Homeಆರೋಗ್ಯ2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

2017ರಲ್ಲಿ ಅನಾರೋಗ್ಯದಿಂದ ಸತ್ತವರ ಸಂಖ್ಯೆ 99 ಲಕ್ಷ. ಎಲ್ಲಿದ್ದಾರೆ ದೇಶಪ್ರೇಮಿಗಳು?

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ನಮ್ಮೆಲ್ಲರಿಗೂ ತಿಳಿದಂತೆ 2019ರ ಚುನಾವಣೆ ಚರ್ಚೆ ದೇಶಪ್ರೇಮ. ಆತಂಕವಾದ, ಮುಂತಾದವುಗಳ ಮೇಲೆಯೇ ಹೆಚ್ಚಾಗಿ ನಡೆಯಿತು. ದೇಶದ ಆರ್ಥಿಕ ಪರಿಸ್ಥಿತಿ ಅಥವಾ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರು, ಸ್ವಚ್ಛ ಗಾಳಿ, ಪರ್ಯಾವರಣ, ರೈತ ಸಂಕಷ್ಟ, ಹಣದುಬ್ಬರ, ಬೆಲೆವಾಸಿ, ಇವುಗಳ ಮೇಲಿನ ಚರ್ಚೆಯನ್ನು ಯಾವ ರಾಜಕೀಯ ಪಕ್ಷವಾಗಲೀ, ನಾಯಕರಾಗಲೀ, ಪ್ರಜೆಗಳಾಗಲೀ ಅವಶ್ಯಕ ಎಂದು ಪರಿಗಣಿಸಲಿಲ್ಲ.

ದೇಶಪ್ರೇಮ ಮುಖ್ಯವೇನೋ ಸರಿ, ಅವಶ್ಯಕತೆ ಬಿದ್ದಲ್ಲಿ ದೇಶಕ್ಕೋಸ್ಕರ ಹೋರಾಡಲು ಅಥವಾ ಪ್ರಾಣತ್ಯಾಗಕ್ಕೂ ಸಿದ್ಧರಾಗಿರಬೇಕು, ಆದರೆ ಪ್ರಾಣತ್ಯಾಗಕ್ಕೆ ಮುಂಚೆ ದೇಶಪ್ರೇಮಿ ಜೀವಂತವಾಗಿರಬೇಕು, ಅಲ್ಲವೇ? 2017ರಲ್ಲಿ ಭಯೋತ್ಪಾದನೆಗೆ ಬಲಿಯಾದವರ ಸಂಖ್ಯೆ 766 ಅಂದರೆ ಆ ವರ್ಷ ಸತ್ತವರ ಒಟ್ಟು ಸಂಖ್ಯೆಯ 0.007%. ಆದರೆ ಆರೋಗ್ಯ ಸಂಬಂಧಿ ಕಾರಣದಿಂದ ಸತ್ತವರ ಸಂಖ್ಯೆ 66 ಲಕ್ಷ ಅಥವಾ ಒಟ್ಟು ಸತ್ತವರ ಸಂಖ್ಯೆಯ 90%. 2017ರಲ್ಲಿ ಸಮಾನಾಂತರವಾಗಿ ಪರಿಶೀಲಿಸಬಲ್ಲ ಸರಕಾರಿ ಅಂಕಿ-ಅಂಶಗಳ ಆಧಾರದ ಮೇಲೆ ಹೇಳುವುದಾದರೆ ನಮ್ಮ ರಕ್ಷಣಾ ಬಜೆಟ್ ನಮ್ಮ ಜನರ ಸ್ವಾಸ್ಥ್ಯ ಮುಂಗಡಪತ್ರದ ದುಪ್ಪಟ್ಟು.

ಸಾರ್ವಜನಿಕ ಸ್ವಾಸ್ಥ್ಯ ಮತ್ತು ಶಿಕ್ಷಣದ ಮೇಲೆ ದೇಶದ ಹೂಡುವಳಿ ಕಡಿಮೆಯಾಗುತ್ತಿದ್ದು ಇದು ನೇರವಾಗಿ ನೇರವಾಗಿ ಔದ್ಯೋಗಿಕ ಮತ್ತು ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿದೆ. ಭಾರತೀಯರ ಅತ್ತ್ಯುತ್ತಮ ಉತ್ಪನ್ನಕಾರಕ ಸಾಮರ್ಥ್ಯ ಕೇವಲ ಆರೂವರೆ ವರ್ಷ ಮಾತ್ರ ಆದರೆ ಚೀನಾ ದೇಶದ ಜನರ ಸಾಮರ್ಥ್ಯ 20 ವರ್ಷ, ಅಂದರೆ ನಮ್ಮ ಮೂರು ಪಟ್ಟು. ಬ್ರೆಜಿಲ್ ದೇಶದಲ್ಲಿ 16 ವರ್ಷ ಮತ್ತು ಶ್ರೀಲಂಕಾದಲ್ಲಿ 13 ವರ್ಷ ಎಂದರೆ ಆಶ್ಚರ್ಯವಲ್ಲವೇ? 195 ದೇಶಗಳ ಮಾನವ ಬಂಡವಾಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಸ್ಥಾನ 158. ಇದನ್ನು ಸೆಪ್ಟೆಂಬರ್ 2018ರಲ್ಲಿ “ಇಂಡಿಯಾಸ್ಪೆಂಡ್” ಸಂಸ್ಥೆ ಪ್ರಕಟಿಸಿದೆ.

ಅನಾರೋಗ್ಯಕ್ಕೆ ಬಲಿಯಾದವರ ಸಂಖ್ಯೆ ಭಯೋತ್ಪಾದನೆಗೆ ಸತ್ತವರ ಸಂಖ್ಯೆಗಿಂತಲೂ 8,000 ಪಟ್ಟು ಹೆಚ್ಚು

2017ರಲ್ಲಿ ಸತ್ತವರು ಒಟ್ಟು 99 ಲಕ್ಷ, ಅದರಲ್ಲಿ ಡಯಾಬಿಟೀಸ್ನಿಂದ ಸತ್ತವರು 2,54,500, ಆತ್ಮಹತ್ಯೆ ಮಾಡಿಕೊಂಡವರು 2,10,800, ಸಾಂಕ್ರಮಿಕ ರೋಗಕ್ಕೆ ತುತ್ತಾದವರು 20 ಲಕ್ಷ, ಸಾಂಕ್ರಮಿಕವಲ್ಲದ ರೋಗದಿಂದ ಸತ್ತವರು 62 ಲಕ್ಷ. ಇವೆಲ್ಲವನ್ನು ಒಟ್ಟುಗೂಡಿಸಿದಲ್ಲಿ ಆತಂಕವಾದಕ್ಕೆ ಬಲಿಯದವರ ಸಂಖ್ಯೆಯ 8,000 ಪಟ್ಟು ಜನ ಆರೋಗ್ಯ ಸಂಬಂಧಿ ಕಾರಣಕ್ಕೆ ಜೀವ ಕಳೆದು ಕೊಂಡಿದ್ದಾರೆ.

ಹಾಗಾದರೆ ನಮ್ಮ ಸರಕಾರದ ಆದ್ಯತೆ ಯಾವ ವಿಷಯಕ್ಕೆ ಇರಬೇಕು, ಚುನಾವಣೆಯ ಸಮಯದಲ್ಲಿ ಚರ್ಚೆ ಯಾವ ವಿಷಯದ ಮೇಲಿರಬೇಕು ಅಥವಾ ಈ ವಿಷಯದಲ್ಲಿ ಮಾತನಾಡುವ ಹಕ್ಕು ಜನಸಾಮಾನ್ಯರಿಗಿದೆಯೇ? ನಮ್ಮ ಮುಖ್ಯ ವಾಹಿನಿ ಮಾಧ್ಯಮ ಇಂತಹ ವಿಷಯದ ಚರ್ಚೆ ಇತ್ತೀಚೆಗೆ ಏರ್ಪಡಿಸಿರುವುದು ನಿಮಗೆ ನೆನಪಿದೆಯೇ ನೀವೇ ಯೋಚಿಸಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...