Homeಆರೋಗ್ಯ2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ನಮ್ಮೆಲ್ಲರಿಗೂ ತಿಳಿದಂತೆ 2019ರ ಚುನಾವಣೆ ಚರ್ಚೆ ದೇಶಪ್ರೇಮ. ಆತಂಕವಾದ, ಮುಂತಾದವುಗಳ ಮೇಲೆಯೇ ಹೆಚ್ಚಾಗಿ ನಡೆಯಿತು. ದೇಶದ ಆರ್ಥಿಕ ಪರಿಸ್ಥಿತಿ ಅಥವಾ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರು, ಸ್ವಚ್ಛ ಗಾಳಿ, ಪರ್ಯಾವರಣ, ರೈತ ಸಂಕಷ್ಟ, ಹಣದುಬ್ಬರ, ಬೆಲೆವಾಸಿ, ಇವುಗಳ ಮೇಲಿನ ಚರ್ಚೆಯನ್ನು ಯಾವ ರಾಜಕೀಯ ಪಕ್ಷವಾಗಲೀ, ನಾಯಕರಾಗಲೀ, ಪ್ರಜೆಗಳಾಗಲೀ ಅವಶ್ಯಕ ಎಂದು ಪರಿಗಣಿಸಲಿಲ್ಲ.

ದೇಶಪ್ರೇಮ ಮುಖ್ಯವೇನೋ ಸರಿ, ಅವಶ್ಯಕತೆ ಬಿದ್ದಲ್ಲಿ ದೇಶಕ್ಕೋಸ್ಕರ ಹೋರಾಡಲು ಅಥವಾ ಪ್ರಾಣತ್ಯಾಗಕ್ಕೂ ಸಿದ್ಧರಾಗಿರಬೇಕು, ಆದರೆ ಪ್ರಾಣತ್ಯಾಗಕ್ಕೆ ಮುಂಚೆ ದೇಶಪ್ರೇಮಿ ಜೀವಂತವಾಗಿರಬೇಕು, ಅಲ್ಲವೇ? 2017ರಲ್ಲಿ ಭಯೋತ್ಪಾದನೆಗೆ ಬಲಿಯಾದವರ ಸಂಖ್ಯೆ 766 ಅಂದರೆ ಆ ವರ್ಷ ಸತ್ತವರ ಒಟ್ಟು ಸಂಖ್ಯೆಯ 0.007%. ಆದರೆ ಆರೋಗ್ಯ ಸಂಬಂಧಿ ಕಾರಣದಿಂದ ಸತ್ತವರ ಸಂಖ್ಯೆ 66 ಲಕ್ಷ ಅಥವಾ ಒಟ್ಟು ಸತ್ತವರ ಸಂಖ್ಯೆಯ 90%. 2017ರಲ್ಲಿ ಸಮಾನಾಂತರವಾಗಿ ಪರಿಶೀಲಿಸಬಲ್ಲ ಸರಕಾರಿ ಅಂಕಿ-ಅಂಶಗಳ ಆಧಾರದ ಮೇಲೆ ಹೇಳುವುದಾದರೆ ನಮ್ಮ ರಕ್ಷಣಾ ಬಜೆಟ್ ನಮ್ಮ ಜನರ ಸ್ವಾಸ್ಥ್ಯ ಮುಂಗಡಪತ್ರದ ದುಪ್ಪಟ್ಟು.

ಸಾರ್ವಜನಿಕ ಸ್ವಾಸ್ಥ್ಯ ಮತ್ತು ಶಿಕ್ಷಣದ ಮೇಲೆ ದೇಶದ ಹೂಡುವಳಿ ಕಡಿಮೆಯಾಗುತ್ತಿದ್ದು ಇದು ನೇರವಾಗಿ ನೇರವಾಗಿ ಔದ್ಯೋಗಿಕ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ. ಭಾರತೀಯರ ಅತ್ತ್ಯುತ್ತಮ ಉತ್ಪನ್ನಕಾರಕ ಸಾಮರ್ಥ್ಯ ಕೇವಲ ಆರೂವರೆ ವರ್ಷ ಮಾತ್ರ ಆದರೆ ಚೀನಾ ದೇಶದ ಜನರ ಸಾಮರ್ಥ್ಯ 20 ವರ್ಷ, ಅಂದರೆ ನಮ್ಮ ಮೂರು ಪಟ್ಟು. ಬ್ರೆಜಿಲ್ ದೇಶದಲ್ಲಿ 16 ವರ್ಷ ಮತ್ತು ಶ್ರೀಲಂಕಾದಲ್ಲಿ 13 ವರ್ಷ ಎಂದರೆ ಆಶ್ಚರ್ಯವಲ್ಲವೇ? 195 ದೇಶಗಳ ಮಾನವ ಬಂಡವಾಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಸ್ಥಾನ 158. ಇದನ್ನು ಸೆಪ್ಟೆಂಬರ್ 2018ರಲ್ಲಿ “ಇಂಡಿಯಾಸ್ಪೆಂಡ್” ಸಂಸ್ಥೆ ಪ್ರಕಟಿಸಿದೆ.

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

2017ರಲ್ಲಿ ಸತ್ತವರು ಒಟ್ಟು 99 ಲಕ್ಷ, ಅದರಲ್ಲಿ ಡಯಾಬಿಟೀಸ್ನಿಂದ ಸತ್ತವರು 2,54,500, ಆತ್ಮಹತ್ಯೆ ಮಾಡಿಕೊಂಡವರು 2,10,800, ಸಾಂಕ್ರಮಿಕ ರೋಗಕ್ಕೆ ತುತ್ತಾದವರು 20 ಲಕ್ಷ, ಸಾಂಕ್ರಮಿಕವಲ್ಲದ ರೋಗದಿಂದ ಸತ್ತವರು 62 ಲಕ್ಷ. ಇವೆಲ್ಲವನ್ನು ಒಟ್ಟುಗೂಡಿಸಿದಲ್ಲಿ ಆತಂಕವಾದಕ್ಕೆ ಬಲಿಯದವರ ಸಂಖ್ಯೆಯ 8,000 ಪಟ್ಟು ಜನ ಆರೋಗ್ಯ ಸಂಬಂಧಿ ಕಾರಣಕ್ಕೆ ಜೀವ ಕಳೆದು ಕೊಂಡಿದ್ದಾರೆ.

ಹಾಗಾದರೆ ನಮ್ಮ ಸರಕಾರದ ಆದ್ಯತೆ ಯಾವ ವಿಷಯಕ್ಕೆ ಇರಬೇಕು, ಚುನಾವಣೆಯ ಸಮಯದಲ್ಲಿ ಚರ್ಚೆ ಯಾವ ವಿಷಯದ ಮೇಲಿರಬೇಕು ಅಥವಾ ಈ ವಿಷಯದಲ್ಲಿ ಮಾತನಾಡುವ ಹಕ್ಕು ಜನಸಾಮಾನ್ಯರಿಗಿದೆಯೇ? ನಮ್ಮ ಮುಖ್ಯ ವಾಹಿನಿ ಮಾಧ್ಯಮ ಇಂತಹ ವಿಷಯದ ಚರ್ಚೆ ಇತ್ತೀಚೆಗೆ ಏರ್ಪಡಿಸಿರುವುದು ನಿಮಗೆ ನೆನಪಿದೆಯೇ ನೀವೇ ಯೋಚಿಸಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...