Homeಮುಖಪುಟ2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, 'ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ' ಎಂದು ಹೇಳಿದ್ದಾರೆ.

- Advertisement -
- Advertisement -

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಆದರೆ ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, ‘ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ’ ಎಂದು ಹೇಳಿದ್ದಾರೆ.

₹ 1,000 ಮತ್ತು ₹ 500 ನೋಟುಗಳನ್ನು ನಿಷೇಧಿಸುವ ನವೆಂಬರ್ 2016 ರ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಸರ್ಕಾರದ ಈ ಕ್ರಮವು ಕಾನೂನುಬಾಹಿರವಾಗಿದೆ, ನೂರಾರು ಜನರ ಸಾವಿಗೆ ಕಾರಣವಾಗಿದೆ ಮತ್ತು ದೇಶದ ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ ಎಂದು ವಾದಿಸಿದ್ದರು.

ಪ್ರಧಾನಿ ಮೋದಿ ಅಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, “ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಈ ಕ್ರಮಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನೋಟ್‌ ಬ್ಯಾನ್ ನಡೆದು ಮೂರು ವರ್ಷಗಳ ನಂತರ ಸರಿ ಸುಮಾರು 99.3% ನಷ್ಟು ನೋಟುಗಳು ವಾಪಾಸು ಬ್ಯಾಂಕಿಗೆ ಬಂದಿವೆ ಎಂದು ಆರ್‌ಬಿಐ 2018 ರಲ್ಲಿ ವರದಿ ಮಾಡಿತ್ತು. ಪ್ರಮುಖ ಆರ್ಥಿಕ ತಜ್ಞರು ಒಕ್ಕೂಟ ಸರ್ಕಾರದ ಈ ನೀತಿ ವಿಫಲ ಯತ್ನ ಎಂದು ತಿಳಿಸಿದ್ದರು. ಸರ್ಕಾರದ ಈ ಕ್ರಮದಿಂದಾಗಿ ದೇಶದ ಕೈಗಾರಿಕಾ ಉತ್ಪಾದನೆ ಮತ್ತು ಅದರ GDP ಬೆಳವಣಿಗೆ ದರವನ್ನು ಕಡಿಮೆ ಆಯಿತು. ನೋಟ್‌ ರದ್ದತಿಯಿಂದಲೇ 15 ಲಕ್ಷ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...