Homeಆರೋಗ್ಯ2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ನಮ್ಮೆಲ್ಲರಿಗೂ ತಿಳಿದಂತೆ 2019ರ ಚುನಾವಣೆ ಚರ್ಚೆ ದೇಶಪ್ರೇಮ. ಆತಂಕವಾದ, ಮುಂತಾದವುಗಳ ಮೇಲೆಯೇ ಹೆಚ್ಚಾಗಿ ನಡೆಯಿತು. ದೇಶದ ಆರ್ಥಿಕ ಪರಿಸ್ಥಿತಿ ಅಥವಾ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರು, ಸ್ವಚ್ಛ ಗಾಳಿ, ಪರ್ಯಾವರಣ, ರೈತ ಸಂಕಷ್ಟ, ಹಣದುಬ್ಬರ, ಬೆಲೆವಾಸಿ, ಇವುಗಳ ಮೇಲಿನ ಚರ್ಚೆಯನ್ನು ಯಾವ ರಾಜಕೀಯ ಪಕ್ಷವಾಗಲೀ, ನಾಯಕರಾಗಲೀ, ಪ್ರಜೆಗಳಾಗಲೀ ಅವಶ್ಯಕ ಎಂದು ಪರಿಗಣಿಸಲಿಲ್ಲ.

ದೇಶಪ್ರೇಮ ಮುಖ್ಯವೇನೋ ಸರಿ, ಅವಶ್ಯಕತೆ ಬಿದ್ದಲ್ಲಿ ದೇಶಕ್ಕೋಸ್ಕರ ಹೋರಾಡಲು ಅಥವಾ ಪ್ರಾಣತ್ಯಾಗಕ್ಕೂ ಸಿದ್ಧರಾಗಿರಬೇಕು, ಆದರೆ ಪ್ರಾಣತ್ಯಾಗಕ್ಕೆ ಮುಂಚೆ ದೇಶಪ್ರೇಮಿ ಜೀವಂತವಾಗಿರಬೇಕು, ಅಲ್ಲವೇ? 2017ರಲ್ಲಿ ಭಯೋತ್ಪಾದನೆಗೆ ಬಲಿಯಾದವರ ಸಂಖ್ಯೆ 766 ಅಂದರೆ ಆ ವರ್ಷ ಸತ್ತವರ ಒಟ್ಟು ಸಂಖ್ಯೆಯ 0.007%. ಆದರೆ ಆರೋಗ್ಯ ಸಂಬಂಧಿ ಕಾರಣದಿಂದ ಸತ್ತವರ ಸಂಖ್ಯೆ 66 ಲಕ್ಷ ಅಥವಾ ಒಟ್ಟು ಸತ್ತವರ ಸಂಖ್ಯೆಯ 90%. 2017ರಲ್ಲಿ ಸಮಾನಾಂತರವಾಗಿ ಪರಿಶೀಲಿಸಬಲ್ಲ ಸರಕಾರಿ ಅಂಕಿ-ಅಂಶಗಳ ಆಧಾರದ ಮೇಲೆ ಹೇಳುವುದಾದರೆ ನಮ್ಮ ರಕ್ಷಣಾ ಬಜೆಟ್ ನಮ್ಮ ಜನರ ಸ್ವಾಸ್ಥ್ಯ ಮುಂಗಡಪತ್ರದ ದುಪ್ಪಟ್ಟು.

ಸಾರ್ವಜನಿಕ ಸ್ವಾಸ್ಥ್ಯ ಮತ್ತು ಶಿಕ್ಷಣದ ಮೇಲೆ ದೇಶದ ಹೂಡುವಳಿ ಕಡಿಮೆಯಾಗುತ್ತಿದ್ದು ಇದು ನೇರವಾಗಿ ನೇರವಾಗಿ ಔದ್ಯೋಗಿಕ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ. ಭಾರತೀಯರ ಅತ್ತ್ಯುತ್ತಮ ಉತ್ಪನ್ನಕಾರಕ ಸಾಮರ್ಥ್ಯ ಕೇವಲ ಆರೂವರೆ ವರ್ಷ ಮಾತ್ರ ಆದರೆ ಚೀನಾ ದೇಶದ ಜನರ ಸಾಮರ್ಥ್ಯ 20 ವರ್ಷ, ಅಂದರೆ ನಮ್ಮ ಮೂರು ಪಟ್ಟು. ಬ್ರೆಜಿಲ್ ದೇಶದಲ್ಲಿ 16 ವರ್ಷ ಮತ್ತು ಶ್ರೀಲಂಕಾದಲ್ಲಿ 13 ವರ್ಷ ಎಂದರೆ ಆಶ್ಚರ್ಯವಲ್ಲವೇ? 195 ದೇಶಗಳ ಮಾನವ ಬಂಡವಾಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಸ್ಥಾನ 158. ಇದನ್ನು ಸೆಪ್ಟೆಂಬರ್ 2018ರಲ್ಲಿ “ಇಂಡಿಯಾಸ್ಪೆಂಡ್” ಸಂಸ್ಥೆ ಪ್ರಕಟಿಸಿದೆ.

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

2017ರಲ್ಲಿ ಸತ್ತವರು ಒಟ್ಟು 99 ಲಕ್ಷ, ಅದರಲ್ಲಿ ಡಯಾಬಿಟೀಸ್ನಿಂದ ಸತ್ತವರು 2,54,500, ಆತ್ಮಹತ್ಯೆ ಮಾಡಿಕೊಂಡವರು 2,10,800, ಸಾಂಕ್ರಮಿಕ ರೋಗಕ್ಕೆ ತುತ್ತಾದವರು 20 ಲಕ್ಷ, ಸಾಂಕ್ರಮಿಕವಲ್ಲದ ರೋಗದಿಂದ ಸತ್ತವರು 62 ಲಕ್ಷ. ಇವೆಲ್ಲವನ್ನು ಒಟ್ಟುಗೂಡಿಸಿದಲ್ಲಿ ಆತಂಕವಾದಕ್ಕೆ ಬಲಿಯದವರ ಸಂಖ್ಯೆಯ 8,000 ಪಟ್ಟು ಜನ ಆರೋಗ್ಯ ಸಂಬಂಧಿ ಕಾರಣಕ್ಕೆ ಜೀವ ಕಳೆದು ಕೊಂಡಿದ್ದಾರೆ.

ಹಾಗಾದರೆ ನಮ್ಮ ಸರಕಾರದ ಆದ್ಯತೆ ಯಾವ ವಿಷಯಕ್ಕೆ ಇರಬೇಕು, ಚುನಾವಣೆಯ ಸಮಯದಲ್ಲಿ ಚರ್ಚೆ ಯಾವ ವಿಷಯದ ಮೇಲಿರಬೇಕು ಅಥವಾ ಈ ವಿಷಯದಲ್ಲಿ ಮಾತನಾಡುವ ಹಕ್ಕು ಜನಸಾಮಾನ್ಯರಿಗಿದೆಯೇ? ನಮ್ಮ ಮುಖ್ಯ ವಾಹಿನಿ ಮಾಧ್ಯಮ ಇಂತಹ ವಿಷಯದ ಚರ್ಚೆ ಇತ್ತೀಚೆಗೆ ಏರ್ಪಡಿಸಿರುವುದು ನಿಮಗೆ ನೆನಪಿದೆಯೇ ನೀವೇ ಯೋಚಿಸಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...