Homeಆರೋಗ್ಯ2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ನಮ್ಮೆಲ್ಲರಿಗೂ ತಿಳಿದಂತೆ 2019ರ ಚುನಾವಣೆ ಚರ್ಚೆ ದೇಶಪ್ರೇಮ. ಆತಂಕವಾದ, ಮುಂತಾದವುಗಳ ಮೇಲೆಯೇ ಹೆಚ್ಚಾಗಿ ನಡೆಯಿತು. ದೇಶದ ಆರ್ಥಿಕ ಪರಿಸ್ಥಿತಿ ಅಥವಾ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರು, ಸ್ವಚ್ಛ ಗಾಳಿ, ಪರ್ಯಾವರಣ, ರೈತ ಸಂಕಷ್ಟ, ಹಣದುಬ್ಬರ, ಬೆಲೆವಾಸಿ, ಇವುಗಳ ಮೇಲಿನ ಚರ್ಚೆಯನ್ನು ಯಾವ ರಾಜಕೀಯ ಪಕ್ಷವಾಗಲೀ, ನಾಯಕರಾಗಲೀ, ಪ್ರಜೆಗಳಾಗಲೀ ಅವಶ್ಯಕ ಎಂದು ಪರಿಗಣಿಸಲಿಲ್ಲ.

ದೇಶಪ್ರೇಮ ಮುಖ್ಯವೇನೋ ಸರಿ, ಅವಶ್ಯಕತೆ ಬಿದ್ದಲ್ಲಿ ದೇಶಕ್ಕೋಸ್ಕರ ಹೋರಾಡಲು ಅಥವಾ ಪ್ರಾಣತ್ಯಾಗಕ್ಕೂ ಸಿದ್ಧರಾಗಿರಬೇಕು, ಆದರೆ ಪ್ರಾಣತ್ಯಾಗಕ್ಕೆ ಮುಂಚೆ ದೇಶಪ್ರೇಮಿ ಜೀವಂತವಾಗಿರಬೇಕು, ಅಲ್ಲವೇ? 2017ರಲ್ಲಿ ಭಯೋತ್ಪಾದನೆಗೆ ಬಲಿಯಾದವರ ಸಂಖ್ಯೆ 766 ಅಂದರೆ ಆ ವರ್ಷ ಸತ್ತವರ ಒಟ್ಟು ಸಂಖ್ಯೆಯ 0.007%. ಆದರೆ ಆರೋಗ್ಯ ಸಂಬಂಧಿ ಕಾರಣದಿಂದ ಸತ್ತವರ ಸಂಖ್ಯೆ 66 ಲಕ್ಷ ಅಥವಾ ಒಟ್ಟು ಸತ್ತವರ ಸಂಖ್ಯೆಯ 90%. 2017ರಲ್ಲಿ ಸಮಾನಾಂತರವಾಗಿ ಪರಿಶೀಲಿಸಬಲ್ಲ ಸರಕಾರಿ ಅಂಕಿ-ಅಂಶಗಳ ಆಧಾರದ ಮೇಲೆ ಹೇಳುವುದಾದರೆ ನಮ್ಮ ರಕ್ಷಣಾ ಬಜೆಟ್ ನಮ್ಮ ಜನರ ಸ್ವಾಸ್ಥ್ಯ ಮುಂಗಡಪತ್ರದ ದುಪ್ಪಟ್ಟು.

ಸಾರ್ವಜನಿಕ ಸ್ವಾಸ್ಥ್ಯ ಮತ್ತು ಶಿಕ್ಷಣದ ಮೇಲೆ ದೇಶದ ಹೂಡುವಳಿ ಕಡಿಮೆಯಾಗುತ್ತಿದ್ದು ಇದು ನೇರವಾಗಿ ನೇರವಾಗಿ ಔದ್ಯೋಗಿಕ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ. ಭಾರತೀಯರ ಅತ್ತ್ಯುತ್ತಮ ಉತ್ಪನ್ನಕಾರಕ ಸಾಮರ್ಥ್ಯ ಕೇವಲ ಆರೂವರೆ ವರ್ಷ ಮಾತ್ರ ಆದರೆ ಚೀನಾ ದೇಶದ ಜನರ ಸಾಮರ್ಥ್ಯ 20 ವರ್ಷ, ಅಂದರೆ ನಮ್ಮ ಮೂರು ಪಟ್ಟು. ಬ್ರೆಜಿಲ್ ದೇಶದಲ್ಲಿ 16 ವರ್ಷ ಮತ್ತು ಶ್ರೀಲಂಕಾದಲ್ಲಿ 13 ವರ್ಷ ಎಂದರೆ ಆಶ್ಚರ್ಯವಲ್ಲವೇ? 195 ದೇಶಗಳ ಮಾನವ ಬಂಡವಾಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಸ್ಥಾನ 158. ಇದನ್ನು ಸೆಪ್ಟೆಂಬರ್ 2018ರಲ್ಲಿ “ಇಂಡಿಯಾಸ್ಪೆಂಡ್” ಸಂಸ್ಥೆ ಪ್ರಕಟಿಸಿದೆ.

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

2017ರಲ್ಲಿ ಸತ್ತವರು ಒಟ್ಟು 99 ಲಕ್ಷ, ಅದರಲ್ಲಿ ಡಯಾಬಿಟೀಸ್ನಿಂದ ಸತ್ತವರು 2,54,500, ಆತ್ಮಹತ್ಯೆ ಮಾಡಿಕೊಂಡವರು 2,10,800, ಸಾಂಕ್ರಮಿಕ ರೋಗಕ್ಕೆ ತುತ್ತಾದವರು 20 ಲಕ್ಷ, ಸಾಂಕ್ರಮಿಕವಲ್ಲದ ರೋಗದಿಂದ ಸತ್ತವರು 62 ಲಕ್ಷ. ಇವೆಲ್ಲವನ್ನು ಒಟ್ಟುಗೂಡಿಸಿದಲ್ಲಿ ಆತಂಕವಾದಕ್ಕೆ ಬಲಿಯದವರ ಸಂಖ್ಯೆಯ 8,000 ಪಟ್ಟು ಜನ ಆರೋಗ್ಯ ಸಂಬಂಧಿ ಕಾರಣಕ್ಕೆ ಜೀವ ಕಳೆದು ಕೊಂಡಿದ್ದಾರೆ.

ಹಾಗಾದರೆ ನಮ್ಮ ಸರಕಾರದ ಆದ್ಯತೆ ಯಾವ ವಿಷಯಕ್ಕೆ ಇರಬೇಕು, ಚುನಾವಣೆಯ ಸಮಯದಲ್ಲಿ ಚರ್ಚೆ ಯಾವ ವಿಷಯದ ಮೇಲಿರಬೇಕು ಅಥವಾ ಈ ವಿಷಯದಲ್ಲಿ ಮಾತನಾಡುವ ಹಕ್ಕು ಜನಸಾಮಾನ್ಯರಿಗಿದೆಯೇ? ನಮ್ಮ ಮುಖ್ಯ ವಾಹಿನಿ ಮಾಧ್ಯಮ ಇಂತಹ ವಿಷಯದ ಚರ್ಚೆ ಇತ್ತೀಚೆಗೆ ಏರ್ಪಡಿಸಿರುವುದು ನಿಮಗೆ ನೆನಪಿದೆಯೇ ನೀವೇ ಯೋಚಿಸಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...