Homeಮುಖಪುಟಐಡಿ ಪುರಾವೆ ಇಲ್ಲದೆ 2000ರೂ. ನೋಟುಗಳ ವಿನಿಮಯದ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಐಡಿ ಪುರಾವೆ ಇಲ್ಲದೆ 2000ರೂ. ನೋಟುಗಳ ವಿನಿಮಯದ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಮೇ 19 ರಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಚಲಾವಣೆಯಿಂದ ₹2,000 ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಅದಾದ ಬಳಿಕ ಯಾವುದೇ ಐಡಿ ಪುರಾವೆ ಇಲ್ಲದೆ ಅತ್ಯಧಿಕ ಮೌಲ್ಯದ ಕರೆನ್ಸಿ 2000 ರೂ. ಮೌಲ್ಯದ ನೋಟನ್ನು ಹಿಂಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನುಮತಿ ನೀಡಿತು. ಈ ಅನುಮತಿಯನ್ನು ಪ್ರಶ್ನಿಸಿ ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಮನವಿ ಸಲ್ಲಿಸಿದರು. ಇಂದು (ಸೋಮವಾರ) ದೆಹಲಿ ಹೈಕೋರ್ಟ್ ಅವರ ಮನವಿಯನ್ನು ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು, ಅಶ್ವಿನಿ ಉಪಾಧ್ಯಾಯ  ಸಲ್ಲಿಸಿದ ”ಮನವಿಯನ್ನು ವಜಾಗೊಳಿಸಲಾಗಿದೆ” ಎಂದು  ಹೇಳಿದೆ. ವಿವರವಾದ ಆದೇಶಕ್ಕಾಗಿ ಕಾಯಲಾಗಿದೆ.

ಐಡಿ ಪುರಾವೆಗಳಿಲ್ಲದೆ ಬ್ಯಾಂಕ್ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್‌ಬಿಐ ಅನುಮತಿ ನೀಡಿರುವುದು ಅನಿಯಂತ್ರಿತ ಮತ್ತು ಅಭಾಗಲಬ್ಧ ಎಂದು ಅರ್ಜಿದಾರರು ಕರೆದಿದ್ದಾರೆ. ಇದು ಸಂವಿಧಾನದ 14ನೇ ವಿಧಿಯನ್ನು (ಕಾನೂನಿನ ಮುಂದೆ ಸಮಾನತೆ ಮತ್ತು ಕಾನೂನುಗಳ ಸಮಾನ ರಕ್ಷಣೆ) ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು.

”ಅಂತಹ ದೊಡ್ಡ ಪ್ರಮಾಣದ ಕರೆನ್ಸಿಯು ಕೆಲವೇ ವ್ಯಕ್ತಿಗಳ ಲಾಕರ್‌ಗಳಲ್ಲಿದೆ ಅಥವಾ ಪ್ರತ್ಯೇಕತಾವಾದಿಗಳು, ಭಯೋತ್ಪಾದಕರು, ಮಾವೋವಾದಿಗಳು, ಮಾದಕವಸ್ತು ಕಳ್ಳಸಾಗಣೆದಾರರು, ಗಣಿಗಾರಿಕೆ ಮಾಫಿಯಾಗಳು ಮತ್ತು ಭ್ರಷ್ಟರಿಂದ ಸಂಗ್ರಹಿಸಲ್ಪಟ್ಟಿದೆ” ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2000 ಮುಖಬೆಲೆ ನೋಟ್ ಬ್ಯಾನ್: 20,000ರೂ. ವರೆಗೆ ಹಣ ವಿನಿಮಯಕ್ಕೆ ಗುರುತಿನ ಚೀಟಿ ಅಗತ್ಯವಿಲ್ಲ ಎಂದು ಎಸ್‌ಬಿಐ

ಕಳೆದ ಮಂಗಳವಾರ, ಆರ್‌ಬಿಐ ಈ ಅರ್ಜಿಯನ್ನು ವಿರೋಧಿಸಿತು. 2000 ರೂ. ನೋಟುಗಳ ಹಿಂಪಡೆಯುವಿಕೆಯು ನೋಟು ಬ್ಯಾನ್‌ ಅಲ್ಲ. ಶಾಸನಬದ್ಧವಾಗಿ ಮತ್ತು ಕಾರ್ಯಾಚರಣೆಯ ಅನುಕೂಲಕ್ಕಾಗಿ ಅವುಗಳ ವಿನಿಮಯವನ್ನು ಸಕ್ರಿಯಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಆರ್‌ಬಿಐ ಹೇಳಿದೆ.

ಆರ್‌ಬಿಐ ಪರ ವಾದ ಮಂಡಿಸಿದ ಹಿರಿಯ ವಕೀಲ ಪರಾಗ್ ಪಿ ತ್ರಿಪಾಠಿ, ”ಇಂತಹ ವಿಷಯಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಒತ್ತಿ ಹೇಳಿದರು.

ಆಗ ಉಪಾಧ್ಯಾಯ ಅವರು, ”ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತಾನು ಪ್ರಶ್ನಿಸುತ್ತಿಲ್ಲ ಆದರೆ ಯಾವುದೇ ಚೀಟಿ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯವನ್ನು ವಿರೋಧಿಸಿದ್ದೇನೆ. ಬ್ಯಾಂಕ್ ಖಾತೆಗಳಲ್ಲಿ ಠೇವಣಿಗಳ ಮೂಲಕ ನೋಟುಗಳ ವಿನಿಮಯಕ್ಕೆ ಅವಕಾಶ ನೀಡಬೇಕು” ಎಂದು ನ್ಯಾಯಾಲಯಕ್ಕೆ ಹೇಳಿದರು.

”ಹೆಚ್ಚಿನ ಮೌಲ್ಯದ ಕರೆನ್ಸಿಯಲ್ಲಿ ನಗದು ವಹಿವಾಟು ಭ್ರಷ್ಟಾಚಾರದ ಮುಖ್ಯ ಮೂಲವಾಗಿದೆ. ಭಯೋತ್ಪಾದನೆ, ನಕ್ಸಲಿಸಂ, ಪ್ರತ್ಯೇಕತಾವಾದ, ಮೂಲಭೂತವಾದ, ಜೂಜು, ಕಳ್ಳಸಾಗಣೆ, ಮನಿ ಲಾಂಡರಿಂಗ್, ಅಪಹರಣ, ಸುಲಿಗೆ, ಲಂಚ, ವರದಕ್ಷಿಣೆ ಮುಂತಾದ ಕಾನೂನುಬಾಹಿರ ಚಟುವಟಿಕೆಗಳಿಗೆ ಇದನ್ನು ಬಳಸಲಾಗುತ್ತದೆ” ಎಂದು ಅವರು ಹೇಳಿದರು.

2000 ರೂ. ಕರೆನ್ಸಿ ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡುವುದರಿಂದ ಕಪ್ಪು ಹಣ ಮತ್ತು ಅಸಮಾನ ಆಸ್ತಿ ಹೊಂದಿರುವ ಜನರನ್ನು ಸುಲಭವಾಗಿ ಗುರುತಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮೇ 19ರಂದು ಆರ್‌ಬಿಐ 2,000 ರೂ. ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು ಮತ್ತು ಅವುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತವೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...