Homeಕರ್ನಾಟಕ2012ರ ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ; 40 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2012ರ ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ; 40 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿದ್ದ 2012ರ ಮಂಗಳೂರು ‘ಹೋಮ್‌ಸ್ಟೇ ದಾಳಿ’ ಪ್ರಕರಣದ 40 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ಖುಲಾಸೆಗೊಳಿಸಿದೆ.

ಈ ಸಂಬಂಧ ಪೊಲೀಸರು 44 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅವರಲ್ಲಿ ಮೂವರು ಪತ್ರಕರ್ತರ ವಿರುದ್ಧದ ಆರೋಪಗಳನ್ನು ಸರ್ಕಾರವು ಕೈಬಿಡುವಾಗ ವೇಳೆಗಾಘಲೇ ವಿಚಾರಣೆಯ ಸಮಯದಲ್ಲಿ ಮೂವರು ಆರೋಪಿಗಳು ಸಾವನ್ನಪ್ಪಿದರು.

ಜುಲೈ 28, 2012 ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಮ್‌ಸ್ಟೇಯಲ್ಲಿ ಯುವಕ-ಯುವತಿಯರು ಭಾಗವಹಿಸಿದ್ದ ಹುಟ್ಟುಹಬ್ಬದ ಪಾರ್ಟಿಯ ಮೇಲೆ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಹಲ್ಲೆ ನಡೆಸಿದ್ದರು. ತನಿಖೆಯ ನಂತರ ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಯುವಕರು ಮದ್ಯ ಸೇವಿಸಿ ಅಸಭ್ಯ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದುತ್ವವಾದಿ ಸುಭಾಷ್ ಪಡೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿಯ ಸಂದರ್ಭದಲ್ಲಿ, ಹಿಂದೂ ಜಾಗರಣ ವೇದಿಕೆ ಸದಸ್ಯರು ಮಹಿಳೆಯರನ್ನು ವಿವಸ್ತ್ರಗೊಳಿಸಿದರು ಮತ್ತು ಕನಿಷ್ಠ 12 ಜನರ ಮೇಲೆ ಹಲ್ಲೆ ನಡೆಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿಡಿಯೋ ಪತ್ರಕರ್ತರನ್ನು ಕೂಡ ಬಂಧಿಸಲಾಗಿದೆ. ಪತ್ರಕರ್ತರೊಬ್ಬರ ಮೇಲಿನ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂಪಡೆದಿದ್ದು, 2018ರಲ್ಲಿ ಅವರನ್ನು ಖುಲಾಸೆಗೊಳಿಸಿತ್ತು.

ರಾಜ್ಯ ಮಹಿಳಾ ಆಯೋಗವೂ ಘಟನೆಯ ಬಗ್ಗೆ ತನಿಖೆ ನಡೆಸಿ ಅಂದಿನ ಗೃಹ ಸಚಿವ ಆರ್.ಅಶೋಕ ಅವರಿಗೆ ವರದಿ ಸಲ್ಲಿಸಿ, ‘ಪೊಲೀಸ್ ವೈಫಲ್ಯ’ ಮತ್ತು ದಾಳಿಯ ಸ್ವರೂಪದ ಹಿನ್ನೆಲೆಯಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿ ನೇತೃತ್ವದ ತಂಡದಿಂದ ತನಿಖೆಗೆ ಶಿಫಾರಸು ಮಾಡಿದ್ದರು.

ಇದನ್ನೂ ಓದಿ; ಕನ್ನಡಿಗರಿಗೆ ಉದ್ಯೋಗ ಮೀಸಲಾತಿ : ಕರಡು ಮಸೂದೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...