Homeಮುಖಪುಟ2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, 'ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ' ಎಂದು ಹೇಳಿದ್ದಾರೆ.

- Advertisement -
- Advertisement -

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಆದರೆ ನ್ಯಾಯಮೂರ್ತಿ ಬಿ.ವಿ.ನಾಗರತ್ನರವರು ಭಿನ್ನಮತದ ತೀರ್ಪು ನೀಡಿ, ‘ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತೆ ಹೊರತು ಸರ್ಕಾರದಿಂದ ಅಲ್ಲ, ಹಾಗಾಗಿ ಇದು ಕಾನೂನುಬಾಹಿರ’ ಎಂದು ಹೇಳಿದ್ದಾರೆ.

₹ 1,000 ಮತ್ತು ₹ 500 ನೋಟುಗಳನ್ನು ನಿಷೇಧಿಸುವ ನವೆಂಬರ್ 2016 ರ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಸರ್ಕಾರದ ಈ ಕ್ರಮವು ಕಾನೂನುಬಾಹಿರವಾಗಿದೆ, ನೂರಾರು ಜನರ ಸಾವಿಗೆ ಕಾರಣವಾಗಿದೆ ಮತ್ತು ದೇಶದ ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ ಎಂದು ವಾದಿಸಿದ್ದರು.

ಪ್ರಧಾನಿ ಮೋದಿ ಅಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, “ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಈ ಕ್ರಮಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನೋಟ್‌ ಬ್ಯಾನ್ ನಡೆದು ಮೂರು ವರ್ಷಗಳ ನಂತರ ಸರಿ ಸುಮಾರು 99.3% ನಷ್ಟು ನೋಟುಗಳು ವಾಪಾಸು ಬ್ಯಾಂಕಿಗೆ ಬಂದಿವೆ ಎಂದು ಆರ್‌ಬಿಐ 2018 ರಲ್ಲಿ ವರದಿ ಮಾಡಿತ್ತು. ಪ್ರಮುಖ ಆರ್ಥಿಕ ತಜ್ಞರು ಒಕ್ಕೂಟ ಸರ್ಕಾರದ ಈ ನೀತಿ ವಿಫಲ ಯತ್ನ ಎಂದು ತಿಳಿಸಿದ್ದರು. ಸರ್ಕಾರದ ಈ ಕ್ರಮದಿಂದಾಗಿ ದೇಶದ ಕೈಗಾರಿಕಾ ಉತ್ಪಾದನೆ ಮತ್ತು ಅದರ GDP ಬೆಳವಣಿಗೆ ದರವನ್ನು ಕಡಿಮೆ ಆಯಿತು. ನೋಟ್‌ ರದ್ದತಿಯಿಂದಲೇ 15 ಲಕ್ಷ ಉದ್ಯೋಗಗಳು ನಷ್ಟವಾಗಿವೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...