Homeಮುಖಪುಟಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

- Advertisement -
- Advertisement -

ಮೇ 16 ರಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಮ್ಮ ಸ್ನೇಹಿತರಿಗೆ ಅಮೇರಿಕಾದಿಂದ ವೆಂಟಿಲೇಟರುಗಳನ್ನು ದಾನ ಮಾಡುತ್ತೇವೆ ಎಂದು ತಮ್ಮ ಟ್ವಿಟ್ಟರ್‌ ಅಕೌಂಟಿನಿಂದ ಸಂದೇಶವನ್ನು ಹಾಕಿದ್ದರು. ಅಷ್ಟಕ್ಕೆ ದೇಶದಲ್ಲಿ ಭಾರಿ ಸುದ್ದಿಯಾಯಿತು.

ವಾಸ್ತವದಲ್ಲಿ ಅಮೆರಿಕಾ ಹೇಳಿದ್ದು ಕೇವಲ 200 ವೆಂಟಿಲೇಟರುಗಳನ್ನು ಕೊಡುವುದಷ್ಟೇ ಆಗಿತ್ತು. 135 ಕೋಟಿಗಿಂತಲೂ ಜಾಸ್ತಿ ಜನಸಂಖ್ಯೆಯಿರುವ, 60,000 ಕ್ಕೂ ಹೆಚ್ಚು ಕೊರೊನಾ ರೋಗಿಗಳಿರುವ ಭಾರತಕ್ಕೆ 200 ವೆಂಟಿಲೇಟರುಗಳು ದೊಡ್ಡ ವಿಷಯವೇನೂ ಅಲ್ಲ, ಆದರೆ ಪ್ರಸ್ತುತ ಬಿಕ್ಕಟ್ಟಿನಲ್ಲಿ ಒಂದು ಹುಲ್ಲು ಕಡ್ಡಿ ಕೂಡಾ ದೊಡ್ಡ ವಿಷಯವೇ ಆಗಿರುತ್ತದೆ ಅಂದುಕೊಳ್ಳೋಣ.

ಆದರೆ ಇಲ್ಲಿ ವೆಂಟಿಲೇಟರ್‌ಗಿಂತ ಹೆಚ್ಚಾಗಿ ಅಮೇರಿಕಾದಂತಹ ದೊಡ್ಡಣ್ಣ ಭಾರತವನ್ನು ’ಫ್ರೆಂಡ್’ ಎಂದು ಕರೆದದ್ದನ್ನು ಮಹಾವಿಷಯವಾಗಿ ನೋಡಲಾಯಿತು, ಅಂದರೆ ಆರೋಗ್ಯಕ್ಕಿಂತ ಹೆಚ್ಚು ಇದನ್ನು ರಾಜಕೀಯವಾಗಿಯೆ ಹೆಚ್ಚು ಪ್ರಚಾರ ಪಡೆಯಲು ಬಳಸಲಾಯಿತು. ನಿಜಕ್ಕೂ ಹೇಳಬೇಕೆದಂರೆ ಅಮೇರಿಕಾದಂತಹ ಬಂಡವಾಳಶಾಹಿ ದೇಶ ಯಾವ ಕೊಡುಗೆಯನ್ನೂ ಕೂಡಾ ಪುಕ್ಕಟೆಯಾಗಿ ನೀಡಲ್ಲ, ಅದರ ಪ್ರತಿಯೊಂದೂ ನಡೆಯಲ್ಲೂ ವ್ಯಾಪಾರ ಹಾಗೂ ಲಾಭದ ಉದ್ದೇಶ ಇದ್ದೇ ಇರುತ್ತದೆ.

ನವೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಯಿದೆ ಹಾಗೂ ಟ್ರಂಪ್ ಭಾರತೀಯ ಮೂಲದ ಮತದಾರರನ್ನು ಸೆಳೆಯಲು ಈ ಹಿಂದಿನಿಂಲೂ ಬಹಳ ಕಸರತ್ತು ನಡೆಸುತ್ತಿರುವುದು ಎಲ್ಲರಿಗೂ ತಿಳಿಯದ್ದೇನಲ್ಲ. ಟ್ರಂಪ್ ಘೋಷಿಸಿದ ಈ ದಾನದಲ್ಲೂ ಏನು ಉದ್ಧೇಶವಿದೆಯೆಂದು ನಾವು ಹುಡುಕಲೇ ಬೇಕಾಗುತ್ತದೆ.

ಟ್ರಂಪ್ ದಾನ ಘೋಷಿಸಿದ ಗಂಟೆಗಳ ಅಂತರದಲ್ಲಿ ನಮ್ಮ ದೇಶದ ಪ್ರಧಾನಿಯೂ ಅವರಿಗೆ ಧನ್ಯವಾದ ಅರ್ಪಿಸಿ ಪುನೀತರಾದರು. ಅಮೇರಿಕಾ ಭಾರತ ಸ್ನೇಹ ಇನ್ನೂ ಗಟ್ಟಿಯಾಗಲಿ ಎಂದು ಹಾರೈಸಿದರು. ಇವೆಲ್ಲವೂ ಒಳ್ಳೆಯದೇ, ಆದರೆ ದೇಶದ ವಲಸಿಗರ ನೋವು, ಪಾದಗಳ ರಕ್ತ, ಕಣ್ಣೀರು, ಹತಾಶೆ ನಮ್ಮ ಪ್ರಧಾನಿಯ ಟ್ವಿಟ್ಟರ್ ಖಾತೆಗೆ, ಅವರ ಕಣ್ಣು-ಕಿವಿಗೆ, ಅವರ ಹೃದಯವನ್ನು ಕಲಕಿಲ್ಲ ಹಾಗೂ ತಲುಪಿಲ್ಲ ಎಂದರೆ… ಏನು ಹೇಳುವುದು?

ಪ್ರಧಾನಿಯಾದಿಯಾಗಿ ಮಾಧ್ಯಮಗಳ ಸಹಿತ ಇಷ್ಟೆಲ್ಲ ಪ್ರಚಾರ ಪಡೆದ ಈ ವೆಂಟಿಲೇಟರ್ ಭಾರತವನ್ನು ಮುಂದಿನವಾರ ತಲುಪಬಹುದು. ಆದರೆ ಅಮೇರಿಕಾ ಘೋಷಿಸಿದ 200 ವೆಂಟಿಲೇಟರುಗಳಲ್ಲಿ ಸದ್ಯಕ್ಕೆ ಭಾರತವನ್ನು ತಲುಪಿರುವುದು ಕೇವಲ 50 ಮಾತ್ರ!. ಬಾಕಿ ವೆಂಟಿಲೇಟರುಗಳು ಯಾವತ್ತು ಬರಲಿವೆ ಎಂದು ಅಮೇರಿಕವೆ ಹೇಳಲಿದೆ.

ಸಧ್ಯಕ್ಕೆ ಭಾರತದಲ್ಲಿ ಇರುವ ವೆಂಟಿಲೇಟರುಗಳ ಸಂಖ್ಯೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ 48 ಸಾವಿರ. ಈ ಬರಹ ಬರೆಯುತ್ತಿರುವ ಹೊತ್ತಿಗೆ ಭಾರತದಲ್ಲಿ 1 ಲಕ್ಷದ ಆರು ಸಾವಿಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ 3300 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿವೆ. ಕೊರೊನಾ ತಡೆಯಲು ಯಾವುದೇ ಮಾಹಿತಿಯಿಲ್ಲದೆ ಏಕಾಏಕಿ ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಾದ್ಯಂತ ಹೆದ್ದಾರಿಗಳಲ್ಲೇ ನೂರಾರು ಜೀವಗಳು ಅಸುನೀಗಿವೆ.

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

ಇವೆಲ್ಲವನ್ನೂ ಬಿಡಿ, ದೊಡ್ಡಣ್ಣ ಎಣಿಸಿ ಕೊಂಡಿರುವ ಅಮೆರಿಕಾ ನಮಗೆ 200 ವೆಂಟಿಲೇಟರ್‌ ದಾನ ನೀಡುತ್ತೇವೆ ಎಂದಿದೆ. ಆದರೆ ಅಮೆರಿಕಾದಲ್ಲಿ ಇದುವರೆಗೂ 15 ಲಕ್ಷದ ಹದಿನೈದು ಸಾವಿರ ಕೊರೊನಾ ಸೋಂಕಿತರು ಇದ್ದು, 92 ಸಾವಿರಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾಸೋಂಕಿತರಿರುವ ದೇಶವದು. ಅಲ್ಲಿನ ವೈದ್ಯರು ಅಮೆರಿಕಾದಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ಲವೆಂದು ಹೇಳುತ್ತಿದ್ದಾರೆ. ವರದಿಯೊಂದರ ಪ್ರಕಾರ ಅಮೇರಿಕಾದಲ್ಲಿ ಸಧ್ಯಕ್ಕೆ 9 ಲಕ್ಷ ಜನರಿಗೆ ವೆಂಟಿಲೇಟರುಗಳ ಅಗತ್ಯವಿದೆ. ಆದರೆ ಅಲ್ಲಿರುವ ವೆಂಟಿಲೇಟರುಗಳು 2 ಲಕ್ಷ ಮಾತ್ರ.

ಒಟ್ಟಿನಲ್ಲಿ ತನ್ನ ದೇಶದ ಬಗ್ಗೆ ಯಾವುದೆ ಕಾಳಜಿಯಿಲ್ಲದ ನಾಯಕರಿಬ್ಬರು ಕೊರೊನಾದಂತಹ ಜಾಗತಿಕ ಬಿಕ್ಕಟ್ಟಿನಲ್ಲೂ ಪ್ರಚಾರದಲ್ಲಿರಲು ಹಾಗೂ ಪ್ರಚಾರ ಪಡೆಯಲು ಹವಣಿಸುತ್ತಲೇ ಇದ್ದಾರೆ. ಅದಕ್ಕಾಗಿ ಕೆಲವು ತುತ್ತೂರಿ ಊದುವ ಮಾಧ್ಯಮಗಳು ಕಾಯುತ್ತಲೇ ಇದೆ.


ಓದಿ: ಅತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...