ಚಾಗಿ ಅಮೇರಿಕಾದಂತಹ ದೊಡ್ಡಣ್ಣ ಭಾರತವನ್ನು ’ಫ್ರೆಂಡ್’ ಎಂದು ಕರೆದದ್ದನ್ನು ಮಹಾವಿಷಯವಾಗಿ ನೋಡಲಾಯಿತು, ಅಂದರೆ ಆರೋಗ್ಯಕ್ಕಿಂತ ಹೆಚ್ಚು ಇದನ್ನು ರಾಜಕೀಯವಾಗಿಯೆ ಹೆಚ್ಚು ಪ್ರಚಾರ ಪಡೆಯಲು ಬಳಸಲಾಯಿತು. ನಿಜಕ್ಕೂ ಹೇಳಬೇಕೆದಂರೆ ಅಮೇರಿಕಾದಂತಹ ಬಂಡವಾಳಶಾಹಿ ದೇಶ ಯಾವ ಕೊಡುಗೆಯನ್ನೂ ಕೂಡಾ ಪುಕ್ಕಟೆಯಾಗಿ ನೀಡಲ್ಲ, ಅದರ ಪ್ರತಿಯೊಂದೂ ನಡೆಯಲ್ಲೂ ವ್ಯಾಪಾರ ಹಾಗೂ ಲಾಭದ ಉದ್ದೇಶ ಇದ್ದೇ ಇರುತ್ತದೆ.

ನವೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಯಿದೆ ಹಾಗೂ ಟ್ರಂಪ್ ಭಾರತೀಯ ಮೂಲದ ಮತದಾರರನ್ನು ಸೆಳೆಯಲು ಈ ಹಿಂದಿನಿಂಲೂ ಬಹಳ ಕಸರತ್ತು ನಡೆಸುತ್ತಿರುವುದು ಎಲ್ಲರಿಗೂ ತಿಳಿಯದ್ದೇನಲ್ಲ. ಟ್ರಂಪ್ ಘೋಷಿಸಿದ ಈ ದಾನದಲ್ಲೂ ಏನು ಉದ್ಧೇಶವಿದೆಯೆಂದು ನಾವು ಹುಡುಕಲೇ ಬೇಕಾಗುತ್ತದೆ.

ಟ್ರಂಪ್ ದಾನ ಘೋಷಿಸಿದ ಗಂಟೆಗಳ ಅಂತರದಲ್ಲಿ ನಮ್ಮ ದೇಶದ ಪ್ರಧಾನಿಯೂ ಅವರಿಗೆ ಧನ್ಯವಾದ ಅರ್ಪಿಸಿ ಪುನೀತರಾದರು. ಅಮೇರಿಕಾ ಭಾರತ ಸ್ನೇಹ ಇನ್ನೂ ಗಟ್ಟಿಯಾಗಲಿ ಎಂದು ಹಾರೈಸಿದರು. ಇವೆಲ್ಲವೂ ಒಳ್ಳೆಯದೇ, ಆದರೆ ದೇಶದ ವಲಸಿಗರ ನೋವು, ಪಾದಗಳ ರಕ್ತ, ಕಣ್ಣೀರು, ಹತಾಶೆ ನಮ್ಮ ಪ್ರಧಾನಿಯ ಟ್ವಿಟ್ಟರ್ ಖಾತೆಗೆ, ಅವರ ಕಣ್ಣು-ಕಿವಿಗೆ, ಅವರ ಹೃದಯವನ್ನು ಕಲಕಿಲ್ಲ ಹಾಗೂ ತಲುಪಿಲ್ಲ ಎಂದರೆ… ಏನು ಹೇಳುವುದು?

ಪ್ರಧಾನಿಯಾದಿಯಾಗಿ ಮಾಧ್ಯಮಗಳ ಸಹಿತ ಇಷ್ಟೆಲ್ಲ ಪ್ರಚಾರ ಪಡೆದ ಈ ವೆಂಟಿಲೇಟರ್ ಭಾರತವನ್ನು ಮುಂದಿನವಾರ ತಲುಪಬಹುದು. ಆದರೆ ಅಮೇರಿಕಾ ಘೋಷಿಸಿದ 200 ವೆಂಟಿಲೇಟರುಗಳಲ್ಲಿ ಸದ್ಯಕ್ಕೆ ಭಾರತವನ್ನು ತಲುಪಿರುವುದು ಕೇವಲ 50 ಮಾತ್ರ!. ಬಾಕಿ ವೆಂಟಿಲೇಟರುಗಳು ಯಾವತ್ತು ಬರಲಿವೆ ಎಂದು ಅಮೇರಿಕವೆ ಹೇಳಲಿದೆ.

ಸಧ್ಯಕ್ಕೆ ಭಾರತದಲ್ಲಿ ಇರುವ ವೆಂಟಿಲೇಟರುಗಳ ಸಂಖ್ಯೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ 48 ಸಾವಿರ. ಈ ಬರಹ ಬರೆಯುತ್ತಿರುವ ಹೊತ್ತಿಗೆ ಭಾರತದಲ್ಲಿ 1 ಲಕ್ಷದ ಆರು ಸಾವಿಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ 3300 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿವೆ. ಕೊರೊನಾ ತಡೆಯಲು ಯಾವುದೇ ಮಾಹಿತಿಯಿಲ್ಲದೆ ಏಕಾಏಕಿ ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಾದ್ಯಂತ ಹೆದ್ದಾರಿಗಳಲ್ಲೇ ನೂರಾರು ಜೀವಗಳು ಅಸುನೀಗಿವೆ.

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

ಇವೆಲ್ಲವನ್ನೂ ಬಿಡಿ, ದೊಡ್ಡಣ್ಣ ಎಣಿಸಿ ಕೊಂಡಿರುವ ಅಮೆರಿಕಾ ನಮಗೆ 200 ವೆಂಟಿಲೇಟರ್‌ ದಾನ ನೀಡುತ್ತೇವೆ ಎಂದಿದೆ. ಆದರೆ ಅಮೆರಿಕಾದಲ್ಲಿ ಇದುವರೆಗೂ 15 ಲಕ್ಷದ ಹದಿನೈದು ಸಾವಿರ ಕೊರೊನಾ ಸೋಂಕಿತರು ಇದ್ದು, 92 ಸಾವಿರಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾಸೋಂಕಿತರಿರುವ ದೇಶವದು. ಅಲ್ಲಿನ ವೈದ್ಯರು ಅಮೆರಿಕಾದಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ಲವೆಂದು ಹೇಳುತ್ತಿದ್ದಾರೆ. ವರದಿಯೊಂದರ ಪ್ರಕಾರ ಅಮೇರಿಕಾದಲ್ಲಿ ಸಧ್ಯಕ್ಕೆ 9 ಲಕ್ಷ ಜನರಿಗೆ ವೆಂಟಿಲೇಟರುಗಳ ಅಗತ್ಯವಿದೆ. ಆದರೆ ಅಲ್ಲಿರುವ ವೆಂಟಿಲೇಟರುಗಳು 2 ಲಕ್ಷ ಮಾತ್ರ.

ಒಟ್ಟಿನಲ್ಲಿ ತನ್ನ ದೇಶದ ಬಗ್ಗೆ ಯಾವುದೆ ಕಾಳಜಿಯಿಲ್ಲದ ನಾಯಕರಿಬ್ಬರು ಕೊರೊನಾದಂತಹ ಜಾಗತಿಕ ಬಿಕ್ಕಟ್ಟಿನಲ್ಲೂ ಪ್ರಚಾರದಲ್ಲಿರಲು ಹಾಗೂ ಪ್ರಚಾರ ಪಡೆಯಲು ಹವಣಿಸುತ್ತಲೇ ಇದ್ದಾರೆ. ಅದಕ್ಕಾಗಿ ಕೆಲವು ತುತ್ತೂರಿ ಊದುವ ಮಾಧ್ಯಮಗಳು ಕಾಯುತ್ತಲೇ ಇದೆ.


ಓದಿ: ಅತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...