Homeಆರೋಗ್ಯ2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ನಮ್ಮೆಲ್ಲರಿಗೂ ತಿಳಿದಂತೆ 2019ರ ಚುನಾವಣೆ ಚರ್ಚೆ ದೇಶಪ್ರೇಮ. ಆತಂಕವಾದ, ಮುಂತಾದವುಗಳ ಮೇಲೆಯೇ ಹೆಚ್ಚಾಗಿ ನಡೆಯಿತು. ದೇಶದ ಆರ್ಥಿಕ ಪರಿಸ್ಥಿತಿ ಅಥವಾ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರು, ಸ್ವಚ್ಛ ಗಾಳಿ, ಪರ್ಯಾವರಣ, ರೈತ ಸಂಕಷ್ಟ, ಹಣದುಬ್ಬರ, ಬೆಲೆವಾಸಿ, ಇವುಗಳ ಮೇಲಿನ ಚರ್ಚೆಯನ್ನು ಯಾವ ರಾಜಕೀಯ ಪಕ್ಷವಾಗಲೀ, ನಾಯಕರಾಗಲೀ, ಪ್ರಜೆಗಳಾಗಲೀ ಅವಶ್ಯಕ ಎಂದು ಪರಿಗಣಿಸಲಿಲ್ಲ.

ದೇಶಪ್ರೇಮ ಮುಖ್ಯವೇನೋ ಸರಿ, ಅವಶ್ಯಕತೆ ಬಿದ್ದಲ್ಲಿ ದೇಶಕ್ಕೋಸ್ಕರ ಹೋರಾಡಲು ಅಥವಾ ಪ್ರಾಣತ್ಯಾಗಕ್ಕೂ ಸಿದ್ಧರಾಗಿರಬೇಕು, ಆದರೆ ಪ್ರಾಣತ್ಯಾಗಕ್ಕೆ ಮುಂಚೆ ದೇಶಪ್ರೇಮಿ ಜೀವಂತವಾಗಿರಬೇಕು, ಅಲ್ಲವೇ? 2017ರಲ್ಲಿ ಭಯೋತ್ಪಾದನೆಗೆ ಬಲಿಯಾದವರ ಸಂಖ್ಯೆ 766 ಅಂದರೆ ಆ ವರ್ಷ ಸತ್ತವರ ಒಟ್ಟು ಸಂಖ್ಯೆಯ 0.007%. ಆದರೆ ಆರೋಗ್ಯ ಸಂಬಂಧಿ ಕಾರಣದಿಂದ ಸತ್ತವರ ಸಂಖ್ಯೆ 66 ಲಕ್ಷ ಅಥವಾ ಒಟ್ಟು ಸತ್ತವರ ಸಂಖ್ಯೆಯ 90%. 2017ರಲ್ಲಿ ಸಮಾನಾಂತರವಾಗಿ ಪರಿಶೀಲಿಸಬಲ್ಲ ಸರಕಾರಿ ಅಂಕಿ-ಅಂಶಗಳ ಆಧಾರದ ಮೇಲೆ ಹೇಳುವುದಾದರೆ ನಮ್ಮ ರಕ್ಷಣಾ ಬಜೆಟ್ ನಮ್ಮ ಜನರ ಸ್ವಾಸ್ಥ್ಯ ಮುಂಗಡಪತ್ರದ ದುಪ್ಪಟ್ಟು.

ಸಾರ್ವಜನಿಕ ಸ್ವಾಸ್ಥ್ಯ ಮತ್ತು ಶಿಕ್ಷಣದ ಮೇಲೆ ದೇಶದ ಹೂಡುವಳಿ ಕಡಿಮೆಯಾಗುತ್ತಿದ್ದು ಇದು ನೇರವಾಗಿ ನೇರವಾಗಿ ಔದ್ಯೋಗಿಕ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ. ಭಾರತೀಯರ ಅತ್ತ್ಯುತ್ತಮ ಉತ್ಪನ್ನಕಾರಕ ಸಾಮರ್ಥ್ಯ ಕೇವಲ ಆರೂವರೆ ವರ್ಷ ಮಾತ್ರ ಆದರೆ ಚೀನಾ ದೇಶದ ಜನರ ಸಾಮರ್ಥ್ಯ 20 ವರ್ಷ, ಅಂದರೆ ನಮ್ಮ ಮೂರು ಪಟ್ಟು. ಬ್ರೆಜಿಲ್ ದೇಶದಲ್ಲಿ 16 ವರ್ಷ ಮತ್ತು ಶ್ರೀಲಂಕಾದಲ್ಲಿ 13 ವರ್ಷ ಎಂದರೆ ಆಶ್ಚರ್ಯವಲ್ಲವೇ? 195 ದೇಶಗಳ ಮಾನವ ಬಂಡವಾಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಸ್ಥಾನ 158. ಇದನ್ನು ಸೆಪ್ಟೆಂಬರ್ 2018ರಲ್ಲಿ “ಇಂಡಿಯಾಸ್ಪೆಂಡ್” ಸಂಸ್ಥೆ ಪ್ರಕಟಿಸಿದೆ.

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

2017ರಲ್ಲಿ ಸತ್ತವರು ಒಟ್ಟು 99 ಲಕ್ಷ, ಅದರಲ್ಲಿ ಡಯಾಬಿಟೀಸ್ನಿಂದ ಸತ್ತವರು 2,54,500, ಆತ್ಮಹತ್ಯೆ ಮಾಡಿಕೊಂಡವರು 2,10,800, ಸಾಂಕ್ರಮಿಕ ರೋಗಕ್ಕೆ ತುತ್ತಾದವರು 20 ಲಕ್ಷ, ಸಾಂಕ್ರಮಿಕವಲ್ಲದ ರೋಗದಿಂದ ಸತ್ತವರು 62 ಲಕ್ಷ. ಇವೆಲ್ಲವನ್ನು ಒಟ್ಟುಗೂಡಿಸಿದಲ್ಲಿ ಆತಂಕವಾದಕ್ಕೆ ಬಲಿಯದವರ ಸಂಖ್ಯೆಯ 8,000 ಪಟ್ಟು ಜನ ಆರೋಗ್ಯ ಸಂಬಂಧಿ ಕಾರಣಕ್ಕೆ ಜೀವ ಕಳೆದು ಕೊಂಡಿದ್ದಾರೆ.

ಹಾಗಾದರೆ ನಮ್ಮ ಸರಕಾರದ ಆದ್ಯತೆ ಯಾವ ವಿಷಯಕ್ಕೆ ಇರಬೇಕು, ಚುನಾವಣೆಯ ಸಮಯದಲ್ಲಿ ಚರ್ಚೆ ಯಾವ ವಿಷಯದ ಮೇಲಿರಬೇಕು ಅಥವಾ ಈ ವಿಷಯದಲ್ಲಿ ಮಾತನಾಡುವ ಹಕ್ಕು ಜನಸಾಮಾನ್ಯರಿಗಿದೆಯೇ? ನಮ್ಮ ಮುಖ್ಯ ವಾಹಿನಿ ಮಾಧ್ಯಮ ಇಂತಹ ವಿಷಯದ ಚರ್ಚೆ ಇತ್ತೀಚೆಗೆ ಏರ್ಪಡಿಸಿರುವುದು ನಿಮಗೆ ನೆನಪಿದೆಯೇ ನೀವೇ ಯೋಚಿಸಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...