Homeಮುಖಪುಟಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

- Advertisement -
- Advertisement -

ಮೇ 16 ರಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಮ್ಮ ಸ್ನೇಹಿತರಿಗೆ ಅಮೇರಿಕಾದಿಂದ ವೆಂಟಿಲೇಟರುಗಳನ್ನು ದಾನ ಮಾಡುತ್ತೇವೆ ಎಂದು ತಮ್ಮ ಟ್ವಿಟ್ಟರ್‌ ಅಕೌಂಟಿನಿಂದ ಸಂದೇಶವನ್ನು ಹಾಕಿದ್ದರು. ಅಷ್ಟಕ್ಕೆ ದೇಶದಲ್ಲಿ ಭಾರಿ ಸುದ್ದಿಯಾಯಿತು.

ವಾಸ್ತವದಲ್ಲಿ ಅಮೆರಿಕಾ ಹೇಳಿದ್ದು ಕೇವಲ 200 ವೆಂಟಿಲೇಟರುಗಳನ್ನು ಕೊಡುವುದಷ್ಟೇ ಆಗಿತ್ತು. 135 ಕೋಟಿಗಿಂತಲೂ ಜಾಸ್ತಿ ಜನಸಂಖ್ಯೆಯಿರುವ, 60,000 ಕ್ಕೂ ಹೆಚ್ಚು ಕೊರೊನಾ ರೋಗಿಗಳಿರುವ ಭಾರತಕ್ಕೆ 200 ವೆಂಟಿಲೇಟರುಗಳು ದೊಡ್ಡ ವಿಷಯವೇನೂ ಅಲ್ಲ, ಆದರೆ ಪ್ರಸ್ತುತ ಬಿಕ್ಕಟ್ಟಿನಲ್ಲಿ ಒಂದು ಹುಲ್ಲು ಕಡ್ಡಿ ಕೂಡಾ ದೊಡ್ಡ ವಿಷಯವೇ ಆಗಿರುತ್ತದೆ ಅಂದುಕೊಳ್ಳೋಣ.

ಆದರೆ ಇಲ್ಲಿ ವೆಂಟಿಲೇಟರ್‌ಗಿಂತ ಹೆಚ್ಚಾಗಿ ಅಮೇರಿಕಾದಂತಹ ದೊಡ್ಡಣ್ಣ ಭಾರತವನ್ನು ’ಫ್ರೆಂಡ್’ ಎಂದು ಕರೆದದ್ದನ್ನು ಮಹಾವಿಷಯವಾಗಿ ನೋಡಲಾಯಿತು, ಅಂದರೆ ಆರೋಗ್ಯಕ್ಕಿಂತ ಹೆಚ್ಚು ಇದನ್ನು ರಾಜಕೀಯವಾಗಿಯೆ ಹೆಚ್ಚು ಪ್ರಚಾರ ಪಡೆಯಲು ಬಳಸಲಾಯಿತು. ನಿಜಕ್ಕೂ ಹೇಳಬೇಕೆದಂರೆ ಅಮೇರಿಕಾದಂತಹ ಬಂಡವಾಳಶಾಹಿ ದೇಶ ಯಾವ ಕೊಡುಗೆಯನ್ನೂ ಕೂಡಾ ಪುಕ್ಕಟೆಯಾಗಿ ನೀಡಲ್ಲ, ಅದರ ಪ್ರತಿಯೊಂದೂ ನಡೆಯಲ್ಲೂ ವ್ಯಾಪಾರ ಹಾಗೂ ಲಾಭದ ಉದ್ದೇಶ ಇದ್ದೇ ಇರುತ್ತದೆ.

ನವೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಯಿದೆ ಹಾಗೂ ಟ್ರಂಪ್ ಭಾರತೀಯ ಮೂಲದ ಮತದಾರರನ್ನು ಸೆಳೆಯಲು ಈ ಹಿಂದಿನಿಂಲೂ ಬಹಳ ಕಸರತ್ತು ನಡೆಸುತ್ತಿರುವುದು ಎಲ್ಲರಿಗೂ ತಿಳಿಯದ್ದೇನಲ್ಲ. ಟ್ರಂಪ್ ಘೋಷಿಸಿದ ಈ ದಾನದಲ್ಲೂ ಏನು ಉದ್ಧೇಶವಿದೆಯೆಂದು ನಾವು ಹುಡುಕಲೇ ಬೇಕಾಗುತ್ತದೆ.

ಟ್ರಂಪ್ ದಾನ ಘೋಷಿಸಿದ ಗಂಟೆಗಳ ಅಂತರದಲ್ಲಿ ನಮ್ಮ ದೇಶದ ಪ್ರಧಾನಿಯೂ ಅವರಿಗೆ ಧನ್ಯವಾದ ಅರ್ಪಿಸಿ ಪುನೀತರಾದರು. ಅಮೇರಿಕಾ ಭಾರತ ಸ್ನೇಹ ಇನ್ನೂ ಗಟ್ಟಿಯಾಗಲಿ ಎಂದು ಹಾರೈಸಿದರು. ಇವೆಲ್ಲವೂ ಒಳ್ಳೆಯದೇ, ಆದರೆ ದೇಶದ ವಲಸಿಗರ ನೋವು, ಪಾದಗಳ ರಕ್ತ, ಕಣ್ಣೀರು, ಹತಾಶೆ ನಮ್ಮ ಪ್ರಧಾನಿಯ ಟ್ವಿಟ್ಟರ್ ಖಾತೆಗೆ, ಅವರ ಕಣ್ಣು-ಕಿವಿಗೆ, ಅವರ ಹೃದಯವನ್ನು ಕಲಕಿಲ್ಲ ಹಾಗೂ ತಲುಪಿಲ್ಲ ಎಂದರೆ… ಏನು ಹೇಳುವುದು?

ಪ್ರಧಾನಿಯಾದಿಯಾಗಿ ಮಾಧ್ಯಮಗಳ ಸಹಿತ ಇಷ್ಟೆಲ್ಲ ಪ್ರಚಾರ ಪಡೆದ ಈ ವೆಂಟಿಲೇಟರ್ ಭಾರತವನ್ನು ಮುಂದಿನವಾರ ತಲುಪಬಹುದು. ಆದರೆ ಅಮೇರಿಕಾ ಘೋಷಿಸಿದ 200 ವೆಂಟಿಲೇಟರುಗಳಲ್ಲಿ ಸದ್ಯಕ್ಕೆ ಭಾರತವನ್ನು ತಲುಪಿರುವುದು ಕೇವಲ 50 ಮಾತ್ರ!. ಬಾಕಿ ವೆಂಟಿಲೇಟರುಗಳು ಯಾವತ್ತು ಬರಲಿವೆ ಎಂದು ಅಮೇರಿಕವೆ ಹೇಳಲಿದೆ.

ಸಧ್ಯಕ್ಕೆ ಭಾರತದಲ್ಲಿ ಇರುವ ವೆಂಟಿಲೇಟರುಗಳ ಸಂಖ್ಯೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ 48 ಸಾವಿರ. ಈ ಬರಹ ಬರೆಯುತ್ತಿರುವ ಹೊತ್ತಿಗೆ ಭಾರತದಲ್ಲಿ 1 ಲಕ್ಷದ ಆರು ಸಾವಿಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ 3300 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿವೆ. ಕೊರೊನಾ ತಡೆಯಲು ಯಾವುದೇ ಮಾಹಿತಿಯಿಲ್ಲದೆ ಏಕಾಏಕಿ ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಾದ್ಯಂತ ಹೆದ್ದಾರಿಗಳಲ್ಲೇ ನೂರಾರು ಜೀವಗಳು ಅಸುನೀಗಿವೆ.

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

ಇವೆಲ್ಲವನ್ನೂ ಬಿಡಿ, ದೊಡ್ಡಣ್ಣ ಎಣಿಸಿ ಕೊಂಡಿರುವ ಅಮೆರಿಕಾ ನಮಗೆ 200 ವೆಂಟಿಲೇಟರ್‌ ದಾನ ನೀಡುತ್ತೇವೆ ಎಂದಿದೆ. ಆದರೆ ಅಮೆರಿಕಾದಲ್ಲಿ ಇದುವರೆಗೂ 15 ಲಕ್ಷದ ಹದಿನೈದು ಸಾವಿರ ಕೊರೊನಾ ಸೋಂಕಿತರು ಇದ್ದು, 92 ಸಾವಿರಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾಸೋಂಕಿತರಿರುವ ದೇಶವದು. ಅಲ್ಲಿನ ವೈದ್ಯರು ಅಮೆರಿಕಾದಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ಲವೆಂದು ಹೇಳುತ್ತಿದ್ದಾರೆ. ವರದಿಯೊಂದರ ಪ್ರಕಾರ ಅಮೇರಿಕಾದಲ್ಲಿ ಸಧ್ಯಕ್ಕೆ 9 ಲಕ್ಷ ಜನರಿಗೆ ವೆಂಟಿಲೇಟರುಗಳ ಅಗತ್ಯವಿದೆ. ಆದರೆ ಅಲ್ಲಿರುವ ವೆಂಟಿಲೇಟರುಗಳು 2 ಲಕ್ಷ ಮಾತ್ರ.

ಒಟ್ಟಿನಲ್ಲಿ ತನ್ನ ದೇಶದ ಬಗ್ಗೆ ಯಾವುದೆ ಕಾಳಜಿಯಿಲ್ಲದ ನಾಯಕರಿಬ್ಬರು ಕೊರೊನಾದಂತಹ ಜಾಗತಿಕ ಬಿಕ್ಕಟ್ಟಿನಲ್ಲೂ ಪ್ರಚಾರದಲ್ಲಿರಲು ಹಾಗೂ ಪ್ರಚಾರ ಪಡೆಯಲು ಹವಣಿಸುತ್ತಲೇ ಇದ್ದಾರೆ. ಅದಕ್ಕಾಗಿ ಕೆಲವು ತುತ್ತೂರಿ ಊದುವ ಮಾಧ್ಯಮಗಳು ಕಾಯುತ್ತಲೇ ಇದೆ.


ಓದಿ: ಅತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...