Homeಆರೋಗ್ಯ2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ನಮ್ಮೆಲ್ಲರಿಗೂ ತಿಳಿದಂತೆ 2019ರ ಚುನಾವಣೆ ಚರ್ಚೆ ದೇಶಪ್ರೇಮ. ಆತಂಕವಾದ, ಮುಂತಾದವುಗಳ ಮೇಲೆಯೇ ಹೆಚ್ಚಾಗಿ ನಡೆಯಿತು. ದೇಶದ ಆರ್ಥಿಕ ಪರಿಸ್ಥಿತಿ ಅಥವಾ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರು, ಸ್ವಚ್ಛ ಗಾಳಿ, ಪರ್ಯಾವರಣ, ರೈತ ಸಂಕಷ್ಟ, ಹಣದುಬ್ಬರ, ಬೆಲೆವಾಸಿ, ಇವುಗಳ ಮೇಲಿನ ಚರ್ಚೆಯನ್ನು ಯಾವ ರಾಜಕೀಯ ಪಕ್ಷವಾಗಲೀ, ನಾಯಕರಾಗಲೀ, ಪ್ರಜೆಗಳಾಗಲೀ ಅವಶ್ಯಕ ಎಂದು ಪರಿಗಣಿಸಲಿಲ್ಲ.

ದೇಶಪ್ರೇಮ ಮುಖ್ಯವೇನೋ ಸರಿ, ಅವಶ್ಯಕತೆ ಬಿದ್ದಲ್ಲಿ ದೇಶಕ್ಕೋಸ್ಕರ ಹೋರಾಡಲು ಅಥವಾ ಪ್ರಾಣತ್ಯಾಗಕ್ಕೂ ಸಿದ್ಧರಾಗಿರಬೇಕು, ಆದರೆ ಪ್ರಾಣತ್ಯಾಗಕ್ಕೆ ಮುಂಚೆ ದೇಶಪ್ರೇಮಿ ಜೀವಂತವಾಗಿರಬೇಕು, ಅಲ್ಲವೇ? 2017ರಲ್ಲಿ ಭಯೋತ್ಪಾದನೆಗೆ ಬಲಿಯಾದವರ ಸಂಖ್ಯೆ 766 ಅಂದರೆ ಆ ವರ್ಷ ಸತ್ತವರ ಒಟ್ಟು ಸಂಖ್ಯೆಯ 0.007%. ಆದರೆ ಆರೋಗ್ಯ ಸಂಬಂಧಿ ಕಾರಣದಿಂದ ಸತ್ತವರ ಸಂಖ್ಯೆ 66 ಲಕ್ಷ ಅಥವಾ ಒಟ್ಟು ಸತ್ತವರ ಸಂಖ್ಯೆಯ 90%. 2017ರಲ್ಲಿ ಸಮಾನಾಂತರವಾಗಿ ಪರಿಶೀಲಿಸಬಲ್ಲ ಸರಕಾರಿ ಅಂಕಿ-ಅಂಶಗಳ ಆಧಾರದ ಮೇಲೆ ಹೇಳುವುದಾದರೆ ನಮ್ಮ ರಕ್ಷಣಾ ಬಜೆಟ್ ನಮ್ಮ ಜನರ ಸ್ವಾಸ್ಥ್ಯ ಮುಂಗಡಪತ್ರದ ದುಪ್ಪಟ್ಟು.

ಸಾರ್ವಜನಿಕ ಸ್ವಾಸ್ಥ್ಯ ಮತ್ತು ಶಿಕ್ಷಣದ ಮೇಲೆ ದೇಶದ ಹೂಡುವಳಿ ಕಡಿಮೆಯಾಗುತ್ತಿದ್ದು ಇದು ನೇರವಾಗಿ ನೇರವಾಗಿ ಔದ್ಯೋಗಿಕ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ. ಭಾರತೀಯರ ಅತ್ತ್ಯುತ್ತಮ ಉತ್ಪನ್ನಕಾರಕ ಸಾಮರ್ಥ್ಯ ಕೇವಲ ಆರೂವರೆ ವರ್ಷ ಮಾತ್ರ ಆದರೆ ಚೀನಾ ದೇಶದ ಜನರ ಸಾಮರ್ಥ್ಯ 20 ವರ್ಷ, ಅಂದರೆ ನಮ್ಮ ಮೂರು ಪಟ್ಟು. ಬ್ರೆಜಿಲ್ ದೇಶದಲ್ಲಿ 16 ವರ್ಷ ಮತ್ತು ಶ್ರೀಲಂಕಾದಲ್ಲಿ 13 ವರ್ಷ ಎಂದರೆ ಆಶ್ಚರ್ಯವಲ್ಲವೇ? 195 ದೇಶಗಳ ಮಾನವ ಬಂಡವಾಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಸ್ಥಾನ 158. ಇದನ್ನು ಸೆಪ್ಟೆಂಬರ್ 2018ರಲ್ಲಿ “ಇಂಡಿಯಾಸ್ಪೆಂಡ್” ಸಂಸ್ಥೆ ಪ್ರಕಟಿಸಿದೆ.

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

2017ರಲ್ಲಿ ಸತ್ತವರು ಒಟ್ಟು 99 ಲಕ್ಷ, ಅದರಲ್ಲಿ ಡಯಾಬಿಟೀಸ್ನಿಂದ ಸತ್ತವರು 2,54,500, ಆತ್ಮಹತ್ಯೆ ಮಾಡಿಕೊಂಡವರು 2,10,800, ಸಾಂಕ್ರಮಿಕ ರೋಗಕ್ಕೆ ತುತ್ತಾದವರು 20 ಲಕ್ಷ, ಸಾಂಕ್ರಮಿಕವಲ್ಲದ ರೋಗದಿಂದ ಸತ್ತವರು 62 ಲಕ್ಷ. ಇವೆಲ್ಲವನ್ನು ಒಟ್ಟುಗೂಡಿಸಿದಲ್ಲಿ ಆತಂಕವಾದಕ್ಕೆ ಬಲಿಯದವರ ಸಂಖ್ಯೆಯ 8,000 ಪಟ್ಟು ಜನ ಆರೋಗ್ಯ ಸಂಬಂಧಿ ಕಾರಣಕ್ಕೆ ಜೀವ ಕಳೆದು ಕೊಂಡಿದ್ದಾರೆ.

ಹಾಗಾದರೆ ನಮ್ಮ ಸರಕಾರದ ಆದ್ಯತೆ ಯಾವ ವಿಷಯಕ್ಕೆ ಇರಬೇಕು, ಚುನಾವಣೆಯ ಸಮಯದಲ್ಲಿ ಚರ್ಚೆ ಯಾವ ವಿಷಯದ ಮೇಲಿರಬೇಕು ಅಥವಾ ಈ ವಿಷಯದಲ್ಲಿ ಮಾತನಾಡುವ ಹಕ್ಕು ಜನಸಾಮಾನ್ಯರಿಗಿದೆಯೇ? ನಮ್ಮ ಮುಖ್ಯ ವಾಹಿನಿ ಮಾಧ್ಯಮ ಇಂತಹ ವಿಷಯದ ಚರ್ಚೆ ಇತ್ತೀಚೆಗೆ ಏರ್ಪಡಿಸಿರುವುದು ನಿಮಗೆ ನೆನಪಿದೆಯೇ ನೀವೇ ಯೋಚಿಸಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...