Homeಆರೋಗ್ಯ2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ನಮ್ಮೆಲ್ಲರಿಗೂ ತಿಳಿದಂತೆ 2019ರ ಚುನಾವಣೆ ಚರ್ಚೆ ದೇಶಪ್ರೇಮ. ಆತಂಕವಾದ, ಮುಂತಾದವುಗಳ ಮೇಲೆಯೇ ಹೆಚ್ಚಾಗಿ ನಡೆಯಿತು. ದೇಶದ ಆರ್ಥಿಕ ಪರಿಸ್ಥಿತಿ ಅಥವಾ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರು, ಸ್ವಚ್ಛ ಗಾಳಿ, ಪರ್ಯಾವರಣ, ರೈತ ಸಂಕಷ್ಟ, ಹಣದುಬ್ಬರ, ಬೆಲೆವಾಸಿ, ಇವುಗಳ ಮೇಲಿನ ಚರ್ಚೆಯನ್ನು ಯಾವ ರಾಜಕೀಯ ಪಕ್ಷವಾಗಲೀ, ನಾಯಕರಾಗಲೀ, ಪ್ರಜೆಗಳಾಗಲೀ ಅವಶ್ಯಕ ಎಂದು ಪರಿಗಣಿಸಲಿಲ್ಲ.

ದೇಶಪ್ರೇಮ ಮುಖ್ಯವೇನೋ ಸರಿ, ಅವಶ್ಯಕತೆ ಬಿದ್ದಲ್ಲಿ ದೇಶಕ್ಕೋಸ್ಕರ ಹೋರಾಡಲು ಅಥವಾ ಪ್ರಾಣತ್ಯಾಗಕ್ಕೂ ಸಿದ್ಧರಾಗಿರಬೇಕು, ಆದರೆ ಪ್ರಾಣತ್ಯಾಗಕ್ಕೆ ಮುಂಚೆ ದೇಶಪ್ರೇಮಿ ಜೀವಂತವಾಗಿರಬೇಕು, ಅಲ್ಲವೇ? 2017ರಲ್ಲಿ ಭಯೋತ್ಪಾದನೆಗೆ ಬಲಿಯಾದವರ ಸಂಖ್ಯೆ 766 ಅಂದರೆ ಆ ವರ್ಷ ಸತ್ತವರ ಒಟ್ಟು ಸಂಖ್ಯೆಯ 0.007%. ಆದರೆ ಆರೋಗ್ಯ ಸಂಬಂಧಿ ಕಾರಣದಿಂದ ಸತ್ತವರ ಸಂಖ್ಯೆ 66 ಲಕ್ಷ ಅಥವಾ ಒಟ್ಟು ಸತ್ತವರ ಸಂಖ್ಯೆಯ 90%. 2017ರಲ್ಲಿ ಸಮಾನಾಂತರವಾಗಿ ಪರಿಶೀಲಿಸಬಲ್ಲ ಸರಕಾರಿ ಅಂಕಿ-ಅಂಶಗಳ ಆಧಾರದ ಮೇಲೆ ಹೇಳುವುದಾದರೆ ನಮ್ಮ ರಕ್ಷಣಾ ಬಜೆಟ್ ನಮ್ಮ ಜನರ ಸ್ವಾಸ್ಥ್ಯ ಮುಂಗಡಪತ್ರದ ದುಪ್ಪಟ್ಟು.

ಸಾರ್ವಜನಿಕ ಸ್ವಾಸ್ಥ್ಯ ಮತ್ತು ಶಿಕ್ಷಣದ ಮೇಲೆ ದೇಶದ ಹೂಡುವಳಿ ಕಡಿಮೆಯಾಗುತ್ತಿದ್ದು ಇದು ನೇರವಾಗಿ ನೇರವಾಗಿ ಔದ್ಯೋಗಿಕ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ. ಭಾರತೀಯರ ಅತ್ತ್ಯುತ್ತಮ ಉತ್ಪನ್ನಕಾರಕ ಸಾಮರ್ಥ್ಯ ಕೇವಲ ಆರೂವರೆ ವರ್ಷ ಮಾತ್ರ ಆದರೆ ಚೀನಾ ದೇಶದ ಜನರ ಸಾಮರ್ಥ್ಯ 20 ವರ್ಷ, ಅಂದರೆ ನಮ್ಮ ಮೂರು ಪಟ್ಟು. ಬ್ರೆಜಿಲ್ ದೇಶದಲ್ಲಿ 16 ವರ್ಷ ಮತ್ತು ಶ್ರೀಲಂಕಾದಲ್ಲಿ 13 ವರ್ಷ ಎಂದರೆ ಆಶ್ಚರ್ಯವಲ್ಲವೇ? 195 ದೇಶಗಳ ಮಾನವ ಬಂಡವಾಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಸ್ಥಾನ 158. ಇದನ್ನು ಸೆಪ್ಟೆಂಬರ್ 2018ರಲ್ಲಿ “ಇಂಡಿಯಾಸ್ಪೆಂಡ್” ಸಂಸ್ಥೆ ಪ್ರಕಟಿಸಿದೆ.

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

2017ರಲ್ಲಿ ಸತ್ತವರು ಒಟ್ಟು 99 ಲಕ್ಷ, ಅದರಲ್ಲಿ ಡಯಾಬಿಟೀಸ್ನಿಂದ ಸತ್ತವರು 2,54,500, ಆತ್ಮಹತ್ಯೆ ಮಾಡಿಕೊಂಡವರು 2,10,800, ಸಾಂಕ್ರಮಿಕ ರೋಗಕ್ಕೆ ತುತ್ತಾದವರು 20 ಲಕ್ಷ, ಸಾಂಕ್ರಮಿಕವಲ್ಲದ ರೋಗದಿಂದ ಸತ್ತವರು 62 ಲಕ್ಷ. ಇವೆಲ್ಲವನ್ನು ಒಟ್ಟುಗೂಡಿಸಿದಲ್ಲಿ ಆತಂಕವಾದಕ್ಕೆ ಬಲಿಯದವರ ಸಂಖ್ಯೆಯ 8,000 ಪಟ್ಟು ಜನ ಆರೋಗ್ಯ ಸಂಬಂಧಿ ಕಾರಣಕ್ಕೆ ಜೀವ ಕಳೆದು ಕೊಂಡಿದ್ದಾರೆ.

ಹಾಗಾದರೆ ನಮ್ಮ ಸರಕಾರದ ಆದ್ಯತೆ ಯಾವ ವಿಷಯಕ್ಕೆ ಇರಬೇಕು, ಚುನಾವಣೆಯ ಸಮಯದಲ್ಲಿ ಚರ್ಚೆ ಯಾವ ವಿಷಯದ ಮೇಲಿರಬೇಕು ಅಥವಾ ಈ ವಿಷಯದಲ್ಲಿ ಮಾತನಾಡುವ ಹಕ್ಕು ಜನಸಾಮಾನ್ಯರಿಗಿದೆಯೇ? ನಮ್ಮ ಮುಖ್ಯ ವಾಹಿನಿ ಮಾಧ್ಯಮ ಇಂತಹ ವಿಷಯದ ಚರ್ಚೆ ಇತ್ತೀಚೆಗೆ ಏರ್ಪಡಿಸಿರುವುದು ನಿಮಗೆ ನೆನಪಿದೆಯೇ ನೀವೇ ಯೋಚಿಸಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...