Homeಮುಖಪುಟಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಟ್ರಂಪ್‌ ಘೋಷಿಸಿದಂತೆ ಅಮೇರಿಕಾದಿಂದ ಭಾರತಕ್ಕೆ ಬಂದ ವೆಂಟಿಲೇಟರ್‌ಗಳೆಷ್ಟು ಗೊತ್ತೆ?

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

- Advertisement -
- Advertisement -

ಮೇ 16 ರಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಮ್ಮ ಸ್ನೇಹಿತರಿಗೆ ಅಮೇರಿಕಾದಿಂದ ವೆಂಟಿಲೇಟರುಗಳನ್ನು ದಾನ ಮಾಡುತ್ತೇವೆ ಎಂದು ತಮ್ಮ ಟ್ವಿಟ್ಟರ್‌ ಅಕೌಂಟಿನಿಂದ ಸಂದೇಶವನ್ನು ಹಾಕಿದ್ದರು. ಅಷ್ಟಕ್ಕೆ ದೇಶದಲ್ಲಿ ಭಾರಿ ಸುದ್ದಿಯಾಯಿತು.

ವಾಸ್ತವದಲ್ಲಿ ಅಮೆರಿಕಾ ಹೇಳಿದ್ದು ಕೇವಲ 200 ವೆಂಟಿಲೇಟರುಗಳನ್ನು ಕೊಡುವುದಷ್ಟೇ ಆಗಿತ್ತು. 135 ಕೋಟಿಗಿಂತಲೂ ಜಾಸ್ತಿ ಜನಸಂಖ್ಯೆಯಿರುವ, 60,000 ಕ್ಕೂ ಹೆಚ್ಚು ಕೊರೊನಾ ರೋಗಿಗಳಿರುವ ಭಾರತಕ್ಕೆ 200 ವೆಂಟಿಲೇಟರುಗಳು ದೊಡ್ಡ ವಿಷಯವೇನೂ ಅಲ್ಲ, ಆದರೆ ಪ್ರಸ್ತುತ ಬಿಕ್ಕಟ್ಟಿನಲ್ಲಿ ಒಂದು ಹುಲ್ಲು ಕಡ್ಡಿ ಕೂಡಾ ದೊಡ್ಡ ವಿಷಯವೇ ಆಗಿರುತ್ತದೆ ಅಂದುಕೊಳ್ಳೋಣ.

ಆದರೆ ಇಲ್ಲಿ ವೆಂಟಿಲೇಟರ್‌ಗಿಂತ ಹೆಚ್ಚಾಗಿ ಅಮೇರಿಕಾದಂತಹ ದೊಡ್ಡಣ್ಣ ಭಾರತವನ್ನು ’ಫ್ರೆಂಡ್’ ಎಂದು ಕರೆದದ್ದನ್ನು ಮಹಾವಿಷಯವಾಗಿ ನೋಡಲಾಯಿತು, ಅಂದರೆ ಆರೋಗ್ಯಕ್ಕಿಂತ ಹೆಚ್ಚು ಇದನ್ನು ರಾಜಕೀಯವಾಗಿಯೆ ಹೆಚ್ಚು ಪ್ರಚಾರ ಪಡೆಯಲು ಬಳಸಲಾಯಿತು. ನಿಜಕ್ಕೂ ಹೇಳಬೇಕೆದಂರೆ ಅಮೇರಿಕಾದಂತಹ ಬಂಡವಾಳಶಾಹಿ ದೇಶ ಯಾವ ಕೊಡುಗೆಯನ್ನೂ ಕೂಡಾ ಪುಕ್ಕಟೆಯಾಗಿ ನೀಡಲ್ಲ, ಅದರ ಪ್ರತಿಯೊಂದೂ ನಡೆಯಲ್ಲೂ ವ್ಯಾಪಾರ ಹಾಗೂ ಲಾಭದ ಉದ್ದೇಶ ಇದ್ದೇ ಇರುತ್ತದೆ.

ನವೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಯಿದೆ ಹಾಗೂ ಟ್ರಂಪ್ ಭಾರತೀಯ ಮೂಲದ ಮತದಾರರನ್ನು ಸೆಳೆಯಲು ಈ ಹಿಂದಿನಿಂಲೂ ಬಹಳ ಕಸರತ್ತು ನಡೆಸುತ್ತಿರುವುದು ಎಲ್ಲರಿಗೂ ತಿಳಿಯದ್ದೇನಲ್ಲ. ಟ್ರಂಪ್ ಘೋಷಿಸಿದ ಈ ದಾನದಲ್ಲೂ ಏನು ಉದ್ಧೇಶವಿದೆಯೆಂದು ನಾವು ಹುಡುಕಲೇ ಬೇಕಾಗುತ್ತದೆ.

ಟ್ರಂಪ್ ದಾನ ಘೋಷಿಸಿದ ಗಂಟೆಗಳ ಅಂತರದಲ್ಲಿ ನಮ್ಮ ದೇಶದ ಪ್ರಧಾನಿಯೂ ಅವರಿಗೆ ಧನ್ಯವಾದ ಅರ್ಪಿಸಿ ಪುನೀತರಾದರು. ಅಮೇರಿಕಾ ಭಾರತ ಸ್ನೇಹ ಇನ್ನೂ ಗಟ್ಟಿಯಾಗಲಿ ಎಂದು ಹಾರೈಸಿದರು. ಇವೆಲ್ಲವೂ ಒಳ್ಳೆಯದೇ, ಆದರೆ ದೇಶದ ವಲಸಿಗರ ನೋವು, ಪಾದಗಳ ರಕ್ತ, ಕಣ್ಣೀರು, ಹತಾಶೆ ನಮ್ಮ ಪ್ರಧಾನಿಯ ಟ್ವಿಟ್ಟರ್ ಖಾತೆಗೆ, ಅವರ ಕಣ್ಣು-ಕಿವಿಗೆ, ಅವರ ಹೃದಯವನ್ನು ಕಲಕಿಲ್ಲ ಹಾಗೂ ತಲುಪಿಲ್ಲ ಎಂದರೆ… ಏನು ಹೇಳುವುದು?

ಪ್ರಧಾನಿಯಾದಿಯಾಗಿ ಮಾಧ್ಯಮಗಳ ಸಹಿತ ಇಷ್ಟೆಲ್ಲ ಪ್ರಚಾರ ಪಡೆದ ಈ ವೆಂಟಿಲೇಟರ್ ಭಾರತವನ್ನು ಮುಂದಿನವಾರ ತಲುಪಬಹುದು. ಆದರೆ ಅಮೇರಿಕಾ ಘೋಷಿಸಿದ 200 ವೆಂಟಿಲೇಟರುಗಳಲ್ಲಿ ಸದ್ಯಕ್ಕೆ ಭಾರತವನ್ನು ತಲುಪಿರುವುದು ಕೇವಲ 50 ಮಾತ್ರ!. ಬಾಕಿ ವೆಂಟಿಲೇಟರುಗಳು ಯಾವತ್ತು ಬರಲಿವೆ ಎಂದು ಅಮೇರಿಕವೆ ಹೇಳಲಿದೆ.

ಸಧ್ಯಕ್ಕೆ ಭಾರತದಲ್ಲಿ ಇರುವ ವೆಂಟಿಲೇಟರುಗಳ ಸಂಖ್ಯೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಸೇರಿ 48 ಸಾವಿರ. ಈ ಬರಹ ಬರೆಯುತ್ತಿರುವ ಹೊತ್ತಿಗೆ ಭಾರತದಲ್ಲಿ 1 ಲಕ್ಷದ ಆರು ಸಾವಿಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ 3300 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸಿವೆ. ಕೊರೊನಾ ತಡೆಯಲು ಯಾವುದೇ ಮಾಹಿತಿಯಿಲ್ಲದೆ ಏಕಾಏಕಿ ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಾದ್ಯಂತ ಹೆದ್ದಾರಿಗಳಲ್ಲೇ ನೂರಾರು ಜೀವಗಳು ಅಸುನೀಗಿವೆ.

ಹಾಸ್ಯಾಸ್ಪದವೆಂದರೆ ಮೇ 12 ರಂದು ’ಆತ್ಮನಿರ್ಭರ ಭಾರತ’ ಎಂದು ಘೋಷಿಸಿ, ಸ್ವಾವಲಂಬಿಗಳಾಗುವ ಬಗ್ಗೆ ಪಾಠ ಹೇಳಿದ ಪ್ರಧಾನಿ ಮೇ 16 ರಂದು ಅಮೆರಿಕ ದಾನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತಾರೆ. ಆದರೆ ದೇಶದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ದೇಶವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಜನರ ಬದುಕು ಬರ್ಭರವಾಗಿರುವುದರ ಬಗ್ಗೆ ನಮ್ಮ ಪ್ರಧಾನಿ ಇನ್ನೂ ಒಂದು ಮಾತೂ ಆಡಿಲ್ಲ.

ಇವೆಲ್ಲವನ್ನೂ ಬಿಡಿ, ದೊಡ್ಡಣ್ಣ ಎಣಿಸಿ ಕೊಂಡಿರುವ ಅಮೆರಿಕಾ ನಮಗೆ 200 ವೆಂಟಿಲೇಟರ್‌ ದಾನ ನೀಡುತ್ತೇವೆ ಎಂದಿದೆ. ಆದರೆ ಅಮೆರಿಕಾದಲ್ಲಿ ಇದುವರೆಗೂ 15 ಲಕ್ಷದ ಹದಿನೈದು ಸಾವಿರ ಕೊರೊನಾ ಸೋಂಕಿತರು ಇದ್ದು, 92 ಸಾವಿರಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾಸೋಂಕಿತರಿರುವ ದೇಶವದು. ಅಲ್ಲಿನ ವೈದ್ಯರು ಅಮೆರಿಕಾದಲ್ಲಿ ಸಾಕಷ್ಟು ವೆಂಟಿಲೇಟರ್ ಇಲ್ಲವೆಂದು ಹೇಳುತ್ತಿದ್ದಾರೆ. ವರದಿಯೊಂದರ ಪ್ರಕಾರ ಅಮೇರಿಕಾದಲ್ಲಿ ಸಧ್ಯಕ್ಕೆ 9 ಲಕ್ಷ ಜನರಿಗೆ ವೆಂಟಿಲೇಟರುಗಳ ಅಗತ್ಯವಿದೆ. ಆದರೆ ಅಲ್ಲಿರುವ ವೆಂಟಿಲೇಟರುಗಳು 2 ಲಕ್ಷ ಮಾತ್ರ.

ಒಟ್ಟಿನಲ್ಲಿ ತನ್ನ ದೇಶದ ಬಗ್ಗೆ ಯಾವುದೆ ಕಾಳಜಿಯಿಲ್ಲದ ನಾಯಕರಿಬ್ಬರು ಕೊರೊನಾದಂತಹ ಜಾಗತಿಕ ಬಿಕ್ಕಟ್ಟಿನಲ್ಲೂ ಪ್ರಚಾರದಲ್ಲಿರಲು ಹಾಗೂ ಪ್ರಚಾರ ಪಡೆಯಲು ಹವಣಿಸುತ್ತಲೇ ಇದ್ದಾರೆ. ಅದಕ್ಕಾಗಿ ಕೆಲವು ತುತ್ತೂರಿ ಊದುವ ಮಾಧ್ಯಮಗಳು ಕಾಯುತ್ತಲೇ ಇದೆ.


ಓದಿ: ಅತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...