Homeಮುಖಪುಟಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

- Advertisement -
- Advertisement -

ಮೇ 16 ರಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಮ್ಮ ಸ್ನೇಹಿತರಿಗೆ ಅಮೇರಿಕಾದಿಂದ ವೆಂಟಿಲೇಟರುಗಳನ್ನು ದಾನ ಮಾಡುತ್ತೇವೆ ಎಂದು ತಮ್ಮ ಟ್ವಿಟ್ಟರ್‌ ಅಕೌಂಟಿನಿಂದ ಸಂದೇಶವನ್ನು ಹಾಕಿದ್ದರು. ಅಷ್ಟಕ್ಕೆ ದೇಶದಲ್ಲಿ ಭಾರಿ ಸುದ್ದಿಯಾಯಿತು.

ವಾಸ್ತವದಲ್ಲಿ ಅಮೆರಿಕಾ ಹೇಳಿದ್ದು ಕೇವಲ 200 ವೆಂಟಿಲೇಟರುಗಳನ್ನು ಕೊಡುವುದಷ್ಟೇ ಆಗಿತ್ತು. 135 ಕೋಟಿಗಿಂತಲೂ ಜಾಸ್ತಿ ಜನಸಂಖ್ಯೆಯಿರುವ, 60,000 ಕ್ಕೂ ಹೆಚ್ಚು ಕೊರೊನಾ ರೋಗಿಗಳಿರುವ ಭಾರತಕ್ಕೆ 200 ವೆಂಟಿಲೇಟರುಗಳು ದೊಡ್ಡ ವಿಷಯವೇನೂ ಅಲ್ಲ, ಆದರೆ ಪ್ರಸ್ತುತ ಬಿಕ್ಕಟ್ಟಿನಲ್ಲಿ ಒಂದು ಹುಲ್ಲು ಕಡ್ಡಿ ಕೂಡಾ ದೊಡ್ಡ ವಿಷಯವೇ ಆಗಿರುತ್ತದೆ ಅಂದುಕೊಳ್ಳೋಣ.

ಆದರೆ ಇಲ್ಲಿ ವೆಂಟಿಲೇಟರ್‌ಗಿಂತ ಹೆಚ್ಚಾಗಿ ಅಮೇರಿಕಾದಂತಹ ದೊಡ್ಡಣ್ಣ ಭಾರತವನ್ನು ’ಫ್ರೆಂಡ್’ ಎಂದು ಕರೆದದ್ದನ್ನು ಮಹಾವಿಷಯವಾಗಿ ನೋಡಲಾಯಿತು, ಅಂದರೆ ಆರೋಗ್ಯಕ್ಕಿಂತ ಹೆಚ್ಚು ಇದನ್ನು ರಾಜಕೀಯವಾಗಿಯೆ ಹೆಚ್ಚು ಪ್ರಚಾರ ಪಡೆಯಲು ಬಳಸಲಾಯಿತು. ನಿಜಕ್ಕೂ ಹೇಳಬೇಕೆದಂರೆ ಅಮೇರಿಕಾದಂತಹ ಬಂಡವಾಳಶಾಹಿ ದೇಶ ಯಾವ ಕೊಡುಗೆಯನ್ನೂ ಕೂಡಾ ಪುಕ್ಕಟೆಯಾಗಿ ನೀಡಲ್ಲ, ಅದರ ಪ್ರತಿಯೊಂದೂ ನಡೆಯಲ್ಲೂ ವ್ಯಾಪಾರ ಹಾಗೂ ಲಾಭದ ಉದ್ದೇಶ ಇದ್ದೇ ಇರುತ್ತದೆ.

ನವೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಯಿದೆ ಹಾಗೂ ಟ್ರಂಪ್ ಭಾರತೀಯ ಮೂಲದ ಮತದಾರರನ್ನು ಸೆಳೆಯಲು ಈ ಹಿಂದಿನಿಂಲೂ ಬಹಳ ಕಸರತ್ತು ನಡೆಸುತ್ತಿರುವುದು ಎಲ್ಲರಿಗೂ ತಿಳಿಯದ್ದೇನಲ್ಲ. ಟ್ರಂಪ್ ಘೋಷಿಸಿದ ಈ ದಾನದಲ್ಲೂ ಏನು ಉದ್ಧೇಶವಿದೆಯೆಂದು ನಾವು ಹುಡುಕಲೇ ಬೇಕಾಗುತ್ತದೆ.

ಟ್ರಂಪ್ ದಾನ ಘೋಷಿಸಿದ ಗಂಟೆಗಳ ಅಂತರದಲ್ಲಿ ನಮ್ಮ ದೇಶದ ಪ್ರಧಾನಿಯೂ ಅವರಿಗೆ ಧನ್ಯವಾದ ಅರ್ಪಿಸಿ ಪುನೀತರಾದರು. ಅಮೇರಿಕಾ ಭಾರತ ಸ್ನೇಹ ಇನ್ನೂ ಗಟ್ಟಿಯಾಗಲಿ ಎಂದು ಹಾರೈಸಿದರು. ಇವೆಲ್ಲವೂ ಒಳ್ಳೆಯದೇ, ಆದರೆ ದೇಶದ ವಲಸಿಗರ ನೋವು, ಪಾದಗಳ ರಕ್ತ, ಕಣ್ಣೀರು, ಹತಾಶೆ ನಮ್ಮ ಪ್ರಧಾನಿಯ ಟ್ವಿಟ್ಟರ್ ಖಾತೆಗೆ, ಅವರ ಕಣ್ಣು-ಕಿವಿಗೆ, ಅವರ ಹೃದಯವನ್ನು ಕಲಕಿಲ್ಲ ಹಾಗೂ ತಲುಪಿಲ್ಲ ಎಂದರೆ… ಏನು ಹೇಳುವುದು?

ಪ್ರಧಾನಿಯಾದಿಯಾಗಿ ಮಾಧ್ಯಮಗಳ ಸಹಿತ ಇಷ್ಟೆಲ್ಲ ಪ್ರಚಾರ ಪಡೆದ ಈ ವೆಂಟಿಲೇಟರ್ ಭಾರತವನ್ನು ಮುಂದಿನವಾರ ತಲುಪಬಹುದು. ಆದರೆ ಅಮೇರಿಕಾ ಘೋಷಿಸಿದ 200 ವೆಂಟಿಲೇಟರುಗಳಲ್ಲಿ ಸದ್ಯಕ್ಕೆ ಭಾರತವನ್ನು ತಲುಪಿರುವುದು ಕೇವಲ 50 ಮಾತ್ರ!. ಬಾಕಿ ವೆಂಟಿಲೇಟರುಗಳು ಯಾವತ್ತು ಬರಲಿವೆ ಎಂದು ಅಮೇರಿಕವೆ ಹೇಳಲಿದೆ.

ಸಧ್ಯಕ್ಕೆ ಭಾರತದಲ್ಲಿ ಇರುವ ವೆಂಟಿಲೇಟರುಗಳ ಸಂಖ್ಯೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ 48 ಸಾವಿರ. ಈ ಬರಹ ಬರೆಯುತ್ತಿರುವ ಹೊತ್ತಿಗೆ ಭಾರತದಲ್ಲಿ 1 ಲಕ್ಷದ ಆರು ಸಾವಿಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ 3300 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿವೆ. ಕೊರೊನಾ ತಡೆಯಲು ಯಾವುದೇ ಮಾಹಿತಿಯಿಲ್ಲದೆ ಏಕಾಏಕಿ ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಾದ್ಯಂತ ಹೆದ್ದಾರಿಗಳಲ್ಲೇ ನೂರಾರು ಜೀವಗಳು ಅಸುನೀಗಿವೆ.

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

ಇವೆಲ್ಲವನ್ನೂ ಬಿಡಿ, ದೊಡ್ಡಣ್ಣ ಎಣಿಸಿ ಕೊಂಡಿರುವ ಅಮೆರಿಕಾ ನಮಗೆ 200 ವೆಂಟಿಲೇಟರ್‌ ದಾನ ನೀಡುತ್ತೇವೆ ಎಂದಿದೆ. ಆದರೆ ಅಮೆರಿಕಾದಲ್ಲಿ ಇದುವರೆಗೂ 15 ಲಕ್ಷದ ಹದಿನೈದು ಸಾವಿರ ಕೊರೊನಾ ಸೋಂಕಿತರು ಇದ್ದು, 92 ಸಾವಿರಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾಸೋಂಕಿತರಿರುವ ದೇಶವದು. ಅಲ್ಲಿನ ವೈದ್ಯರು ಅಮೆರಿಕಾದಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ಲವೆಂದು ಹೇಳುತ್ತಿದ್ದಾರೆ. ವರದಿಯೊಂದರ ಪ್ರಕಾರ ಅಮೇರಿಕಾದಲ್ಲಿ ಸಧ್ಯಕ್ಕೆ 9 ಲಕ್ಷ ಜನರಿಗೆ ವೆಂಟಿಲೇಟರುಗಳ ಅಗತ್ಯವಿದೆ. ಆದರೆ ಅಲ್ಲಿರುವ ವೆಂಟಿಲೇಟರುಗಳು 2 ಲಕ್ಷ ಮಾತ್ರ.

ಒಟ್ಟಿನಲ್ಲಿ ತನ್ನ ದೇಶದ ಬಗ್ಗೆ ಯಾವುದೆ ಕಾಳಜಿಯಿಲ್ಲದ ನಾಯಕರಿಬ್ಬರು ಕೊರೊನಾದಂತಹ ಜಾಗತಿಕ ಬಿಕ್ಕಟ್ಟಿನಲ್ಲೂ ಪ್ರಚಾರದಲ್ಲಿರಲು ಹಾಗೂ ಪ್ರಚಾರ ಪಡೆಯಲು ಹವಣಿಸುತ್ತಲೇ ಇದ್ದಾರೆ. ಅದಕ್ಕಾಗಿ ಕೆಲವು ತುತ್ತೂರಿ ಊದುವ ಮಾಧ್ಯಮಗಳು ಕಾಯುತ್ತಲೇ ಇದೆ.


ಓದಿ: ಅತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...