Homeಕರ್ನಾಟಕರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

ರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

- Advertisement -
- Advertisement -

ರಾಜ್ಯಾದ್ಯಂತ ಸುಮಾರು 2000 ಸರ್ಕಾರಿ ವೈದ್ಯರ ಹುದ್ದೆಗಳು ಭರ್ತಿಯಾಗದೆ ಹಾಗೆ ಬಿದ್ದಿವೆ ಎಂದು TNIE ವರದಿ ಶನಿವಾರ ಹೇಳಿವೆ. ಇದರಿಂದಾಗಿ ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳು ತೀವ್ರ ಬಿಕ್ಕಟ್ಟಿಗೆ ಸಿಲುಕಿವೆ ಎಂದು ವರದಿ ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷ ವೈದ್ಯಕೀಯ ಅಧಿಕಾರಿಗಳು ಮತ್ತು ಇತರರು ಸೇರಿದಂತೆ 744 ತಜ್ಞರು, 613 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು ಮತ್ತು 558 ವೈದ್ಯಕೀಯ ವೃತ್ತಿಪರರ ಕೊರತೆಯಿದೆ ಎಂದು ಜೂನ್‌ವರೆಗಿನ ಅಂಕಿ ಅಂಶಗಳು ಸೂಚಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ದಂತ ವೈದ್ಯಕೀಯ ವಿಭಾಗದಲ್ಲಿಯೂ ಒಟ್ಟು 425 ಮಂಜೂರಾದ ಹುದ್ದೆಗಳಲ್ಲಿ 25 ಹುದ್ದೆಗಳು ಖಾಲಿ ಇವೆ ಎಂದು ಅವರು ಹೇಳಿದೆ.

ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕೆಲಸ ಮಾಡುತ್ತಿರುವುದಾಗಿ ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಹೇಳಿದ್ದಾಗಿ ವರದಿ ತಿಳಿಸಿದೆ. “ಆದರೆ, ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ನೀತಿಗಳನ್ನು ವ್ಯಾಖ್ಯಾನಿಸುವ ಸ್ಪಷ್ಟ ನೀತಿಗಳ ಕೊರತೆ ಇದಕ್ಕೆ ಸಹಾಯ ಮಾಡುತ್ತಿಲ್ಲ” ಅವರು ವಿಷಾದಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಗಳು ನಡೆಯುತ್ತಿದ್ದರೂ, ಸಾರ್ವಜನಿಕ ವಲಯಕ್ಕೆ ಅಭ್ಯರ್ಥಿಗಳನ್ನು ಆಕರ್ಷಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರು ಸಾಮಾನ್ಯವಾಗಿ ಆರೋಗ್ಯ ಶ್ರುಶ್ರೋಷಕರು ಮತ್ತು ನಿರ್ವಾಹಕರ ದ್ವಿಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ದೆಹಲಿ ಮುಂದಿನ ಮುಖ್ಯಮಂತ್ರಿ ಯಾರು? | ಸಿಸೋಡಿಯಾರತ್ತ ಎಲ್ಲರ ಚಿತ್ತ!

“ಗ್ರಾಮೀಣ ಭಾಗದ ವೈದ್ಯರು ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸುವ ಹೆಚ್ಚುವರಿ ಒತ್ತಡವನ್ನು ಎದುರಿಸುತ್ತಾರೆ. ಇದು ರೋಗಿಗಳ ಆರೈಕೆಯಿಂದ ಕ್ಲಿನಿಕಲ್ ಅಲ್ಲದ ಆಡಳಿತಾತ್ಮಕ ಕಾರ್ಯಗಳಿಗೆ ವೈದ್ಯರ ಗಮನವನ್ನು ತಿರುಗಿಸುತ್ತದೆ. ಇದು ರೋಗಿಗಳ ಆರೈಕೆಯ ಮೇಲೆ ಪರಿಣಾಮ ಬೀರುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರಾಗಿ ಹುದ್ದೆಗಳನ್ನು ವಹಿಸಿಕೊಳ್ಳುವುದನ್ನು ನಿರುತ್ಸಾಹಗೊಳಿಸುತ್ತದೆ. ಜೊತೆಗೆ ಈ ಒತ್ತಡ ಅವರ ವೈದ್ಯಕೀಯ ಕೌಶಲ್ಯಗಳನ್ನು ನಿರಾಕರಿಸುತ್ತದೆ ಎಂದು ಹಲವಾರು ವೈದ್ಯರು ಭಾವಿಸುತ್ತಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ವೈದ್ಯಕೀಯ ವೃತ್ತಿಪರರ ಆಸಕ್ತಿಯ ಕೊರತೆಯ ಕಾರಣಕ್ಕೆ ತಾತ್ಕಾಲಿಕವಾಗಿ ಈ ಅಂತರವನ್ನು ತುಂಬಲು ಅಲ್ಪಾವಧಿಯ ನೇಮಕಾತಿಯನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ನಿರ್ದಿಷ್ಟವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅವರು ಎದುರಿಸುತ್ತಿರುವ ಸವಾಲುಗಳು ಆಡಳಿತಾತ್ಮಕ ಹೊರೆಯನ್ನು ಮೀರಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಸೌಲಭ್ಯಗಳ ಕೊರತೆ, ಕಳಪೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯು ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ವೈದ್ಯರೊಬ್ಬರು ಮಾತನಾಡಿ, ಹಲವು ಗ್ರಾಮೀಣ ಆರೋಗ್ಯ ಕೇಂದ್ರಗಳು ಸೀಮಿತ ಸಂಪನ್ಮೂಲಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ ನೀಡುವುದು ಕಷ್ಟಕರವಾಗಿದೆ. ಸಿಬ್ಬಂದಿ ವಾಸಿಸುವ ಕ್ವಾರ್ಟರ್ಸ್‌ಗಳು ಸಾಮಾನ್ಯವಾಗಿ ಕೆಳದರ್ಜೆಯದ್ದಾಗಿರುತ್ತವೆ. ಮೂಲಭೂತ ಸೌಕರ್ಯಗಳ ಲಭ್ಯತೆ ಮತ್ತು ಅವರ ಮಕ್ಕಳಿಗೆ ಉತ್ತಮ ಶಾಲೆಗಳ ಲಭ್ಯತೆ ಸೀಮಿತವಾಗಿರುತ್ತದೆ. ಈ ಕಾರಣಕ್ಕಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರಲ್ಲಿ ಹಿಂಜರಿಯುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...