Homeಮುಖಪುಟ2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, 'ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ' ಎಂದು ಹೇಳಿದ್ದಾರೆ.

- Advertisement -
- Advertisement -

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಆದರೆ ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, ‘ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ’ ಎಂದು ಹೇಳಿದ್ದಾರೆ.

₹ 1,000 ಮತ್ತು ₹ 500 ನೋಟುಗಳನ್ನು ನಿಷೇಧಿಸುವ ನವೆಂಬರ್ 2016 ರ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಸರ್ಕಾರದ ಈ ಕ್ರಮವು ಕಾನೂನುಬಾಹಿರವಾಗಿದೆ, ನೂರಾರು ಜನರ ಸಾವಿಗೆ ಕಾರಣವಾಗಿದೆ ಮತ್ತು ದೇಶದ ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ ಎಂದು ವಾದಿಸಿದ್ದರು.

ಪ್ರಧಾನಿ ಮೋದಿ ಅಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, “ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಈ ಕ್ರಮಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನೋಟ್‌ ಬ್ಯಾನ್ ನಡೆದು ಮೂರು ವರ್ಷಗಳ ನಂತರ ಸರಿ ಸುಮಾರು 99.3% ನಷ್ಟು ನೋಟುಗಳು ವಾಪಾಸು ಬ್ಯಾಂಕಿಗೆ ಬಂದಿವೆ ಎಂದು ಆರ್‌ಬಿಐ 2018 ರಲ್ಲಿ ವರದಿ ಮಾಡಿತ್ತು. ಪ್ರಮುಖ ಆರ್ಥಿಕ ತಜ್ಞರು ಒಕ್ಕೂಟ ಸರ್ಕಾರದ ಈ ನೀತಿ ವಿಫಲ ಯತ್ನ ಎಂದು ತಿಳಿಸಿದ್ದರು. ಸರ್ಕಾರದ ಈ ಕ್ರಮದಿಂದಾಗಿ ದೇಶದ ಕೈಗಾರಿಕಾ ಉತ್ಪಾದನೆ ಮತ್ತು ಅದರ GDP ಬೆಳವಣಿಗೆ ದರವನ್ನು ಕಡಿಮೆ ಆಯಿತು. ನೋಟ್‌ ರದ್ದತಿಯಿಂದಲೇ 15 ಲಕ್ಷ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...