Homeಕರ್ನಾಟಕರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

ರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

- Advertisement -
- Advertisement -

ರಾಜ್ಯಾದ್ಯಂತ ಸುಮಾರು 2000 ಸರ್ಕಾರಿ ವೈದ್ಯರ ಹುದ್ದೆಗಳು ಭರ್ತಿಯಾಗದೆ ಹಾಗೆ ಬಿದ್ದಿವೆ ಎಂದು TNIE ವರದಿ ಶನಿವಾರ ಹೇಳಿವೆ. ಇದರಿಂದಾಗಿ ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳು ತೀವ್ರ ಬಿಕ್ಕಟ್ಟಿಗೆ ಸಿಲುಕಿವೆ ಎಂದು ವರದಿ ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷ ವೈದ್ಯಕೀಯ ಅಧಿಕಾರಿಗಳು ಮತ್ತು ಇತರರು ಸೇರಿದಂತೆ 744 ತಜ್ಞರು, 613 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು ಮತ್ತು 558 ವೈದ್ಯಕೀಯ ವೃತ್ತಿಪರರ ಕೊರತೆಯಿದೆ ಎಂದು ಜೂನ್‌ವರೆಗಿನ ಅಂಕಿ ಅಂಶಗಳು ಸೂಚಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ದಂತ ವೈದ್ಯಕೀಯ ವಿಭಾಗದಲ್ಲಿಯೂ ಒಟ್ಟು 425 ಮಂಜೂರಾದ ಹುದ್ದೆಗಳಲ್ಲಿ 25 ಹುದ್ದೆಗಳು ಖಾಲಿ ಇವೆ ಎಂದು ಅವರು ಹೇಳಿದೆ.

ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕೆಲಸ ಮಾಡುತ್ತಿರುವುದಾಗಿ ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಹೇಳಿದ್ದಾಗಿ ವರದಿ ತಿಳಿಸಿದೆ. “ಆದರೆ, ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ನೀತಿಗಳನ್ನು ವ್ಯಾಖ್ಯಾನಿಸುವ ಸ್ಪಷ್ಟ ನೀತಿಗಳ ಕೊರತೆ ಇದಕ್ಕೆ ಸಹಾಯ ಮಾಡುತ್ತಿಲ್ಲ” ಅವರು ವಿಷಾದಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಗಳು ನಡೆಯುತ್ತಿದ್ದರೂ, ಸಾರ್ವಜನಿಕ ವಲಯಕ್ಕೆ ಅಭ್ಯರ್ಥಿಗಳನ್ನು ಆಕರ್ಷಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರು ಸಾಮಾನ್ಯವಾಗಿ ಆರೋಗ್ಯ ಶ್ರುಶ್ರೋಷಕರು ಮತ್ತು ನಿರ್ವಾಹಕರ ದ್ವಿಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ದೆಹಲಿ ಮುಂದಿನ ಮುಖ್ಯಮಂತ್ರಿ ಯಾರು? | ಸಿಸೋಡಿಯಾರತ್ತ ಎಲ್ಲರ ಚಿತ್ತ!

“ಗ್ರಾಮೀಣ ಭಾಗದ ವೈದ್ಯರು ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸುವ ಹೆಚ್ಚುವರಿ ಒತ್ತಡವನ್ನು ಎದುರಿಸುತ್ತಾರೆ. ಇದು ರೋಗಿಗಳ ಆರೈಕೆಯಿಂದ ಕ್ಲಿನಿಕಲ್ ಅಲ್ಲದ ಆಡಳಿತಾತ್ಮಕ ಕಾರ್ಯಗಳಿಗೆ ವೈದ್ಯರ ಗಮನವನ್ನು ತಿರುಗಿಸುತ್ತದೆ. ಇದು ರೋಗಿಗಳ ಆರೈಕೆಯ ಮೇಲೆ ಪರಿಣಾಮ ಬೀರುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರಾಗಿ ಹುದ್ದೆಗಳನ್ನು ವಹಿಸಿಕೊಳ್ಳುವುದನ್ನು ನಿರುತ್ಸಾಹಗೊಳಿಸುತ್ತದೆ. ಜೊತೆಗೆ ಈ ಒತ್ತಡ ಅವರ ವೈದ್ಯಕೀಯ ಕೌಶಲ್ಯಗಳನ್ನು ನಿರಾಕರಿಸುತ್ತದೆ ಎಂದು ಹಲವಾರು ವೈದ್ಯರು ಭಾವಿಸುತ್ತಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ವೈದ್ಯಕೀಯ ವೃತ್ತಿಪರರ ಆಸಕ್ತಿಯ ಕೊರತೆಯ ಕಾರಣಕ್ಕೆ ತಾತ್ಕಾಲಿಕವಾಗಿ ಈ ಅಂತರವನ್ನು ತುಂಬಲು ಅಲ್ಪಾವಧಿಯ ನೇಮಕಾತಿಯನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ನಿರ್ದಿಷ್ಟವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅವರು ಎದುರಿಸುತ್ತಿರುವ ಸವಾಲುಗಳು ಆಡಳಿತಾತ್ಮಕ ಹೊರೆಯನ್ನು ಮೀರಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಸೌಲಭ್ಯಗಳ ಕೊರತೆ, ಕಳಪೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯು ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ವೈದ್ಯರೊಬ್ಬರು ಮಾತನಾಡಿ, ಹಲವು ಗ್ರಾಮೀಣ ಆರೋಗ್ಯ ಕೇಂದ್ರಗಳು ಸೀಮಿತ ಸಂಪನ್ಮೂಲಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ ನೀಡುವುದು ಕಷ್ಟಕರವಾಗಿದೆ. ಸಿಬ್ಬಂದಿ ವಾಸಿಸುವ ಕ್ವಾರ್ಟರ್ಸ್‌ಗಳು ಸಾಮಾನ್ಯವಾಗಿ ಕೆಳದರ್ಜೆಯದ್ದಾಗಿರುತ್ತವೆ. ಮೂಲಭೂತ ಸೌಕರ್ಯಗಳ ಲಭ್ಯತೆ ಮತ್ತು ಅವರ ಮಕ್ಕಳಿಗೆ ಉತ್ತಮ ಶಾಲೆಗಳ ಲಭ್ಯತೆ ಸೀಮಿತವಾಗಿರುತ್ತದೆ. ಈ ಕಾರಣಕ್ಕಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರಲ್ಲಿ ಹಿಂಜರಿಯುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...