Homeಕರ್ನಾಟಕ2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

- Advertisement -
- Advertisement -

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ರಾಜ್ಯದ ಮತದಾರರು ಸ್ಪಷ್ಟ ಬಹುಮತವನ್ನು ನೀಡಿರಲಿಲ್ಲ. 224 ಸಂಖ್ಯಾಬಲದ ವಿಧಾನಸಭೆಯಲ್ಲಿ 104 ಶಾಸಕರನ್ನು ಹೊಂದಿದ್ದ ಬಿಜೆಪಿಯು ಏಕೈಕ ದೊಡ್ಡ ಪಕ್ಷವಾಗಿ ಹೊಮ್ಮಿತು. ಸರ್ಕಾರ ರಚಿಸಲು ಬಿಜೆಪಿಯನ್ನು ಆಹ್ವಾನಿಸಲಾಯಿತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್‌ ತ್ವರಿತವಾಗಿ ಒಗ್ಗೂಡಿ ಸರ್ಕಾರ ರಚಿಸಿದವು.

ಕಾಂಗ್ರೆಸ್-ಜೆಡಿಎಸ್‌ನ 17 ಶಾಸಕರು ಬಂಡಾಯವೆದ್ದು ಆಪರೇಷನ್ ಕಮಲಕ್ಕೆ ಒಳಗಾಗಿ ಬಾಂಬೆ ಸೇರಿದ್ದರಿಂದ ಒಂದು ವರ್ಷದೊಳಗೆ ಸರ್ಕಾರ ಪಥನವಾಯಿತು. ಬಿಜೆಪಿ ಮತ್ತೆ ಸರ್ಕಾರವನ್ನು ರಚಿಸಿತು. ಕರ್ನಾಟಕ ಬಿಜೆಪಿಯ ಕಟ್ಟಾಳು ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರು. ಆದರೆ ಜುಲೈ 26, 2021 ರಂದು ರಾಜೀನಾಮೆ ನೀಡಿದರು. ಅವರ ನಂತರದಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಆದರು.

2018ರ ಎಕ್ಸಿಟ್ ಪೋಲ್‌ಗಳು ಏನು ಹೇಳಿದ್ದವು?

ಆರು ರಾಷ್ಟ್ರೀಯ ಟೆಲಿವಿಷನ್ ಚಾನೆಲ್‌ಗಳು ಮತ್ತು ಒಂದು ಪ್ರಾದೇಶಿಕ ಚಾನೆಲ್ ಪ್ರಸಾರ ಮಾಡಿದ ಎಂಟು ಪ್ರಮುಖ ಎಕ್ಸಿಟ್ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು. ಎಂಟರಲ್ಲಿ ಏಳು ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರದ ಕುರಿತು ಸುಳಿವು ನೀಡಿದ್ದವು. ಬಿಜೆಪಿ ಅಥವಾ ಕಾಂಗ್ರೆಸ್ ಬಹುಮತವನ್ನು ಪಡೆಯಲಿಲ್ಲ. ಜೆಡಿಎಸ್ ಕಿಂಗ್‌ಮೇಕರ್ ಆಗಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ತಿಳಿಸಿದ್ದವು. ಹಾಗೆಯೇ ಆಯಿತು. ಜೆಡಿಎಸ್‌ 20 ರಿಂದ 40 ಸ್ಥಾನಗಳನ್ನು ಪಡೆಯುತ್ತದೆ ಎಂದು ಸಮೀಕ್ಷೆಗಳು ಸೂಚನೆ ನೀಡಿದ್ದವು.

ವಿಧಾನಸಭೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಲಿದೆ ಎಂದು ಎಬಿಪಿ-ಸಿ ವೋಟರ್, ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್, ರಿಪಬ್ಲಿಕ್-ಜನ್ ಕಿ ಬಾತ್ ಮತ್ತು ನ್ಯೂಸ್ ನೇಷನ್ ಎಕ್ಸಿಟ್ ಪೋಲ್‌ಗಳು  ಭವಿಷ್ಯ ನುಡಿದಿದ್ದವು. ಪ್ರಾದೇಶಿಕ ಮಾಧ್ಯಮವಾದ ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಇದನ್ನೇ ಹೇಳಿತ್ತು.

ಇದನ್ನೂಓದಿರಿ: ಕರ್ನಾಟಕ ಚುನಾವಣೆ ಎಕ್ಸಿಟ್ ಪೋಲ್: ಮತದಾನೋತ್ತರ ಸಮೀಕ್ಷೆಗಳು ಹೀಗೆ ಹೇಳುತ್ತಿವೆ

ಟೈಮ್ಸ್ ನೌ ಎರಡು ಎಕ್ಸಿಟ್ ಪೋಲ್‌ಗಳನ್ನು ಪ್ರಸಾರ ಮಾಡಿತ್ತು. ಟೈಮ್ಸ್ ನೌ-ವಿಎಂಆರ್ ಸಮೀಕ್ಷೆ ಕಾಂಗ್ರೆಸ್‌ಗೆ ಅಲ್ಪ ಮುನ್ನಡೆ ನೀಡಿತ್ತು; ಟೈಮ್ಸ್ ನೌ-ಟುಡೇಸ್ ಚಾಣಕ್ಯ- ಬಿಜೆಪಿಗೆ ಸ್ಪಷ್ಟ ಬಹುಮತವನ್ನು ನೀಡಿತ್ತು. ಇಂಡಿಯಾ ಟುಡೆ-ಆಕ್ಸಿಸ್ ಎಕ್ಸಿಟ್ ಪೋಲ್- ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಲಿದೆ ಎಂದಿತ್ತು.

ಎಬಿಪಿ-ಸಿ ವೋಟರ್ ಸಮೀಕ್ಷೆಯು ಬಿಜೆಪಿಗೆ 104-116 ಸ್ಥಾನಗಳನ್ನು ನೀಡಿತ್ತು. ನಂತರ ಕಾಂಗ್ರೆಸ್‌ಗೆ 83-94 ಮತ್ತು ಜೆಡಿಎಸ್‌ಗೆ 20-29 ಸ್ಥಾನಗಳು ಬರಲಿವೆ ಎಂದಿತ್ತು. ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್ ಬಿಜೆಪಿಗೆ 102-110, ಕಾಂಗ್ರೆಸ್‌ಗೆ 72-78, ಜೆಡಿಎಸ್‌ಗೆ 35-39 ಮತ್ತು ಇತರರಿಗೆ 3-5 ಸ್ಥಾನಗಳನ್ನು ನೀಡಿತ್ತು. ರಿಪಬ್ಲಿಕ್-ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 37 ಮತ್ತು ಇತರೆ 3 ಸ್ಥಾನ ಪಡೆದಿದ್ದವು.

ಟೈಮ್ಸ್ ನೌ-ಚಾಣಕ್ಯ ಸಮೀಕ್ಷೆಯು ಬಿಜೆಪಿ 120 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿತ್ತು. ಇದು ಯಾವುದೇ ಪಕ್ಷಕ್ಕೆ ಬಹುಮತದ ಮುನ್ಸೂಚನೆ ನೀಡಿದ ಏಕೈಕ ಸಮೀಕ್ಷೆಯಾಗಿತ್ತು. ಟೈಮ್ಸ್ ನೌ-ಚಾಣಕ್ಯದವರು ಕಾಂಗ್ರೆಸ್‌ಗೆ 73, ಜೆಡಿಎಸ್‌ಗೆ 26 ಮತ್ತು ಇತರರಿಗೆ 3 ಸ್ಥಾನಗಳನ್ನು ನೀಡಿದ್ದರು. ಟೈಮ್ಸ್ ನೌ-ವಿಎಂಆರ್ ಪ್ರಕಾರ, ಕಾಂಗ್ರೆಸ್ 97 ಸ್ಥಾನಗಳನ್ನು, ಬಿಜೆಪಿ 94 ಸ್ಥಾನಗಳನ್ನು, ಜೆಡಿಎಸ್ 28 ಸ್ಥಾನಗಳನ್ನು ಮತ್ತು ಇತರರು 3 ಸ್ಥಾನಗಳು ಪಡೆಯಲಿದ್ದವು.

ಇದನ್ನು ಓದಿರಿ: ಕುಸುಮಾ ವಿರುದ್ಧ ಪ್ರಚಾರಕ್ಕೆ 80 ಲಕ್ಷ ಬೇಡಿಕೆ ಇಟ್ಟ ಡಿ.ಕೆ.ರವಿ ತಾಯಿ?; ವಿಡಿಯೊ ವೈರಲ್

ನ್ಯೂಸ್ ನೇಷನ್ ಸಮೀಕ್ಷೆಯು ಬಿಜೆಪಿಗೆ 99-108, ಕಾಂಗ್ರೆಸ್‌ಗೆ 75-84, ಜೆಡಿಎಸ್‌ಗೆ 31-40 ಮತ್ತು ಇತರರಿಗೆ 3-7 ಸ್ಥಾನ ನೀಡಿತ್ತು. ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಬಿಜೆಪಿಗೆ 103-107, ಕಾಂಗ್ರೆಸ್‌ಗೆ 76-80, ಜೆಡಿಎಸ್‌ಗೆ 31-35 ಮತ್ತು ಇತರರಿಗೆ 4-8 ಸ್ಥಾನಗಳನ್ನು ನೀಡಲಾಗಿತ್ತು.

ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆಯು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುನ್ಸೂಚನೆ ನೀಡಿತ್ತು. ಆಡಳಿತರೂಢ ಕಾಂಗ್ರೆಸ್‌ 106 ರಿಂದ 118 ಸ್ಥಾನಗಳನ್ನು ಪಡೆಯಲಿದೆ ಎಂದಿತ್ತು. ಬಿಜೆಪಿ 79-92, ಜೆಡಿಎಸ್‌ 22-30 ಮತ್ತು ಇತರರು 1-4 ಗಳಿಸುತ್ತಾರೆ ಎಂದಿತ್ತು.

ಬಹುತೇಕ ಎಕ್ಸಿಟ್‌ ಪೋಲ್‌ಗಳು ನುಡಿದಂತೆ ಬಿಜೆಪಿ 104 ಸ್ಥಾನಗಳನ್ನು ಪಡೆದು ಬಹುದೊಡ್ಡ ಪಕ್ಷವಾಗಿ ಹೊಮ್ಮಿತು. ಕಾಂಗ್ರೆಸ್ 80, ಜೆಡಿಎಸ್ 38 (ಚುನಾವಣಾ ಪೂರ್ವ ಒಪ್ಪಂದ ಮಾಡಿಕೊಂಡಿದ್ದ ಬಿಎಸ್‌ಪಿಯ 1 ಸ್ಥಾನ ಸೇರಿ) ಕ್ಷೇತ್ರಗಳಲ್ಲಿ ಗೆದ್ದಿದ್ದವು.

2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಮತ್ತು ಜೆಡಿಎಸ್ ತಲಾ 40 ಸ್ಥಾನಗಳನ್ನು ಪಡೆದರೆ, ಯಡಿಯೂರಪ್ಪ ಅವರ ಅಂದಿನ ಕರ್ನಾಟಕ ಜನತಾ ಪಕ್ಷ (ಕೆಜೆಪಿ) 6 ಸ್ಥಾನಗಳನ್ನು ಮತ್ತು ಬಿ ಶ್ರೀರಾಮುಲು ಅವರ ಬಡವರ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ 4 ಸ್ಥಾನಗಳನ್ನು ಪಡೆದುಕೊಂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...