Homeಮುಖಪುಟಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

- Advertisement -
- Advertisement -

ಮೇ 16 ರಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಮ್ಮ ಸ್ನೇಹಿತರಿಗೆ ಅಮೇರಿಕಾದಿಂದ ವೆಂಟಿಲೇಟರುಗಳನ್ನು ದಾನ ಮಾಡುತ್ತೇವೆ ಎಂದು ತಮ್ಮ ಟ್ವಿಟ್ಟರ್‌ ಅಕೌಂಟಿನಿಂದ ಸಂದೇಶವನ್ನು ಹಾಕಿದ್ದರು. ಅಷ್ಟಕ್ಕೆ ದೇಶದಲ್ಲಿ ಭಾರಿ ಸುದ್ದಿಯಾಯಿತು.

ವಾಸ್ತವದಲ್ಲಿ ಅಮೆರಿಕಾ ಹೇಳಿದ್ದು ಕೇವಲ 200 ವೆಂಟಿಲೇಟರುಗಳನ್ನು ಕೊಡುವುದಷ್ಟೇ ಆಗಿತ್ತು. 135 ಕೋಟಿಗಿಂತಲೂ ಜಾಸ್ತಿ ಜನಸಂಖ್ಯೆಯಿರುವ, 60,000 ಕ್ಕೂ ಹೆಚ್ಚು ಕೊರೊನಾ ರೋಗಿಗಳಿರುವ ಭಾರತಕ್ಕೆ 200 ವೆಂಟಿಲೇಟರುಗಳು ದೊಡ್ಡ ವಿಷಯವೇನೂ ಅಲ್ಲ, ಆದರೆ ಪ್ರಸ್ತುತ ಬಿಕ್ಕಟ್ಟಿನಲ್ಲಿ ಒಂದು ಹುಲ್ಲು ಕಡ್ಡಿ ಕೂಡಾ ದೊಡ್ಡ ವಿಷಯವೇ ಆಗಿರುತ್ತದೆ ಅಂದುಕೊಳ್ಳೋಣ.

ಆದರೆ ಇಲ್ಲಿ ವೆಂಟಿಲೇಟರ್‌ಗಿಂತ ಹೆಚ್ಚಾಗಿ ಅಮೇರಿಕಾದಂತಹ ದೊಡ್ಡಣ್ಣ ಭಾರತವನ್ನು ’ಫ್ರೆಂಡ್’ ಎಂದು ಕರೆದದ್ದನ್ನು ಮಹಾವಿಷಯವಾಗಿ ನೋಡಲಾಯಿತು, ಅಂದರೆ ಆರೋಗ್ಯಕ್ಕಿಂತ ಹೆಚ್ಚು ಇದನ್ನು ರಾಜಕೀಯವಾಗಿಯೆ ಹೆಚ್ಚು ಪ್ರಚಾರ ಪಡೆಯಲು ಬಳಸಲಾಯಿತು. ನಿಜಕ್ಕೂ ಹೇಳಬೇಕೆದಂರೆ ಅಮೇರಿಕಾದಂತಹ ಬಂಡವಾಳಶಾಹಿ ದೇಶ ಯಾವ ಕೊಡುಗೆಯನ್ನೂ ಕೂಡಾ ಪುಕ್ಕಟೆಯಾಗಿ ನೀಡಲ್ಲ, ಅದರ ಪ್ರತಿಯೊಂದೂ ನಡೆಯಲ್ಲೂ ವ್ಯಾಪಾರ ಹಾಗೂ ಲಾಭದ ಉದ್ದೇಶ ಇದ್ದೇ ಇರುತ್ತದೆ.

ನವೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಯಿದೆ ಹಾಗೂ ಟ್ರಂಪ್ ಭಾರತೀಯ ಮೂಲದ ಮತದಾರರನ್ನು ಸೆಳೆಯಲು ಈ ಹಿಂದಿನಿಂಲೂ ಬಹಳ ಕಸರತ್ತು ನಡೆಸುತ್ತಿರುವುದು ಎಲ್ಲರಿಗೂ ತಿಳಿಯದ್ದೇನಲ್ಲ. ಟ್ರಂಪ್ ಘೋಷಿಸಿದ ಈ ದಾನದಲ್ಲೂ ಏನು ಉದ್ಧೇಶವಿದೆಯೆಂದು ನಾವು ಹುಡುಕಲೇ ಬೇಕಾಗುತ್ತದೆ.

ಟ್ರಂಪ್ ದಾನ ಘೋಷಿಸಿದ ಗಂಟೆಗಳ ಅಂತರದಲ್ಲಿ ನಮ್ಮ ದೇಶದ ಪ್ರಧಾನಿಯೂ ಅವರಿಗೆ ಧನ್ಯವಾದ ಅರ್ಪಿಸಿ ಪುನೀತರಾದರು. ಅಮೇರಿಕಾ ಭಾರತ ಸ್ನೇಹ ಇನ್ನೂ ಗಟ್ಟಿಯಾಗಲಿ ಎಂದು ಹಾರೈಸಿದರು. ಇವೆಲ್ಲವೂ ಒಳ್ಳೆಯದೇ, ಆದರೆ ದೇಶದ ವಲಸಿಗರ ನೋವು, ಪಾದಗಳ ರಕ್ತ, ಕಣ್ಣೀರು, ಹತಾಶೆ ನಮ್ಮ ಪ್ರಧಾನಿಯ ಟ್ವಿಟ್ಟರ್ ಖಾತೆಗೆ, ಅವರ ಕಣ್ಣು-ಕಿವಿಗೆ, ಅವರ ಹೃದಯವನ್ನು ಕಲಕಿಲ್ಲ ಹಾಗೂ ತಲುಪಿಲ್ಲ ಎಂದರೆ… ಏನು ಹೇಳುವುದು?

ಪ್ರಧಾನಿಯಾದಿಯಾಗಿ ಮಾಧ್ಯಮಗಳ ಸಹಿತ ಇಷ್ಟೆಲ್ಲ ಪ್ರಚಾರ ಪಡೆದ ಈ ವೆಂಟಿಲೇಟರ್ ಭಾರತವನ್ನು ಮುಂದಿನವಾರ ತಲುಪಬಹುದು. ಆದರೆ ಅಮೇರಿಕಾ ಘೋಷಿಸಿದ 200 ವೆಂಟಿಲೇಟರುಗಳಲ್ಲಿ ಸದ್ಯಕ್ಕೆ ಭಾರತವನ್ನು ತಲುಪಿರುವುದು ಕೇವಲ 50 ಮಾತ್ರ!. ಬಾಕಿ ವೆಂಟಿಲೇಟರುಗಳು ಯಾವತ್ತು ಬರಲಿವೆ ಎಂದು ಅಮೇರಿಕವೆ ಹೇಳಲಿದೆ.

ಸಧ್ಯಕ್ಕೆ ಭಾರತದಲ್ಲಿ ಇರುವ ವೆಂಟಿಲೇಟರುಗಳ ಸಂಖ್ಯೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ 48 ಸಾವಿರ. ಈ ಬರಹ ಬರೆಯುತ್ತಿರುವ ಹೊತ್ತಿಗೆ ಭಾರತದಲ್ಲಿ 1 ಲಕ್ಷದ ಆರು ಸಾವಿಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ 3300 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿವೆ. ಕೊರೊನಾ ತಡೆಯಲು ಯಾವುದೇ ಮಾಹಿತಿಯಿಲ್ಲದೆ ಏಕಾಏಕಿ ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಾದ್ಯಂತ ಹೆದ್ದಾರಿಗಳಲ್ಲೇ ನೂರಾರು ಜೀವಗಳು ಅಸುನೀಗಿವೆ.

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

ಇವೆಲ್ಲವನ್ನೂ ಬಿಡಿ, ದೊಡ್ಡಣ್ಣ ಎಣಿಸಿ ಕೊಂಡಿರುವ ಅಮೆರಿಕಾ ನಮಗೆ 200 ವೆಂಟಿಲೇಟರ್‌ ದಾನ ನೀಡುತ್ತೇವೆ ಎಂದಿದೆ. ಆದರೆ ಅಮೆರಿಕಾದಲ್ಲಿ ಇದುವರೆಗೂ 15 ಲಕ್ಷದ ಹದಿನೈದು ಸಾವಿರ ಕೊರೊನಾ ಸೋಂಕಿತರು ಇದ್ದು, 92 ಸಾವಿರಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾಸೋಂಕಿತರಿರುವ ದೇಶವದು. ಅಲ್ಲಿನ ವೈದ್ಯರು ಅಮೆರಿಕಾದಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ಲವೆಂದು ಹೇಳುತ್ತಿದ್ದಾರೆ. ವರದಿಯೊಂದರ ಪ್ರಕಾರ ಅಮೇರಿಕಾದಲ್ಲಿ ಸಧ್ಯಕ್ಕೆ 9 ಲಕ್ಷ ಜನರಿಗೆ ವೆಂಟಿಲೇಟರುಗಳ ಅಗತ್ಯವಿದೆ. ಆದರೆ ಅಲ್ಲಿರುವ ವೆಂಟಿಲೇಟರುಗಳು 2 ಲಕ್ಷ ಮಾತ್ರ.

ಒಟ್ಟಿನಲ್ಲಿ ತನ್ನ ದೇಶದ ಬಗ್ಗೆ ಯಾವುದೆ ಕಾಳಜಿಯಿಲ್ಲದ ನಾಯಕರಿಬ್ಬರು ಕೊರೊನಾದಂತಹ ಜಾಗತಿಕ ಬಿಕ್ಕಟ್ಟಿನಲ್ಲೂ ಪ್ರಚಾರದಲ್ಲಿರಲು ಹಾಗೂ ಪ್ರಚಾರ ಪಡೆಯಲು ಹವಣಿಸುತ್ತಲೇ ಇದ್ದಾರೆ. ಅದಕ್ಕಾಗಿ ಕೆಲವು ತುತ್ತೂರಿ ಊದುವ ಮಾಧ್ಯಮಗಳು ಕಾಯುತ್ತಲೇ ಇದೆ.


ಓದಿ: ಅತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...