Homeಮುಖಪುಟದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 20,000 ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 20,000 ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

- Advertisement -
- Advertisement -

ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಸುಮಾರು 20,000 ಮಂದಿ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.

ಪ್ರಧಾನಿಯವರ ಹೇಳಿಕೆಗಳು ಸಂವಿಧಾನವನ್ನು ಗೌರವಿಸುವ ಲಕ್ಷಾಂತರ ಭಾರತೀಯ ನಾಗರಿಕರ ಭಾವನೆಗಳಿಗೆ ಧಕ್ಕೆ ತಂದಿವೆ. ಈ ಭಾಷಣವು ಅಪಾಯಕಾರಿ ಮತ್ತು ಭಾರತದ ಮುಸ್ಲಿಮರ ಮೇಲೆ ನೇರ ದಾಳಿಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೋದಿಯ ದ್ವೇಷದ ಹೇಳಿಕೆ ಬಗ್ಗೆ ಸಾರ್ವಜನಿಕ ಆಕ್ರೋಶ ಹೆಚ್ಚಾಗುತ್ತಿದ್ದಂತೆ, ಚುನಾವಣಾ ಆಯೋಗವು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಸೋಮವಾರ ಮೂವರು ಸದಸ್ಯರ ಕಾಂಗ್ರೆಸ್ ನಿಯೋಗವು  ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ ಮತ್ತು ಕಾಂಗ್ರೆಸ್‌ಗೆ ಮತ ಹಾಕದಂತೆ ಮತದಾರರ ಮನವೊಲಿಸಲು ಧರ್ಮವನ್ನು ಬಳಸಿದ್ದಕ್ಕೆ ಮತ್ತು ಅವರ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಪ್ರಧಾನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಿಯೋಗದ ನೇತೃತ್ವ ವಹಿಸಿದ್ದ ಅಭಿಷೇಕ್ ಮನು ಸಿಂಘ್ವಿ ಮಾತನಾಡಿ, ಪ್ರಧಾನಿಯವರು ಮುಸ್ಲಿಂ ಸಮುದಾಯವನ್ನು ನುಸುಳುಕೋರರಿಗೆ ಹೋಲಿಸಿದ್ದಾರೆ ಮತ್ತು ತಮ್ಮ ಮಂಗಳಸೂತ್ರದ ಬಗ್ಗೆ ಮಾತನಾಡಿ ಹಿಂದೂ ಧರ್ಮವನ್ನು ಉಲ್ಲೇಖಿಸಿದ್ದಾರೆ. ಪ್ರಧಾನಿ ಮೋದಿ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಸಂವಿಧಾನವನ್ನು ಗುರಿಯಾಗಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...